Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ
ಸಾರ್ವಜನಿಕ ಪ್ರಾರ್ಥನಾ ಸಭೆಯಲ್ಲೇ ಘೋಷಣೆ...
Team Udayavani, Jul 4, 2024, 7:57 PM IST
ಜೈಪುರ : ರಾಜಸ್ಥಾನದ ಹಿರಿಯ ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ಅವರು ಜೈಪುರದಲ್ಲಿ ನಡೆದ ಸಾರ್ವಜನಿಕ ಪ್ರಾರ್ಥನಾ ಸಭೆಯಲ್ಲಿ ಸಚಿವ ಸ್ಥಾನಕ್ಕೆ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ಘೋಷಿಸಿದ್ದಾರೆ.
72 ರ ಹರೆಯದ ಮೀನಾ ಅವರು ರಾಜಸ್ಥಾನ ಸರಕಾರದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಖಾತೆಗಳನ್ನು ಹೊಂದಿದ್ದರು. ಕಳೆದ ತಿಂಗಳು ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಮುನ್ನ, ಬಿಜೆಪಿಯು ಪೂರ್ವ ರಾಜಸ್ಥಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತನಗೆ ನಿಯೋಜಿಸಿದ ಏಳು ಸ್ಥಾನಗಳಲ್ಲಿ ಯಾವುದನ್ನಾದರೂ ಕಳೆದುಕೊಂಡರೆ ತಾನು ಸಚಿವ ಸ್ಥಾನ ತ್ಯಜಿಸುವುದಾಗಿ ಹೇಳಿದ್ದರು.
”ಪ್ರಧಾನಿಯವರು ನನ್ನೊಂದಿಗೆ ಮಾತನಾಡಿ ಏಳು ಸ್ಥಾನಗಳ ಪಟ್ಟಿಯನ್ನು ಕೊಟ್ಟಿದ್ದರು. ನಾನು ಶ್ರಮಿಸಿದ್ದೇನೆ ಪಕ್ಷವು ಆ ಏಳರಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡರೂ ನಾನು ಸಚಿವ ಸ್ಥಾನವನ್ನು ತೊರೆಯುತ್ತೇನೆ “ಎಂದು ಹೇಳಿದ್ದರು.
ಸಿಎಂ ಭಜನ್ಲಾಲ್ ಶರ್ಮ ಅವರು ಮೀನಾ ಅವರಿಗೆ ರಾಜೀನಾಮೆ ನಿರ್ಧಾರ ಹಿಂಪಡೆಯುವಂತೆ ಮನವೊಲಿಸಿದರೂ ನಿರ್ಧಾರದಿಂದ ಹಿಂದೆ ಸರಿದಿಲ್ಲ.
ಬಿಜೆಪಿಯು 2014 ರಲ್ಲಿ ರಾಜ್ಯದಲ್ಲಿ 25 ಸ್ಥಾನಗಳಲ್ಲಿ 24 ಅನ್ನು ಗೆದ್ದುಕೊಂಡಿತ್ತು (ಒಂದು ಸ್ಥಾನಮೈತ್ರಿಕೂಟ ಗೆದ್ದಿತ್ತು), ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಿತ್ತು.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 11 ಸ್ಥಾನಗಳನ್ನು ಗೆದ್ದುಕೊಂಡಿತು.ಬಿಜೆಪಿ 14ಸ್ಥಾನಗಳನ್ನು ಮಾತ್ರ ಗೆದ್ದು ಭಾರೀ ಶಾಕ್ ಅನುಭವಿಸಿತ್ತು. ಮೀನಾ ಅವರಿಗೆ ಗೆಲ್ಲಿಸುವ ಜವಾಬ್ದಾರಿಯನ್ನು ವಹಿಸಲಾಗಿದ್ದ ಭರತ್ಪುರ್, ಕರೌಲಿ-ಧೋಲ್ಪುರ್, ದೌಸಾ ಮತ್ತು ಟೋಂಕ್-ಸವಾಯಿ ಮಾಧೋಪುರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು.
ಈ ಹಿಂದೆ ಮೀನಾ ಅವರು ಪ್ರತಿನಿಧಿಸುತ್ತಿದ್ದ ದೌಸಾದಲ್ಲಿ ಕಾಂಗ್ರೆಸ್ನ ಮುರಾರಿ ಮೀನಾ ಅವರು ಬಿಜೆಪಿಯ ಕನ್ಹಯ್ಯಾ ಲಾಲ್ ಮೀನಾ ಅವರನ್ನು 2.37 ಲಕ್ಷ ಮತಗಳಿಂದ ಸೋಲಿಸಿ ಕಾಂಗ್ರೆಸ್ ನಾಯಕ ರಾಜೇಶ್ ಪೈಲಟ್ ಅವರ ಭದ್ರಕೋಟೆಯನ್ನು ಮರಳಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.