ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಮೈನ್‌ ಪುರಿಯಲ್ಲಿರುವ ಫೈವ್‌ ಸ್ಟಾರ್‌ ಆಶ್ರಮ ಅರಮನೆಯಂತಿದೆ.

Team Udayavani, Jul 5, 2024, 1:10 PM IST

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಲಕ್ನೋ(ಉತ್ತರಪ್ರದೇಶ): ಇತ್ತೀಚೆಗೆ ಉತ್ತರಪ್ರದೇಶದ ಹಾಥ್ರಸ್‌ ನಲ್ಲಿ ಭೋಲೆ ಬಾಬಾನ ಸತ್ಸಂಗ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದಲ್ಲಿ 121 ಮಂದಿ ಸಾವಿಗೀಡಾದ ಘಟನೆ ನಂತರ ಬಾಬಾ ತಲೆಮರೆಸಿಕೊಂಡಿದ್ದು, ಏತನ್ಮಧ್ಯೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಭೋಲೆ ಬಾಬಾನ ಐಶಾರಾಮಿ ಜೀವನದ ಅಂಶಗಳು ಒಂದೊಂದಾಗಿಯೇ ಬಹಿರಂಗಪಡಿಸುತ್ತಿದ್ದಾರೆ.

ಇದನ್ನೂ ಓದಿ:9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

ಭೋಲೆ ಬಾಬಾ ಅಲಿಯಾಸ್‌ ನಾರಾಯಣ್‌ ಹರಿ ಸಕಾರ್‌ ಕಳೆದ ಎರಡು ದಶಕಗಳಲ್ಲಿ ನೂರಾರು ಕೋಟಿ ರೂಪಾಯಿ ಆಸ್ತಿಯನ್ನು ಸಂಪಾದಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಹಾಥ್ರಸ್‌ ನಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ನಂತರ ಭೋಲೆ ಬಾಬಾ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಬಾಬಾನ ಮಂತ್ರಗಳು ತಮ್ಮ ಮನೆಯ ಜಗಳವನ್ನು ದೂರ ಮಾಡುತ್ತದೆ ಎಂಬ ನಂಬಿಕೆ ಆತನ ಭಕ್ತರದ್ದಾಗಿದೆ.

ಕಾನ್ಪುರದ ನಗರದಿಂದ 25 ಕಿಲೋ ಮೀಟರ್‌ ದೂರದಲ್ಲಿ ವಾರಾಣಸಿಯ ಕಾಶಿ ವಿಶ್ವನಾಥ್‌ ದೇವಾಲಯವನ್ನು ಹೋಲುವ ಬೃಹತ್‌ ಮೂರು ಗುಮ್ಮಟಗಳ ಆಶ್ರಮ ಇದ್ದು, ಭಾರೀ ಗಾತ್ರದ ಗೇಟ್‌ ಗಳನ್ನು ಅಳವಡಿಸಲಾಗಿದೆ.

ಅದೇ ರೀತಿ ಮೈನ್‌ ಪುರಿಯಲ್ಲಿರುವ ಫೈವ್‌ ಸ್ಟಾರ್‌ ಆಶ್ರಮ ಅರಮನೆಯಂತಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಈ ಆಶ್ರಮ ನಿರ್ಮಾಣ ಮಾಡಿರುವುದಾಗಿ ಅಂದಾಜಿಸಲಾಗಿದೆ. ಬಾಬಾನ ಭಕ್ತರೊಬ್ಬರು ಈ ಭೂಮಿಯನ್ನು ದೇಣಿಗೆಯಾಗಿ ನೀಡಿದ್ದರಂತೆ. ಆಶ್ರಮದ ಸಮೀಪದಲ್ಲೇ ಈತನ ವಾಸ್ತವ್ಯದ ಬೃಹತ್‌ ಮನೆ ಇದ್ದು, ಇಲ್ಲಿ ಕಾರ್ಯನಿರ್ವಹಿಸಲು ಹಲವು ಮಂದಿ ಸೇವಕರಿದ್ದಾರೆ ಎಂದು ವರದಿ ತಿಳಿಸಿದೆ.

ಬಾಬಾನ ಟ್ರಸ್ಟ್‌ ಸದಸ್ಯರಿಗಾಗಿ ಸ್ವಂತ ಆಶ್ರಮವಿದ್ದು, ಕಾಸ್‌ ಗಂಜ್‌, ಆಗ್ರಾ, ಕಾನ್ಪುರ್‌ ಮತ್ತು ಗ್ವಾಲಿಯರ್‌ ನಲ್ಲಿ ನೂರಾರು ಬಿಘಾಸ್‌ ಆಸ್ತಿಯನ್ನು ಹೊಂದಿರುವುದಾಗಿ ಮೂಲಗಳು ಹೇಳಿವೆ.

1999ರಲ್ಲಿ ಕಾನ್ಸ್‌ ಟೇಬಲ್‌ ಹುದ್ದೆ ತ್ಯಜಿಸಿದ್ದ ಸತ್ಯಪಾಲ್‌ ಪ್ರವಚನ ಆರಂಭಿಸುವ ಮೂಲಕ ಭೋಲೆ ಬಾಬಾ ಎಂದು ಪ್ರಸಿದ್ಧಿಯಾಗಿದ್ದ. ಈತ ತನ್ನ ಭಕ್ತರ ಹೆಸರಿನಲ್ಲಿ ಐಶಾರಾಮಿ ಕಾರುಗಳನ್ನು ಖರೀದಿಸಿದ್ದಾನೆ.

ಆಶ್ರಮದ ಹೊರಗೆ ಭೋಲೆ ಬಾಬಾ ಮತ್ತು ಪತ್ನಿ ದೇವಿ ಮಾ ಜತೆಗಿದ್ದ ಬೃಹತ್‌ ಫೋಟೋ ಇದ್ದು, ಹೂವುಗಳಿಂದ ಫೋಟೊವನ್ನು ಅಲಂಕರಿಸಿದ್ದು, ಗೇಟ್‌ ನ ಹೊರಭಾಗದಲ್ಲಿ ಜನರನ್ನು ಸೆಳೆಯಲು ಧಾರ್ಮಿಕ ಉಕ್ತಿಗಳನ್ನು ಬರೆಯಿಸಲಾಗಿದೆ ಎಂದು ವರದಿ ತಿಳಿಸಿದೆ.

ಆಶ್ರಮದ ಒಳಗೆ ಬೃಹತ್‌ ಉದ್ಯಾನವನ, ತರಕಾರಿ, ಹೂಗಳನ್ನು ಬೆಳೆಸಿದ್ದು, ದನಗಳ ಶೆಡ್‌ ಕೂಡಾ ಇದೆ. ಆಶ್ರಮ ಐಶಾರಾಮಿ ಪಂಚತಾರಾ ಹೋಟೆಲ್‌ ನಂತಿದ್ದು, ಎಲ್ಲಾ ಕೋಣೆಗಳಲ್ಲೂ ಹವಾನಿಯಂತ್ರಿತ, ದೊಡ್ಡ, ದೊಡ್ಡ ಕೂಲರ್‌ ಗಳನ್ನು ಅಳವಡಿಸಲಾಗಿದೆ. ಆಶ್ರಮದ ಮಧ್ಯಭಾಗದಲ್ಲಿ ಐಶಾರಾಮಿ ಸತ್ಸಂಗ ಭವನ ಇದ್ದು, ಇಲ್ಲಿ ಬೃಹತ್‌ ಕೂಲರ್‌, ಸ್ಪೀಕರ್‌ ಗಳನ್ನು ಅಳವಡಿಸಲಾಗಿದೆ ಎಂದು ವರದಿ ಹೇಳಿದೆ.

ಭಕ್ತರಿಗೆ ಅವತಾರ ಪುರುಷ…ಸ್ಥಳೀಯರಿಗೆ ವಂಚಕ!

ಭೋಲೆ ಬಾಬಾ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದು, ಭಕ್ತರ ಪಾಲಿಗೆ ಬಾಬಾ ದೇವರ ಸ್ವರೂಪ. ಆದರೆ ಕಸುಯಿ ಗ್ರಾಮಸ್ಥರು ಹೇಳುವ ಪ್ರಕಾರ, ಭೋಲೆ ಬಾಬಾ ಅವತಾರ ಪುರುಷ ಅಲ್ಲ, ಆತ ವಂಚಕ ಎಂದು ಆರೋಪಿಸುತ್ತಾರೆ. ಆತ ಜನರನ್ನು ಮೂರ್ಖರನ್ನಾಗಿ ಮಾಡಿ ಆಶ್ರಮ ಕಟ್ಟಿಕೊಂಡಿದ್ದಾನೆ. ಒಂದು ವೇಳೆ ಬಾಬಾ ಅವತಾರ ಪುರುಷನೇ ಆಗಿದ್ದರೆ ಹಾಥ್ರಸ್‌ ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿರುವ ಅಮಾಯಕ ಜನರನ್ನು ಮತ್ತೆ ಬದುಕಿಸಲಿ ಎಂದು ಗ್ರಾಮಸ್ಥರೊಬ್ಬರು ಸವಾಲು ಹಾಕಿರುವುದಾಗಿ ವರದಿ ತಿಳಿಸಿದೆ.

ಸತ್ಸಂಗ ಪ್ರಕರಣದಲ್ಲಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಆದರೆ ಎಫ್‌ ಐಆರ್‌ ನಲ್ಲಿ ಭೋಲೆ ಬಾಬಾನ ಹೆಸರು ನಮೂದಿಸಿಲ್ಲ. ಏತನ್ಮಧ್ಯೆ ಭೋಲೆ ಬಾಬಾನನ್ನು ವಶಕ್ಕೆ ಪಡೆಯುವುದಿಲ್ಲ ಎಂಬುದನ್ನು ತಳ್ಳಿಹಾಕಿಲ್ಲ. ಈ ಬಗ್ಗೆ ಈಗಾಗಲೇ ಏನು ಹೇಳಲು ಸಾಧ್ಯವಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.