![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 5, 2024, 7:54 PM IST
ಮುಂಬಯಿ: ಟಿ 20 ವಿಶ್ವಕಪ್ ವಿಜೇತ ತಂಡದ ರಾಜ್ಯದ ನಾಲ್ವರು ಆಟಗಾರರಾದ ಕಪ್ತಾನ ರೋಹಿತ್ ಶರ್ಮ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅವರನ್ನು ಶುಕ್ರವಾರ ಮಾಹಾರಾಷ್ಟ್ರ ವಿಧಾನ ಭವನದಲ್ಲಿ ಅಭಿನಂದಿಸಲಾಯಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ನಲ್ಲಿ ಮ್ಯಾಚ್ ಡಿಫೈನಿಂಗ್ ಕ್ಯಾಚ್ ಹಿಡಿದ ಸೂರ್ಯಕುಮಾರ್ ಯಾದವ್ ಅವರು ಮಾತನಾಡಲು ಎದ್ದು ನಿಂತಾಗ ಸಚಿವರು, ಶಾಸಕರು ಸೇರಿದಂತೆ ಸೆಂಟ್ರಲ್ ಹಾಲ್ನಲ್ಲಿದ್ದವರು ಕ್ಯಾಚ್ ಕುರಿತು ಮಾತನಾಡಬೇಕು ಎಂದು ಕೂಗಿದರು.
“ಕ್ಯಾಚ್ ಬಸ್ಲಾ ಹತಾತ್ (ಕ್ಯಾಚ್ ನನ್ನ ಕೈಗೆ ಬಂದು ಕೂತಿತು)” ಎಂದು ಸೂರ್ಯಕುಮಾರ್ ಮರಾಠಿಯಲ್ಲಿ ಹೇಳಿದರು, ಎಲ್ಲರೂ ಜೋರಾಗಿ ಹರ್ಷೋದ್ಗಾರ ಮಾಡಿದರು. ನಂತರ ಅವರು ಕ್ಯಾಚ್ ಅನ್ನು ಹೇಗೆ ತೆಗೆದುಕೊಂಡರು ಎಂದು ತಮ್ಮ ಕೈಗಳಿಂದ ಸನ್ನೆ ಮಾಡುತ್ತಾ ಮರು ಸೃಷ್ಟಿ ಮಾಡಿ ಭರ್ಜರಿ ಮನರಂಜನೆ ನೀಡಿದರು.
ಸೂರ್ಯಕುಮಾರ್ ನಂತರ ಮಾತನಾಡಿದ ತಂಡದ ನಾಯಕ ರೋಹಿತ್ ಶರ್ಮ, “ಬಾಲ್ ತನ್ನ ಕೈಯಲ್ಲಿ “ಕುಳಿತಿದೆ” ಎಂದು ಸೂರ್ಯ ಈಗ ಹೇಳಿದ್ದಾರೆ. ಚೆಂಡು ಅವರ ಕೈಯಲ್ಲಿ ಕುಳಿತಿರುವುದು ಒಳ್ಳೆಯದಾಯಿತು ಇಲ್ಲದಿದ್ದರೆ ನಾನು ಅವರನ್ನು ‘ತಂಡದಿಂದ ಹೊರಗೆ ಕೂರಿಸುತ್ತಿದ್ದೆ’ ಎಂದು ಹೇಳಿದಾಗ ಸಂಪೂರ್ಣ ಸದನ ನಗೆಗಡಲಲ್ಲಿ ತೇಲಿತು.
ರೋಹಿತ್ ತಮ್ಮ ಮರಾಠಿ ಭಾಷಣದಲ್ಲಿ, “ಭಾರತದಲ್ಲಿ ವಿಶ್ವಕಪ್ ಅನ್ನು ಮರಳಿ ತರುವುದು ಕನಸಾಗಿತ್ತು. ಇದಕ್ಕಾಗಿ ನಾವು 11 ವರ್ಷದಿಂದ ಕಾಯುತ್ತಿದ್ದೆವು. 2013ರಲ್ಲಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದೆವು. ನನ್ನ ಸಹ ಆಟಗಾರರಾದ ಶಿವಂ ದುಬೆ, ಸೂರ್ಯ ಮತ್ತು ಯಶಸ್ವಿ ಜೈಸ್ವಾಲ್ ಮಾತ್ರವಲ್ಲದೆ ಭಾರತದ ಯಶಸ್ಸಿಗೆ ಕೊಡುಗೆ ನೀಡಿದ ಎಲ್ಲರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಂತಹ ತಂಡ ಸಿಕ್ಕಿದ್ದು ನನ್ನ ಅದೃಷ್ಟ. ಎಲ್ಲರೂ ತಮ್ಮ ಪ್ರಯತ್ನದಲ್ಲಿ ಗಟ್ಟಿಯಾಗಿದ್ದರು. ಅವಕಾಶ ಬಂದಾಗ ಎಲ್ಲರೂ ಹೆಜ್ಜೆ ಹಾಕಿದರು ಎಂದರು.
#WATCH | Mumbai | Team India captain Rohit Sharma speaks in Maharashtra Vidhan Bhavan as Indian men’s cricket team members are being felicitated by CM Eknath Shinde and Deputy CM Devendra Fadnavis
(Source: Maharashtra Assembly) pic.twitter.com/I51K2KqgDV
— ANI (@ANI) July 5, 2024
ಶುಕ್ರವಾರದಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಅಧಿಕೃತ ನಿವಾಸ ವರ್ಷಾದಲ್ಲಿ ರೋಹಿತ್ ಶರ್ಮ, ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಸನ್ಮಾನಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.