Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು


Team Udayavani, Jul 4, 2024, 11:20 PM IST

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯ ದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲ ಗಂಗಾಧರ ಎಚ್‌., ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗರ್‌ವಾಲ್‌ ಮತ್ತು ಇತರ 11 ಮಂದಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಸುರತ್ಕಲ್‌ ಮುಂಚೂರಿನ ಕೆ.ರುಕ್ಕಯ್ಯ ಶೆಟ್ಟಿ ದೂರು ನೀಡಿದವರು.

ಪ್ರಕರಣದ ವಿವರ
ಕೆ.ರುಕ್ಕಯ್ಯ ಶೆಟ್ಟಿ ಕಟ್ಟಡ ನಿರ್ಮಾಣ ಮತ್ತು ಜಾಗದ ವ್ಯವಹಾರಗಳನ್ನು ನಡೆಸಿಕೊಂಡು ಬರುತ್ತಿದ್ದರು. ಈ ಜಾಗದ ವ್ಯವಹಾರವನ್ನು ಆಪ್ತಸ್ನೇಹಿತನಾದ ಗಂಗಾಧರ ಎಚ್‌. ಮೂಲಕ ಮಾಡಿಸುತ್ತಿದ್ದರು. ರುಕ್ಕಯ್ಯ ಶೆಟ್ಟಿ ಅವರು 2018ರಲ್ಲಿ ಕುಸುಮ ಕೆ.ಸುವರ್ಣ, ವಾರಿಜಾ ವಿ.ಬಂಗೇರ (ಈಗ ಮೃತರು) ಮತ್ತು ಆಕೆಯ ಪುತ್ರಿ ನೀರಜಾಕ್ಷಿ ಅಗರ್‌ವಾಲ್‌ ಅವರಿಂದ ಹೊಸಬೆಟ್ಟು ಗ್ರಾಮದಲ್ಲಿ 60.45 ಲಕ್ಷ ರೂ.ಗಳಿಗೆ ಜಾಗ ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡು 20 ಲಕ್ಷ ರೂ ಮುಂಗಡ ಹಣ ಪಾವತಿಸಿದ್ದರು. ಆ ಜಾಗದಲ್ಲಿ ಕೆಲವು ಸೆಂಟ್ಸ್‌ಗಳನ್ನು ನವೀನ್‌ ಸಾಲ್ಯಾನ್‌ ಮತ್ತು ಕೇತನ್‌ ಕುಮಾರ್‌ ಅವರಿಗೆ ಮಾರಾಟ ಮಾಡುವ ಬಗ್ಗೆಯೂ ಒಪ್ಪಂದ ಮಾಡಿಕೊಂಡು ಅವರಿಂದ ಮುಂಗಡ ಹಣವನ್ನು ಕೂಡ ಪಡೆದಿದ್ದರು.

ರುಕ್ಕಯ್ಯ ಶೆಟ್ಟಿ ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದ ಜಾಗದ ಅಭಿವೃದ್ಧಿ, ದಾಖಲೆಪತ್ರಗಳನ್ನು ಕ್ರಮಬದ್ಧಗೊಳಿಸುವ ಕೆಲಸ ಮಾಡುತ್ತಿದ್ದರು. 2020ರಲ್ಲಿ ರುಕ್ಕಯ್ಯ ಶೆಟ್ಟಿ ಅವರು ನರಸಂಬಂಧಿ ರೋಗಕ್ಕೆ ಒಳಗಾಗಿ ಸ್ಮರಣಶಕ್ತಿ ಕಳೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕುಟುಂಬವು ಈ ಜಾಗದ ವ್ಯವಹಾರಕ್ಕೆ ಗಂಗಾಧರ್‌ ಎಚ್‌. ಅವರನ್ನೇ ಅವಲಂಬಿಸಿತ್ತು. ಆದರೆ ರುಕ್ಕಯ್ಯ ಶೆಟ್ಟಿ ಅವರು ಚೇತರಿಸಿಕೊಂಡ ಅನಂತರ ಅವರಿಗೆ ಗಂಗಾಧರ ಎಚ್‌. ಇತರ ಆರೋಪಿಗಳೊಂದಿಗೆ ಸೇರಿ ವಂಚನೆ ಮಾಡಿರುವುದು ಗಮನಕ್ಕೆ ಬಂದಿದೆ. ರುಕ್ಕಯ್ಯ ಶೆಟ್ಟಿ ಅವರು ಖರೀದಿಸಲು ಒಪ್ಪಂದ ಮಾಡಿಕೊಂಡ ಜಾಗವನ್ನು ಅವರ ಗಮನಕ್ಕೆ ತಾರದೆಯೇ ಗಂಗಾಧರ ಎಚ್‌. ಇತರ ಆರೋಪಿಗಳಾದ ಕುಸುಮ ಸುವರ್ಣ ಮತ್ತು ನೀರಜಾಕ್ಷಿ ಅಗರ್‌ವಾಲ್‌ ಅವರೊಂದಿಗೆ ಸೇರಿಕೊಂಡು ಹಲವರಿಗೆ ಮಾರಾಟ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.