9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ


Team Udayavani, Jul 5, 2024, 12:19 PM IST

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

ಆಂಧ್ರಪ್ರದೇಶ: ಕಾಲೇಜಿಗೆ ಹೋಗಿದ್ದ ಮಗಳು ನಾಪತ್ತೆಯಾಗಿ ಸರಿ ಸುಮಾರು ಒಂಬತ್ತು ತಿಂಗಳು ಕಳೆದಿದ್ದು ಇದೀಗ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್ ಕಲ್ಯಾಣ್ ಅವರ ಆದೇಶದ ಮೇರೆಗೆ ಪೊಲೀಸರು ಕೇವಲ 9 ದಿನದಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿದ್ದಾರೆ.

ಏನಿದು ಪ್ರಕರಣ:
ಆಂಧ್ರಪ್ರದೇಶದಲ್ಲಿ ಬಾಲಕಿಯರು, ಮಹಿಳೆಯರು ನಾಪತ್ತೆಯಾಗುತ್ತಿದ್ದು ಈ ಕುರಿತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತನ್ನ ಅಧಿಕಾರಿಗಳ ಬಳಿ ಸಭೆಯನ್ನೂ ನಡೆಸಿದ್ದಾರೆ ಈ ನಡುವೆ ಪವನ್ ಕಲ್ಯಾಣ್ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂ ಗೆ ಭೇಟಿ ನೀಡಿದ್ದರು ಈ ವೇಳೆ ಅಲ್ಲಿಗೆ ಬಂದ ಮಹಿಳೆಯೊಬ್ಬರು ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ತನ್ನ ಮಗಳು ಒಂಬತ್ತು ತಿಂಗಳ ಹಿಂದೆ ಕಾಲೇಜಿಗೆ ಹೋದವಳು ಮರಳಿ ಮನೆಗೆ ಬರಲಿಲ್ಲ ಹುಡುಕಿಕೊಡಿ ಸಾರ್ ಎಂದು ಕೇಳಿಕೊಂಡಿದ್ದಾರೆ, ಕೂಡಲೇ ಮಹಿಳೆಯ ಮನವಿಗೆ ಸ್ಪಂದಿಸಿದ ಪವನ್ ಕಲ್ಯಾಣ್ ಸಂಬಂಧಿತ ಅಧಿಕಾರಿಗಳ ಬಳಿ ಮಾತನಾಡಿ ಕೂಡಲೇ ಪ್ರಕರಣವನ್ನು ಇತ್ಯರ್ಥಪಡಿಸಲು ಸೂಚನೆ ನೀಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ತನಿಖಾ ತಂಡ ನಾಪತ್ತೆಯಾದ ಬಾಲಕಿ ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿಜಯವಾಡದ ರಾಮವರಪ್ಪಾಡು ಮೂಲದ ಯುವಕನೊಂದಿಗೆ ಜಮ್ಮುವಿನಲ್ಲಿ ಇರುವುದು ಪತ್ತೆಯಾಗಿದೆ. ಕೂಡಲೇ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನೂ ವಶಕ್ಕೆ ಪಡೆದು ಜಮ್ಮುವಿನಿಂದ ವಿಜಯವಾಡಕ್ಕೆ ಕರೆತಂದಿದ್ದಾರೆ.

ವಿಚಾರಣೆ ವೇಳೆ ಯುವಕ ನನ್ನನ್ನು ಪ್ರೀತಿಸುವ ನಾಟಕವಾಡಿ ಬಲವಂತವಾಗಿ ಹೈದರಾಬಾದ್ ಗೆ ಕರೆದುಕೊಂಡು ಹೋಗಿದ್ದ ಕೆಲ ದಿನಗಳ ಬಳಿಕ ಪೊಲೀಸರು ತಮ್ಮನ್ನು ಹುಡುಕಬಹುದು ಎಂದು ಜಮ್ಮುವಿಗೆ ಹೋಗಲು ನಿರ್ಧರಿಸಿದ್ದ ಆದರೆ ಕೈಯಲ್ಲಿ ಹಣವಿರದ ಕಾರಣ ಯುವಕ ತನ್ನ ಮೊಬೈಲ್ ಹಾಗೂ ನನ್ನ ಬಳಿ ಇದ್ದ ಚಿನ್ನಾಭರಣವನ್ನು ಮಾರಾಟ ಮಾಡಿ ಜಮ್ಮು ಗೆ ತೆರಳಿದೆವು ಅಲ್ಲಿ ಗೆಳೆಯ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಆದರೆ ನನಗೆ ಮೊಬೈಲ್ ಬಳಸಲು ಆತ ಅವಕಾಶ ನೀಡಿಲ್ಲ ಎಂದಿದ್ದಾಳೆ ಒಮ್ಮೆ ಆತ ಕೆಲಸಕ್ಕೆ ಹೋಗಿದ್ದಾಗ ಹೇಗೋ ತನ್ನ ಸಹೋದರಿಗೆ ಇನ್ಸ್ಟಾಗ್ರಾಮ್ ಮೂಲಕ ಸಂದೇಶ ಕಳುಹಿಸಿದ್ದಾಳೆ ಇದರ ಬೆನ್ನು ಹತ್ತಿದ ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಯುವಕನ ವಿರುದ್ಧ (ಐಪಿಸಿ) ಸೆಕ್ಷನ್ 366 (ಅಪಹರಣ) ಮತ್ತು 344 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಒಂಬತ್ತು ತಿಂಗಳ ಹಿಂದೆಯೇ ಮಹಿಳೆ ದೂರು ನೀಡಿದ್ದರು:
ಮಗಳು ನಾಪತ್ತೆಯಾಗಿರುವ ಕುರಿತು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕ ಯುವತಿ ಇಬ್ಬರು ಜಮ್ಮುವಿನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು ಆದರೆ ಪೊಲೀಸರು ತಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಸಿಮ್ ಬದಲಾಯಿಸಿದ್ದಾನೆ ಇದರಿಂದ ಪೊಲೀಸರು ತಮ್ಮ ಕಾರ್ಯವನ್ನು ಅರ್ಧಕ್ಕೆ ಬಿಟ್ಟು ಬಿಟ್ಟಿದ್ದಾರೆ, ಇದೀಗ ಒಂಬತ್ತು ತಿಂಗಳ ಬಳಿಕ ಉಪಮುಖ್ಯಮಂತ್ರಿಗಳ ಆದೇಶದ ಮೇರೆಗೆ ಪೊಲೀಸರು ಈ ಜೋಡಿಗಳನ್ನು ಪತ್ತೆ ಹಚ್ಚಿದ್ದು ಪೊಲೀಸರ ಬಗ್ಗೆ ಜನ ಆಡಿಕೊಳ್ಳುವಂತಾಗಿದೆ, ಅಲ್ಲದೆ ಕರ್ತವ್ಯದಲ್ಲಿ ನಿರ್ಲಕ್ಷ ತೋರಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಡಿಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.