Fraud Case ಷೇರು ಟ್ರೇಡಿಂಗ್ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ
Team Udayavani, Jul 5, 2024, 10:08 PM IST
ಮಂಗಳೂರು: ಷೇರು ಟ್ರೇಡಿಂಗ್ನಲ್ಲಿ ಹಣ ತೊಡಗಿಸಿ ವ್ಯಕ್ತಿಯೊಬ್ಬರು 74,18,952 ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಮಾ. 15ರಂದು ಇನ್ಸ್ಟಾಗ್ರಾಂನಲ್ಲಿ ಷೇರು ಟ್ರೇಡಿಂಗ್ ಜಾಹೀರಾತು ನೋಡಿದ್ದಾರೆ. ಜಾಹೀರಾತಿನ ಮೇಲೆ ಕ್ಲೀಕ್ ಮಾಡಿ ನೋಡಿ, ಷೇರು ಟ್ರೇಡಿಂಗ್ ಬಗ್ಗೆ ಮೇಸೆಜ್ ಮಾಡಿದಾಗ ವಾಟ್ಸಾéಪ್ಗೆ ಅಪರಿಚಿತ ವ್ಯಕ್ತಿಯ ಮೊಬೈಲ್ನಿಂದ ಲಿಂಕ್ ಬಂದಿದೆ.
ಆ ಲಿಂಕ್ ಅನ್ನು ತೆರೆದು ನೋಡಿದಾಗ ಅದರಲ್ಲಿ ಗ್ರೂಪ್ ಕಂಡು ಬಂದಿದ್ದು, ಅವರನ್ನು ಆ ಗ್ರೂಪ್ಗೆ ಸೇರಿಸಿಕೊಂಡಿದ್ದಾರೆ. ಬಳಿಕ ಆನ್ಲೈನ್ ಮೂಲಕ ತರಬೇತಿಯನ್ನೂ ನೀಡಿದ್ದಾರೆ.
ಹೆಚ್ಚಿನ ಹಣ ತೊಡಗಿಸಿದ್ದಲ್ಲಿ ಹೆಚ್ಚು ಲಾಭಗಳಿಸಬಹುದು ಎಂದು ಹೇಳಿ ಷೇರು ಟ್ರೇಡಿಂಗ್ ಬಗ್ಗೆ ಪ್ರೇರೇಪಿಸಿದ್ದಾರೆ. ಮೊದಲಿಗೆ 10,000 ರೂ. ತೊಡಗಿಸಲು ತಿಳಿಸಿ ಬ್ಯಾಂಕ್ ಖಾತೆಯ ವಿವರವನ್ನು ಕಳುಹಿಸಿದ್ದಾರೆ. ಅದರಂತೆ ದೂರುದಾರರು ಆ ವ್ಯಕ್ತಿಯ ಬ್ಯಾಂಕ್ ಖಾತೆಗೆ 10,000 ರೂ. ಹಣವನ್ನು ಪಾವತಿಸಿದ್ದಾರೆ. ಅನಂತರ ಮಾ.15ರಿಂದ ಜು. 4ರ ವರೆಗೆ ದೂರುದಾರರು ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ 73,68,952 ರೂ. ಹಾಗೂ ಉಳಿದ 50,000 ರೂ. ಹಣವನ್ನು ಕಂಪೆನಿಯವರಿಗೆ ಪೋನ್ ಪೇ ಮೂಲಕ ಪಾವತಿಸಿದ್ದಾರೆ.
ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾದ್ಯವಾಗದೇ ಇದ್ದುದರಿಂದ ಅನುಮಾನ ಬಂದು ತನ್ನ ಸ್ನೇಹಿತರಲ್ಲಿ ವಿಚಾರಿಸಿ ಮೋಸ ಹೋಗಿರುವ ವಿಚಾರ ಗಮನಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್ ಬಂಧನ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.