Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!
Team Udayavani, Jul 5, 2024, 7:10 AM IST
ಉಡುಪಿ: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಗೆ ನಿಟ್ಟೂರು ಬಳಿ ಬಸ್ ಚಾಲಕನ ಪ್ರೇಯಸಿ ಬಸ್ ಹತ್ತಿದ್ದಾಳೆ.
ಅಲ್ಲಿಂದಲೇ ಅವರ ನಡುವೆ ವಾಗ್ಯುದ್ಧ ನಡೆದಿದೆ. ನಿರ್ವಾಹಕ ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರೇಯಸಿಯ ಕಿರಿಕಿರಿಯಿಂದ ರೋಸಿ ಹೋದ ಚಾಲಕ ಆಶೀರ್ವಾದ್ ಚಿತ್ರಮಂದಿರದ ಸ್ವಲ್ಪ ಮುಂದಕ್ಕೆ ಬಸ್ ನಿಲ್ಲಿಸಿ ಹೋಗಿದ್ದಾನೆ. ಪ್ರೇಯಸಿ ಮತ್ತೊಂದು ದಾರಿ ಹಿಡಿದರು.
ಪ್ರಯಾಣಿಕರು ಇದನ್ನೆಲ್ಲ ನೋಡಿಯೇ ಬಾಕಿಯಾಗಿದ್ದಾರೆ. ಸಂಜೆ ವೇಳೆ ಈ ಘಟನೆ ನಡೆದಿದ್ದು, ಬಳಿಕ ಬಸ್ ನಿರ್ವಾಹಕನೇ ಬಸ್ ಅನ್ನು ಚಲಾಯಿಸಿಕೊಂಡು ಹೋದ ಘಟನೆ ನಡೆಯಿತು. ಬಸ್ ನಿಲ್ಲಿಸಿ ತೆರಳಿದ ಚಾಲಕನ ನಿರ್ಲಕ್ಷ್ಯತನಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.