Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’
Team Udayavani, Jul 5, 2024, 3:40 PM IST
ಹುಚ್ಚ’- ಸಿನಿಮಾ ಪ್ರೇಮಿಗಳ ಹೃದಯದಲ್ಲಿ ಈ ಚಿತ್ರಕ್ಕೊಂದು ವಿಶೇಷ ಸ್ಥಾನವಿದೆ. ಅದಕ್ಕೆ ಕಾರಣ ನಾಯಕ ಸುದೀಪ್ ಅವರ ನಟನೆ. ತಮ್ಮ ಅದ್ಭುತ ನಟನೆಯ ಮೂಲಕ “ಹುಚ್ಚ’ ಚಿತ್ರದಲ್ಲಿ ಮಿಂಚಿದ್ದರು ಸುದೀಪ್. ನಟನೆ, ಹಾಡು ಎಲ್ಲದರಲ್ಲೂ ಆ ಚಿತ್ರ ಫುಲ್ ಮಾರ್ಕ್ಸ್ ಪಡೆದುಕೊಂಡಿತ್ತು. ಸುದೀಪ್ ಅವರಿಗೆ ದೊಡ್ಡ ಬ್ರೇಕ್ ಕೊಟ್ಟ ಚಿತ್ರ ಕೂಡಾ ಹೌದು. ಅದೇ ಕಾರಣದಿಂದ ಸುದೀಪ್ ಅವರಿಗೂ ಆ ಚಿತ್ರದ ಮೇಲೆ ವಿಶೇಷ ಪ್ರೀತಿ ಇದೆ. ಈಗ ಯಾಕೆ ಈ ವಿಚಾರ ಎಂದು ಕೇಳಬಹುದು. ಅದಕ್ಕೆ ಕಾರಣ “ಹುಚ್ಚ’ ಮತ್ತೂಮ್ಮೆ ಪ್ರೇಕ್ಷಕರ ಎದುರು ಬರಲು ಸಿದ್ಧವಾಗಿದೆ. ಅದು ತಾಂತ್ರಿಕ ಶ್ರೀಮಂತಿಕೆಯೊಂದಿಗೆ.
ಹೌದು, “ಹುಚ್ಚ’ ಚಿತ್ರ ಮರುಬಿಡುಯಾಗುತ್ತದೆ. ಚಿತ್ರವನ್ನು ಮೂಲ ನಿರ್ಮಾಪಕರ ಅನುಮತಿ ಪಡೆದು ಎ.ಎಂ.ಎಸ್ ಬ್ಯಾನರ್ನ ನಿರ್ಮಾಪಕ ಎಸ್.ಡಿ. ಮುನಿಸ್ವಾಮಿ ಅವರು ಅಪ್ಪು ಆರ್ಟ್ಸ್ ಮೂಲಕ ರೀ ರಿಲೀಸ್ ಮಾಡುತ್ತಿದ್ದಾರೆ.
ಮುನಿಸ್ವಾಮಿ ಅವರು ಈಗಾಗಲೇ “ಕುಲ್ಫಿ’ ನಿರ್ಮಿಸಿದ್ದು, “ಲಂಕಾಸುರ’ ಚಿತ್ರದ ನಿರ್ಮಾಣದಲ್ಲೂ ತೊಡಗಿದ್ದರು. ನೆಗೆಟಿವ್ನಿಂದ ಡಿಜಿಟಲ್ ಫಾರ್ಮೆಟ್ಗೆ ಚಿತ್ರವನ್ನು ಬದಲಿಸಲಾಗಿದ್ದು, ಜೊತೆಗೆ ಎಫೆಕ್ಟ್ ಡಿಟಿಎಸ್, ಡಿಐ ಸೇರಿದಂತೆ ಇಡೀ ಸಿನಿಮಾವನ್ನು ತಾಂತ್ರಿಕವಾಗಿ ಅಪ್ಡೇಟ್ ಮಾಡಲಾಗಿದ್ದು, ಪ್ರೇಕ್ಷಕರಿಗೆ ಹೊಸ ಅನುಭವ ನೀಡುತ್ತದೆ ಎಂಬ ವಿಶ್ವಾಸವಿದೆ.
“ಹುಚ್ಚ’ ಚಿತ್ರದ ಈ ಎಲ್ಲಾ ಕಾರ್ಯಗಳನ್ನು “ಲಂಕಾಸುರ’ ಚಿತ್ರದ ಸಹಾಯಕ ನಿರ್ದೇಶಕ ವಿಕ್ರಮ್ ಅವರು ನಿಂತು ಮಾಡಿಸಿದ್ದು, ಈ ತಿಂಗಳಾಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.