Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ


Team Udayavani, Jul 5, 2024, 10:43 AM IST

3-kushtagi

ಕುಷ್ಟಗಿ: ಕಳೆದ 18 ವರ್ಷಗಳಿಂದ ಬೆಳೆಸಿದ್ದ ಶ್ರೀಗಂಧದ 13 ಮರಗಳನ್ನು ಕಳವು ಮಾಡಿದ ಪ್ರಕರಣ ತಾಲೂಕಿನ ನಡುವಲಕೊಪ್ಪ ಸೀಮಾದಲ್ಲಿ ಬೆಳಕಿಗೆ ಬಂದಿದೆ.

ಕುಷ್ಟಗಿಯ ನಿವೃತ್ತ ಪ್ರೊಫೆಸರ್ ಎಸ್.ಬಿ. ಶಿವನಗುತ್ತಿ, ತಮ್ಮ ಜಮೀನಿನಲ್ಲಿ ತೇಗದ ಜೊತೆಗೆ ಶ್ರೀಗಂಧ ನಾಟಿ ಮಾಡಿದ್ದರು. ಸ.ನಂ.11/2 ರ 5 ಎಕರೆ 28 ಗುಂಟೆ ವಿಸ್ತೀರ್ಣದಲ್ಲಿ 4,500 ತೇಗ, 1 ಸಾವಿರ ಶ್ರೀಗಂಧವನ್ನು ಹನಿ ನೀರಾವರಿ ಆಶ್ರೀತವಾಗಿ ಬೆಳೆದಿದ್ದರು.

ಕಳೆದ 5 ವರ್ಷಗಳಿಂದ ಶ್ರೀಗಂಧದ ಮರಗಳಿಗೆ ಕಳ್ಳರ ಕಾಟ ಆಗಾಗ್ಗೆ ನಡೆಯುತ್ತಿದ್ದ ಹಿನ್ನೆಲೆ ಶೇ.50 ರಷ್ಟು ಶ್ರೀಗಂಧ ಕಳ್ಳರ ಪಾಲಾಗಿದೆ. ಸದ್ಯ 371 ಗಿಡಗಳು ಮಾತ್ರ ಉಳಿದಿದ್ದು ಇವುಗಳ‌ ಮೇಲೆ ಕಳ್ಳರ ಕಣ್ಣು ಬಿದ್ದಿದೆ‌. ಇನ್ನೇನು ಕೆಲ ದಿನಗಳಲ್ಲಿ ಶ್ರೀಗಂಧ ಕಟಾವಿಗೆ ಕರ್ನಾಟಕ ಸೋಪ್ ಡಿಟರ್ಜಂಟ್ ಲಿಮಿಟೆಡ್ ನೊಂದಿಗೆ ಒಪ್ಪಂದವಾಗಿತ್ತು. ಅರಣ್ಯ ಇಲಾಖೆಯ ಸಮ್ಮುಖದಲ್ಲಿ ಗಿಡಗಳ ಕಟಾವು ಮಾತ್ರ ಬಾಕಿ ಇತ್ತು.

ಕಳೆದ ಬುಧವಾರ ತಡರಾತ್ರಿ 13 ಮರಗಳನ್ನು ಕಳ್ಳರು ಬುಡ ಸಮೇತ ನೆಲಕ್ಕುರುಳಿಸಿದ್ದಾರೆ. ಕಾಂಡದಲ್ಲಿ ಹಾಟ್ ವುಡ್ ಇರುವ ಎರಡು ಮರಗಳ ಕಾಂಡಗಳನ್ನು ಹೊತ್ತೊಯ್ದಿದ್ದಾರೆ. ಉಳಿದ 11 ಮರಗಳ‌ ಬುಡ ಕತ್ತರಿಸಿ ಹಾಗೆಯೇ ಬಿಟ್ಟಿದ್ದಾರೆ. ಕಳ್ಳರು ಬ್ಯಾಟರಿಚಾಲಿತ ಮಿಷನ್‌ ನಿಂದ ಕೊರೆದರೆ ಎಲ್ಲಿ ಶಬ್ದವಾಗುತ್ತದೆ ಎಂದು ಗರಗಸ ಇಲ್ಲವೇ ಎಕ್ಸೋ ಬ್ಲೇಡ್ ಬಳಸಿ ಮರಗಳನ್ನು ಕೆಡವಿರುವುದಾಗಿ ಶಂಕಿಸಲಾಗಿದೆ. ಈ ಪ್ರಕರಣದಲ್ಲಿ ವೃತ್ತಿ ನಿರತರಿಗೆ ಸ್ಥಳೀಯರು ಬೆಂಬಲಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕ್ರೈಂ‌ ಪಿಎಸ್‌ಐ ಮಾನಪ್ಪ ವಾಲ್ಮೀಕಿ, 112 ವಾಹನ ಸಿಬ್ಬಂದಿ  ಪ್ರಾದೇಶಿಕ ವಲಯ ಪ್ರಭಾರ ಅರಣ್ಯಾಧಿಕಾರಿ ರಿಯಾಜ್ ಅಹ್ಮದ್, ಮಲ್ಲಿಕಾರ್ಜುನ್ ಭೇಟಿ ನೀಡಿ ಪರಿಶೀಲಿಸಿ ತನಿಖೆಗೆ ಮುಂದಾಗಿದ್ದಾರೆ.

ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಅವರು,18 ವರ್ಷಗಳವರೆಗೆ  ಶ್ರೀಗಂಧ ಬೆಳೆದು ಇದೀಗ ಕಳ್ಳರ ಪಾಲಾಗಿದೆ‌ ರೈತರು ಸ್ವಂತ ಜಮೀನಿನಲ್ಲಿ ಶ್ರೀಗಂಧ ಬೆಳೆದರೂ ಅರಣ್ಯ ಇಲಾಖೆಯ ಸಮ್ಮುಖದಲ್ಲಿ ಕಟಾವಣೆ ಮಾಡಬೇಕಿದೆ. ಸರ್ಕಾರದ ಬಿಗಿ ಕ್ರಮಗಳಿಂದ ಈ ಬೆಳೆ ಬೆಳೆದರೂ ಸ್ವತಂತ್ರವಾಗಿ ಮಾರಾಟಕ್ಕೆ ಆಸ್ಪದವಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದರು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.