Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Team Udayavani, Jul 5, 2024, 12:58 PM IST
ಬೆಂಗಳೂರು: ಇತ್ತೀಚೆಗಷ್ಟೇ ನಡೆದಿದ್ದ ಅಜಿತ್ ಎಂಬಾತನ ಕೊಲೆ ಪ್ರಕರಣ ಬೇಧಿಸಿರುವ ಪುಲಕೇಶಿನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ದೊಡ್ಡಗುಬ್ಬಿ ನಿವಾಸಿಗಳಾಗ ಕಿರಣ್ (32) ಮತ್ತು ರಾಹುಲ್(30) ಬಂಧಿತರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ಬೈಕ್ಗಳ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬುಧವಾರ ಬೆಳಗ್ಗೆ ಕಾಕ್ Õಟೌನ್ನ ದೊಡ್ಡ ಕುಂಟೆ ನಿವಾಸಿ ಅಜಿತ್(35) ಎಂಬಾತನನ್ನು ಭೀಕರವಾಗಿ ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.
ಹಳೇ ದ್ವೇಷಕ್ಕೆ ಕೊಲೆ: ಆರೋಪಿಗಳ ಪೈಕಿ ಕಿರಣ್ಗೆ 4 ವರ್ಷ ಗಳ ಹಿಂದೆ ಕೊಲೆಯಾದ ಅಜಿತ್ ತನ್ನ ಸಹಚರ ಜತೆ ಸೇರಿ ಕೊಂಡು ವೈಯಕ್ತಿಕ ವಿಚಾರಕ್ಕೆ ಹಲ್ಲೆ ನಡೆಸಿದ್ದ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಅಲ್ಲದೆ, ಆಗಾಗ್ಗೆ ದೊಡ್ಡಕುಂಟೆಯಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ಬರುತ್ತಿದ್ದ ಕಿರಣ್ಗೆ ಪದೇ ಪದೆ ಹಲ್ಲೆ ನಡೆಸುತ್ತಿದ್ದ. ಈ ಮಧ್ಯೆ ತಿಂಗಳ ಹಿಂದೆ ಹುಟ್ಟಹಬ್ಬ ಆಚರಿಸಿ ಕೊಳ್ಳಲು ಬಂದಿದ್ದ ಕಿರಣ್ಗೆ ಅಜಿತ್ ಹಲ್ಲೆ ನಡೆಸಿದ್ದ ಹಿನ್ನೆಲೆ ಯಲ್ಲಿ ಬುಧವಾರ ಅಜಿತ್ನ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.