ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ


Team Udayavani, Jul 5, 2024, 12:15 AM IST

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ಮೂಡಬಿದಿರೆ: ಭಾರತ ಗೌರವ ರಾಷ್ಟ್ರಸಂತ ಗಣಾಚಾರ್ಯ ಬಾಲ ಬ್ರಹ್ಮಚಾರಿ 108 ಗುಣಧಾರಿ, ವಿರಾಗ ಸಾಗರ ಜೀ ದಿಗಂಬರ ಮುನಿಮಹಾರಾಜ್‌ ಅವರು ಮಹಾರಾಷ್ಟ್ರದ ಔರಂಗಾಬಾದ್‌ನ ಜಲಾ°ದ ಸಿಂಧಖೇಡಾದ ದೇವಮೂರ್ತಿ ಗ್ರಾಮದಲ್ಲಿ ಗುರುವಾರ ಮುಂಜಾನೆ 2.30ಕ್ಕೆ ಸಲ್ಲಖನ ವ್ರತಪೂರ್ವಕ ಸಮಾಧಿಮರಣವನೈದಿದರು.

ಅವರಿಗೆ 61 ವರ್ಷ ವಯಸ್ಸಾಗಿತ್ತು. ಅವರು ಮೂಲತಃ ಮಧ್ಯಪ್ರದೇಶದವರಾಗಿದ್ದರು.350ಕ್ಕೂ ಹೆಚ್ಚಿನ ಮಂದಿಗೆ ಜೈನ ಧರ್ಮದ ಆಚಾರ್ಯ ಪದವಿ, ದಿಗಂಬರ ಮುನಿ, ಗಣನೀ ಮಾತಾಜಿ, ಆಯಿìಕಾ ಮಾತಾಜಿ ಪದವಿ, ಕ್ಷುಲ್ಲಕ ದೀಕ್ಷೆ ಹಾಗೂ ಬ್ರಹ್ಮಚರ್ಯ ದೀಕ್ಷೆ ನೀಡಿದ್ದು ನಾಡಿನಾದ್ಯಂತ ಧರ್ಮಪ್ರಭಾವನೆಗೈದಿದ್ದರು. ಜೈನ ಆಗಮ ಶಾಸ್ತ್ರಗಳ ಬಗ್ಗೆ ವಿಮರ್ಶೆ ಸಹಿತ 150ಕ್ಕೂ ಅಧಿ ಕ ಕೃತಿ ರಚಿಸಿದ್ದರು.

ಅವರ ಪೂರ್ವಾಶ್ರಮದ ಪಿತ, ಕಪೂರ್‌ಚಂದ್‌ ಜೈನ್‌ ಅವರೂ ಮುನಿದೀಕ್ಷೆ ಪಡೆದಿದ್ದು, ತಾಯಿ ಸಂಘದಲ್ಲಿ ಆಯಿìಕಾ ಮಾತಾಜಿ ಪದವಿ ಸ್ವೀಕರಿಸಿದ್ದರು.

ಮೂಡುಬಿದಿರೆಯಲ್ಲಿ
2005ರಲ್ಲಿ ಜೈನಕಾಶಿ ಮೂಡುಬಿದಿರೆಯಲ್ಲಿ ಅವರು 30 ಮಂದಿ ಸಾಧು ಸಂತರ ಸಹಿತ 60 ಮಂದಿ ಪಿಂಛಿಧಾರಿ ಮುನಿಸಂಘದೊಂದಿಗೆ ಚಾತುರ್ಮಾಸ್ಯ ಕೈಗೊಂಡು ಧರ್ಮಪ್ರಭಾವನೆಗೈದಿದ್ದರು. ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಗೌರವಾಧ್ಯಕ್ಷತೆಯಲ್ಲಿ ಚಾತುರ್ಮಾಸ್ಯ ಸಮಿತಿ ಕಾರ್ಯನಿರ್ವಹಿಸಿದ್ದು, ಅರೆಮಾದನಹಳ್ಳಿ ಶಿವಸುಜ್ಞಾನ ಮೂರ್ತಿ ಸ್ವಾಮೀಜಿ ಸಹಿತ ನಾಡಿನ ಗಣ್ಯ ಮಠಾಧಿಪತಿಗಳು ವಿರಾಗಸಾಗರರನ್ನು ಭೇಟಿ ಮಾಡಿದ್ದರು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಎಚ್‌.ಕೆ. ಪಾಟೀಲ್‌ ಮೊದಲಾದವರು ಮೂಡುಬಿದಿರೆಗಾಗಮಿಸಿ ವಿರಾಗ ಸಾಗರರ ಆಶೀರ್ವಾದ ಸ್ವೀಕರಿಸಿದ್ದರು.

ಸದ್ಗತಿ ಪ್ರಾರ್ಥನೆ: ಮೂಡುಬಿದಿರೆ ಭಟ್ಟಾರಕ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿ ಅವರು “ವಿರಾಗ ಸಾಗರರು ತೀವ್ರ ವ್ರತ ನಿಯಮ ಹೊಂದಿರುವ ಶ್ರಾವಕ ಶ್ರಾವಿಕೆಯರಿಗೆ ದೀಕ್ಷೆ ನೀಡಿ ಆತ್ಮ ಕಲ್ಯಾಣದ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದ್ದರು, ಉತ್ತಮ ಧರ್ಮ ಬೋಧಕರಾಗಿದ್ದರು’ ಎಂದು ಸ್ಮರಿಸಿಕೊಂಡು ಅವರ ಆತ್ಮಕ್ಕೆ ಉತ್ತಮ ಸದ್ಗತಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.