Shimoga; ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು
ಅಚ್ಚುಕಟ್ಟು ಪ್ರದೇಶದ ರೈತರ ಆಕ್ರೋಶ
Team Udayavani, Jul 5, 2024, 2:49 PM IST
ಶಿವಮೊಗ್ಗ: ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ. ಮಳೆಗಾಲಕ್ಕೂ ಮುನ್ನ ವಾರ್ಷಿಕ ನಿರ್ವಹಣೆ ಮಾಡಿಲ್ಲವೇ ಎಂಬ ಅನುಮಾನ ಕಾಡುತ್ತಿದೆ.
ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಉತ್ತಮ ನೀರು ಬರುತ್ತಿದೆ. ಆದರೆ ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಮೂರ್ನಾಲ್ಕು ದಿನಗಳಿಂದ ಸಾವಿರಾರು ಕ್ಯೂಸೆಕ್ ನೀರು ಹೊರ ಹೋಗುತ್ತಿದೆ. ಮೂರು ದಿನಗಳಿಂದ 15 ಸಾವಿರ ಕ್ಯೂಸೆಕ್ಸ್ಗೂ ಅಧಿಕ ನೀರು ಬರುತ್ತಿದ್ದು ಬಹಳಷ್ಟು ನೀರು ವ್ಯರ್ಥವಾಗುತ್ತಿದೆ.
ಪ್ರಸ್ತುತ ಜಲಾಶಯದಲ್ಲಿ 129.6 ಅಡಿ ನೀರಿದ್ದು 16171 ಕ್ಯೂಸೆಕ್ಸ್ ಒಳಹರಿವು ಇದೆ. ಕಳೆದ ವರ್ಷ ಇದೆ ದಿನ 137.2 ಅಡಿ ನೀರಿತ್ತು. ಕಳೆದ ವರ್ಷ ಮುಂಗಾರು ವಿಫಲವಾದ ಕಾರಣ ಬೇಸಿಗೆ ಬೆಳೆಗೆ ಪಾಳಿ ಪದ್ಧತಿಯಲ್ಲಿ ನೀರು ಕೊಡಲಾಗಿತ್ತು. ಜೂನ್ನಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಜುಲೈ ಆರಂಭ ಆಶಾದಾಯಕವಾಗಿದ್ದರೂ ಮುಂದೆ ಇದೇ ರೀತಿ ಮಳೆ ಬರುತ್ತದೆ ಎಂಬ ಭರವಸೆ ಇಲ್ಲ. ಇದ್ದ ನೀರನ್ನು ಉಳಿಸಿಕೊಳ್ಳುವ ಸಮಯದಲ್ಲಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಎಡವಟ್ಟು ಮಾಡಿಕೊಂಡಿದೆ.
ಮುಂಗಾರು ಬೆಳೆಗೆ ಭದ್ರಾ ಜಲಾಶಯದಿಂದ ಯಾವಾಗ ನೀರು ಬಿಡಬಹುದು ಎಂಬ ಲೆಕ್ಕ ಹಾಕುತ್ತಿದ್ದ ರೈತರು ಜಲಾಶಯದಿಂದ ನೀರು ಪೋಲಾಗುತ್ತಿರುವುದು ಕಂಡು ಶಾಕ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.