BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ
ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವಿಗೆ ಅಭಿನಂದಿಸಿ ನಿರ್ಣಯ ಅಂಗೀಕಾರ
Team Udayavani, Jul 5, 2024, 12:45 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಹ್ಯಾಟ್ರಿಕ್ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ವಿಶೇಷ ಕಾರ್ಯಕಾರಿಣಿಯಲ್ಲಿ ಅಭಿನಂದನೆ ಸಲ್ಲಿಸಿ ನಿರ್ಣಯ ಅಂಗೀಕರಿಸಲಾಗಿದೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಭೆಯಲ್ಲಿ ನಿರ್ಣಯ ಮಂಡಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟವು ಭಾರತದ ಸಂವಿಧಾನ ಮತ್ತು ಇಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜಗತ್ತಿನಾದ್ಯಂತ ಅಪಪ್ರಚಾರ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಈ ಚುನಾವಣೆ ಮಹತ್ವ ಪಡೆದಿತ್ತು. ಬಿಜೆಪಿ ಸರಕಾರದ ಸಾಧನೆಗಳ ಕಾರಣ ಈ ಗೆಲುವು ಲಭಿಸಿದೆ ಎಂದರು.
ಅಭಿವೃದ್ಧಿಶೂನ್ಯ, ಹಗರಣಗಳ ಕಾಂಗ್ರೆಸ್ ಸರಕಾರ ತೊಲಗಿಸಲು ಕರೆ ಕೊಡುವ ಎರಡನೇ ನಿರ್ಣಯವನ್ನೂ ಅಂಗೀಕರಿಸಲಾಗಿದೆ. ವಿಪಕ್ಷ ನಾಯಕ ಅಶೋಕ್ ಇದನ್ನು ಮಂಡಿಸಿದ್ದು, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಂಗಾರು ಹನುಮಂತು ಅನುಮೋದಿಸಿದ್ದಾರೆ. ಈ ಸರಕಾರ ಆರ್ಥಿಕ ದಿವಾಳಿತನದ ಕಡೆ ರಾಜ್ಯವನ್ನು ಒಯ್ಯುತ್ತಿರುವುದು, ಅಭಿವೃದ್ಧಿ ಕಾರ್ಯಗಳಿಗೆ ಹಣ ಕೊಡದೆ ಇರುವುದು, ಅಲ್ಪಸಂಖ್ಯಾಕರ ಓಲೈಕೆ, ಮತ ಬ್ಯಾಂಕ್ ಭದ್ರ ಪಡಿಸುವ ಕಡೆ ಗಮನ ಕೊಟ್ಟು ರಾಜ್ಯದ ಹಿತ ಮರೆತಿದೆ ಎಂದು ಆರೋಪಿಸಿದರು.
ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾದ ಕುರಿತು ಖಂಡಿಸಿದ್ದೇವೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಈ ನಿರ್ಣಯ ಆಗ್ರಹಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.