Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


Team Udayavani, Jul 4, 2024, 6:56 PM IST

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಶಾಸಕ ಹರತಾಳು ಹಾಲಪ್ಪ ಕೊಡುಗೆ ಶೂನ್ಯವಾಗಿದೆ. ಕಾಗೋಡು ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ ಅವಧಿ ಮುಗಿಸಿದ್ದಾರೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಲ್ಲಿನ ಎಪಿಎಂಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ಗ್ರಂಥಾಲಯ ಕಟ್ಟಡ ಹಾಗೂ ಸಬ್‌ಜೈಲ್ ಕಾಂಪೌಂಡ್ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾಲೂಕು ಕಚೇರಿ, ಮೀನು ಮಾರುಕಟ್ಟೆ, ತಾಯಿಮಗು ಆಸ್ಪತ್ರೆ, ಎಪಿಎಂಸಿ, ಸಬ್‌ಜೈಲ್ ಹೀಗೆ ಎಲ್ಲಾ ಕಾಮಗಾರಿಗಳಿಗೂ ನಾನು ಶಾಸಕನಾದ ಮೇಲೆ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ. ಬಿಜೆಪಿಗರು ತಮ್ಮ ಶಾಸಕರು ಅನುದಾನ ತಂದಿದ್ದರು ಎಂದು ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಮಗಾರಿ ಮಂಜೂರು ಮಾಡಿಸಿರುವುದೇ ಅಭಿವೃದ್ಧಿ ಅಲ್ಲ. ಹಣ ಬಿಡುಗಡೆ ಮಾಡಿಸಿ ಕಾಮಗಾರಿ ಪೂರ್ಣಗೊಳಿಸಿದಾಗ ಅಭಿವೃದ್ಧಿ ಎನಿಸಿಕೊಳ್ಳುತ್ತದೆ.

ಜೋಗ ಅಭಿವೃದ್ಧಿಗೆ ಯಡಿಯೂರಪ್ಪ 180 ಕೋಟಿ ರೂ. ವೆಚ್ಚದಲ್ಲಿ ಚಾಲನೆ ನೀಡಿದರು. ಆದರೆ ಹಣ ಕೊಟ್ಟಿಲ್ಲ. 72 ಕೋಟಿ ರೂ. ನಮ್ಮ ಸರ್ಕಾರ ಕೊಟ್ಟಿದೆ. ಜೋಗ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ, ರಾಘವೇಂದ್ರ, ಹಾಲಪ್ಪ ಕೊಡುಗೆ ಏನೂ ಇಲ್ಲ. ನಮ್ಮ ಸರ್ಕಾರ ಹಣ ನೀಡಿದೆ.

ಸದ್ಯದಲ್ಲಿಯೇ ಜೋಗವನ್ನು ವಿಶ್ವದರ್ಜೆ ಪ್ರವಾಸಿ ತಾಣವಾಗಿಸುವ ಯೋಜನೆ ರೂಪಿಸಲಾಗಿದೆ. ರೈನ್‌ಡ್ಯಾನ್ಸ್, ಈಜುಕೊಳ, ಜಿಪ್‌ವೇ, ಸ್ಕೂಬಾ ಡ್ರೈವ್, ರೋಪ್‌ವೇ ಸೇರಿದಂತೆ ಪ್ರವಾಸಿ ಆಕರ್ಷಕ ಸೌಲಭ್ಯ ನೀಡಲಾಗುತ್ತದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಮಲ ಮಾದರಿಯ ಪ್ರವಾಸಿದ್ವಾರ ನಿರ್ಮಿಸಲು ಚಿಂತನೆ ನಡೆಸಲಾಗಿತ್ತು. ಅದನ್ನು ತೆಗೆದು ಸುಂದರವಾದ ಕಮಾನು ರೂಪಿಸಲಾಗುತ್ತಿದೆ ಎಂದರು.

2008-09ರಲ್ಲಿ ನಾನು ಶಾಸಕನಾಗಿದ್ದಾಗ ಒಳಚರಂಡಿ ಕಾಮಗಾರಿಗೆ 70 ಕೋಟಿ ರೂ. ಅನುದಾನ ತಂದಿದ್ದೆ. ನಂತರ ಯಾರೂ ಒಳಚರಂಡಿ ಕಾಮಗಾರಿ ಬಗ್ಗೆ ಆಸಕ್ತಿ ವಹಿಸಿಲ್ಲ. ಮತ್ತೆ ಸರ್ಕಾರದ ಮೇಲೆ ಒತ್ತಡ ಹೇರಿ 34ಕೋಟಿ ರೂ. ಮಂಜೂರು ಮಾಡಿಸಲಾಗಿದೆ. ಇದರ ಜೊತೆಗೆ ಜೋಗದ ಯೂತ್ ಹಾಸ್ಟೆಲ್ ಅಭಿವೃದ್ಧಿಗೆ 90 ಲಕ್ಷ ರೂ. ಮಂಜೂರಾಗಿದೆ.

ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಮಂಜೂರಾಗಿದ್ದು ಜಾಗ ಗುರುತಿಸಲಾಗುತ್ತಿದೆ. ಜೈಲ್ ಗೋಡೆ ನಿರ್ಮಾಣಕ್ಕೆ 1.30 ಕೋಟಿ ರೂ., ಎಪಿಎಂಸಿ ಪ್ರಾಂಗಣದಲ್ಲಿ ರಸ್ತೆ ಚರಂಡಿ ನಿರ್ಮಾಣಕ್ಕೆ 2.50 ಕೋಟಿ ರೂ., ಗ್ರಂಥಾಲಯ ಅಭಿವೃದ್ಧಿಗೆ 50 ಲಕ್ಷ ರೂ., ಮೀನು ಮಾರುಕಟ್ಟೆ ಅಭಿವೃದ್ಧಿಗೆ 1.20 ಕೋಟಿ ರೂ., ಈಜುಕೊಳ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರಾಗಿದೆ.

ಬಿಜೆಪಿಯವರು ಹೇಳುವಂತೆ ಈ ಯಾವ ಅನುದಾನವೂ ಹಿಂದಿನ ಶಾಸಕರ ಅವಧಿಯಲ್ಲಿ ಮಂಜೂರಾಗಿದ್ದಲ್ಲ. ಅನುದಾನದ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿತಪ್ಪಿಸುವ ಕೆಲಸ ಬಿಜೆಪಿ ಮಾಡಬಾರದು ಎಂದರು.

ಈ ಸಂದರ್ಭದಲ್ಲಿ ಸೋಮಶೇಖರ ಲ್ಯಾವಿಗೆರೆ, ಚೇತನರಾಜ್ ಕಣ್ಣೂರು, ಗಣಪತಿ ಮಂಡಗಳಲೆ, ಕೆ.ಹೊಳೆಯಪ್ಪ, ಕಲಸೆ ಚಂದ್ರಪ್ಪ, ಆನಂದ್ ಭೀಮನೇರಿ, ಟಿ.ಪಿ.ರಮೇಶ್, ಬಸವರಾಜ ಸೈದೂರು, ಯಶವಂತ ಪಣಿ, ಐ.ಜಿ.ಸ್ವರೂಪ್, ತಾರಾಮೂರ್ತಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.