Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ


Team Udayavani, Jul 4, 2024, 11:25 PM IST

Goverment-school

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ರ ಬಜೆಟ್‌ನಲ್ಲಿ ಉಲ್ಲೇಖೀಸಿದ್ದ “ನಾವು-ಮನುಜರು’ ಕಾರ್ಯಕ್ರಮದ ರೂಪರೇಖೆಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಕಟಿಸಿದೆ. ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ ಕಾಲ ನಾವು-ಮನುಜರು ಕಾರ್ಯಕ್ರಮ ನಡೆಯಲಿದೆ.

ಶಾಲಾ ವೇಳಾಪಟ್ಟಿಯಲ್ಲಿನ ಮೌಲ್ಯ ಶಿಕ್ಷಣ ಮತ್ತು ಸಾಮಾಜಿಕ ಉಪಯುಕ್ತ ಉತ್ಪಾದನೆ ಕಾರ್ಯಕ್ಕೆ ಮೀಸಲಾಗಿರುವ ಅವಧಿಯನ್ನು ಹೊಂದಿಕೆ ಮಾಡಿಕೊಂಡು ಕಡ್ಡಾಯವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ.
ವಾರಕ್ಕೆ 120 ನಿಮಿಷ ಅಂದರೆ ಮೂರು ಅವಧಿಯಲ್ಲಿ (40 ನಿಮಿಷ) ವಿಚಾರ ವಿಮರ್ಶೆ ಮತ್ತು ಸಂವಾದವನ್ನು ಒಳಗೊಂಡ ಕಾರ್ಯಕ್ರಮನನ್ನು ಆಯೋಜಿಸಬೇಕು. ವಿದ್ಯಾ ಕೇಂದ್ರಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ಕೇಂದ್ರವನ್ನಾಗಿಸುವುದು ಕಾರ್ಯಕ್ರಮದ ಉದ್ದೇಶ.

ಕಾರ್ಯಕ್ರಮದಲ್ಲಿ ಏನಿರಲಿದೆ
ಸ್ಥಳೀಯ ಆಚರಣೆಗಳ ಹಿನ್ನೆಲೆ, ಮಹತ್ವದ ಬಗ್ಗೆ ಚರ್ಚೆ, ರಾಷ್ಟ್ರೀಯ ಹಬ್ಬಗಳ ಮಹತ್ವದ ಬಗ್ಗೆ ಸಂವಾದ, ಸಮಾಜ ಸುಧಾರಕರ ಬಗ್ಗೆ ಚಿಂತನೆಗಳ ಬಗ್ಗೆ ಚರ್ಚೆ, ಸ್ಥಳೀಯ ಪ್ರಸಿದ್ಧ ತಾಣಗಳು, ಕುಲಕಸುಬು, ಗುಡಿ ಕೈಗಾರಿಕೆಗೆಳಿಗೆ ಭೇಟಿ, ಮಹತ್ವದ ಚರ್ಚೆ, ವಿಭಕ್ತ ಮತ್ತು ಅವಿಭಕ್ತ ಕುಟುಂಬಗಳ ಬಗ್ಗೆ ಚರ್ಚೆ, ಕುಟುಂಬದ ಸಾಂಪ್ರದಾಯಿಕ ಮತ್ತು ಸಾಮಾಜಿಕ ಮೌಲ್ಯಗಳ ಬಗ್ಗೆ ಚರ್ಚೆ, ಅಸಮಾನತೆ ನಿರ್ಮೂಲನೆ, ಸಾಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವ ಕುರಿತು ಸಂವಾದ, ಪರಿಸರ ಪ್ರಜ್ಞೆ, ಮೂಢನಂಬಿಕೆ ನಿರ್ಮೂಲನೆ, ಅಡುಗೆ ಮನೆ ಮತ್ತು ನಿತ್ಯ ಜೀವನದಲ್ಲಿ ವಿಜ್ಞಾನ, ಸ್ಥಳೀಯ ಮೌಡ್ಯಗಳ ನಿವಾರಣೆ, ಮನೆ ಮದ್ದುಗಳ ಪರಿಚಯಿಸುವಿಕೆ, ಪ್ರಶ್ನೆ ಕೇಳುವ ಮನೋಭಾವ, ಡಿಜಿಟಲ್‌ ಸಾಧನಗಳ ಸದ್ಬಳಕೆ, ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ, ಸಹಪಂಕ್ತಿ ಭೋಜನದ ಮಹತ್ವ ಮುಂತಾದ ವಿಷಯಗಳಿಗೆ ಒತ್ತು ನೀಡಿ ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.