Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 5, 2024, 10:13 PM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ನ್ಯುಮೋನಿಯಾ : ಬಾಲಕಿ ಸಾವು

ಬದಿಯಡ್ಕ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ನೀರ್ಚಾಲು ಸಮೀಪದ ಪುದುಕೋಳಿ ನಿವಾಸಿ, ಕಾಸರಗೋಡಿನಲ್ಲಿ ಕೆನರಾ ಬ್ಯಾಂಕ್‌ ಸಿಬಂದಿ ಹರೀಶ್‌ ಅವರ ಪುತ್ರಿ ಭೂಮಿಕಾ (4) ಸಾವಿಗೀಡಾದ ಘಟನೆ ನಡೆದಿದೆ.

ಜ್ವರದಿಂದ ಬಳಲುತ್ತಿದ್ದ ಭೂಮಿಕಾಳನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವು ಸಂಭವಿಸಿತು.

ಘರ್ಷಣೆ: ಮೂವರಿಗೆ ಗಾಯ
ಕಾಸರಗೋಡು: ಕಾಂಞಂಗಾಡ್‌ ಅಲಾಮಿಪಳ್ಳಿಯ ಬಾರ್‌ನಲ್ಲಿ ನಡೆದ ಘರ್ಷಣೆಯಲ್ಲಿ ಅರಯಿ ಕಾರ್ತಿಕ್‌ ಪಿಲಿಕುನ್ನಿಲ್‌ನ ಅಮಲ್‌ ಕೃಷ್ಣ (23), ಅರಯಿ ಕಂಡಂಕುಟ್ಟಿಚ್ಚಾಲ್‌ ಪಳ್ಳಿಯ ಪಿ.ಪಿ. ವಿಷ್ಣು ಪ್ರಭಾತ್‌(26) ಮತ್ತು ಅರಯಿಯ ವಿಷ್ಣು ಪಿ.ಪಿ.(26) ಗಾಯಗೊಂಡಿದ್ದಾರೆ.

ಗಾಂಜಾ ಸೇದುತ್ತಿದ್ದ ಇಬ್ಬರ ಬಂಧನ
ಕುಂಬಳೆ: ಗಾಂಜಾ ಬೀಡಿ ಸೇದುತ್ತಿದ್ದ ತಳಂಗರೆ ನಿವಾಸಿ ಅಹಮ್ಮದ್‌ (31) ಮತ್ತು ಕೊಯಿಪ್ಪಾಡಿ ಕಡಪ್ಪುರದ ರಿಯಾಸ್‌ (33)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕೊಯಿಪ್ಪಾಡಿ ಕಡಪ್ಪುರದಲ್ಲಿ ಗಾಂಜಾ ಬೀಡಿ ಸೇದುತ್ತಿದ್ದಾಗ ಬಂಧಿಸಲಾಯಿತು.

ಫಾತಿಮತ್‌ ಸುಹರಾರನ್ನು
ಕೊಂದದ್ದು ಅಸೈನಾರ್‌: ಪೊಲೀಸ್‌
ಕಾಸರಗೋಡು: ಹೊಸದುರ್ಗ ನಾರ್ತ್‌ ಕೋಟಚ್ಚೇರಿಯ ಅವಿಯಿಲ್‌ ಅಪಾರ್ಟ್‌ಮೆಂಟ್‌ನಲ್ಲಿ ನೆಲ್ಲಿಕಟ್ಟೆ ನಿವಾಸಿ ಫಾತಿಮತ್‌ ಸುಹರಾ (42) ಅವರನ್ನು ಕೊಲೆಗೈದಿದ್ದು ಆಕೆಯ ಪ್ರಿಯತಮ ಚೆಂಗಳ ರಹಮ್ಮತ್‌ ನಗರದ ಕನಿಯಡ್ಕದ ಅಸೈನಾರ್‌(33) ಎಂಬುದಾಗಿ ತನಿಖೆಯಲ್ಲಿ ಸ್ಪಷ್ಟಗೊಂಡಿದೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಗೆ ಇರಿತದ ಗಾಯ ಮತ್ತು ತಲೆಗೆ ಗಂಭೀರ ಗಾಯಗೊಂಡಿರುವುದರಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಿದೆ.

ಅಮಿತ ಮಾತ್ರೆ ಸೇವನೆ : ಮಹಿಳೆ ಸಾವು
ಕಾಸರಗೋಡು: ಪತಿಯ ನಿಧನದ ಬಳಿಕ ಮನನೊಂದಿದ್ದ ಪತ್ನಿ ಅಮಿತ ಪ್ರಮಾಣದಲ್ಲಿ ಮಾತ್ರೆಗಳನ್ನು ಸೇವಿಸಿ ಮೃತಪಟ್ಟ ಘಟನೆ ನಡೆದಿದೆ. ಎಡನೀರಿನ ದಿ|ನಾರಾಯಣ ಅವರ ಪತ್ನಿ ಲಕ್ಷ್ಮೀ (49) ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಸಾವಿಗೀಡಾದರು. ಘಟನೆಗೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ವರ್ಷದ ಹಿಂದೆ ಪತಿ ಹೃದಯ ಸಂಬಂಧ ಅಸೌಖ್ಯದಿಂದ ಸಾವಿಗೀಡಾಗಿದ್ದರು.

ಕಾಂಞಂಗಾಡ್‌ನ‌ಲ್ಲಿ ವಿಷ ಹೊಗೆ
ನಗರಸಭಾ ಕಚೇರಿಗೆ ಮುತ್ತಿಗೆ
ಹಾಕಿದ್ದ 50 ಮಂದಿ ವಿರುದ್ಧ ಕೇಸು
ಕಾಸರಗೋಡು: ಜನರೇಟರ್‌ನಿಂದ ಹೊರ ಸೂಸಿದ ಹೊಗೆಯನ್ನು ಉಸಿರಾಡಿ ಹೊಸದುರ್ಗ ಲಿಟಿಲ್‌ ಫವರ್‌ ಹೈಯರ್‌ ಸೆಕೆಂಡರಿ ಶಾಲೆಯ ಐವತ್ತರಷ್ಟು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆಯನ್ನು ಪ್ರತಿಭಟಿಸಿ ಕಾಂಞಂಗಾಡ್‌ ನಗರಸಭಾ ಕಚೇರಿಗೆ ಮುತ್ತಿಗೆ ಹಾಕಿದ್ದ 50 ಮಂದಿಯ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ.

ಯುಡಿಎಫ್‌ ನೇತಾರರಾದ ಬಶೀರ್‌ ವೆಳ್ಳಿಕೋತ್‌, ಬಿ.ಪಿ.ಪ್ರದೀಪ್‌ ಕುಮಾರ್‌, ಎಂ.ಪಿ.ಜಾಫರ್‌, ಪಿ.ವಿ.ಸುರೇಶ್‌, ಬದ್ರುದ್ದೀನ್‌, ಹಾರಿಸ್‌ ಸಹಿತ ಕಂಡರೆ ಗುರುತು ಪತ್ತೆಹಚ್ಚಬಹುದಾದ ಇತರ 44 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಪ್ರತಿಭಟನಾಕಾರರು ಕಚೇರಿಯ ಮುಂಭಾಗದ ಗಾಜಿನ ಬಾಗಿಲು ಮುರಿದಿರುವುದಾಗಿ ಕೇಸು ದಾಖಲಿಸಲಾಗಿದೆ.

ಕಣ್ವತೀರ್ಥದಲ್ಲಿ ತೆಂಗಿನ ಮರ, ರಸ್ತೆ
ಸಮುದ್ರ ಪಾಲು; ಮನೆಗಳಿಗೆ ಭೀತಿ
ಮಂಜೇಶ್ವರ: ಕಣ್ವತೀರ್ಥದಲ್ಲಿ ಕಡಲ್ಕೊರೆತಕ್ಕೆ ಹಲವು ಮನೆಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿವೆ. ಈಗಾಗಲೇ ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ರಸ್ತೆ ಕೂಡ ನೀರಿಗೆ ಕೊಚ್ಚಿ ಹೋಗಿದೆ. ಕೆಲವು ಮನೆಗಳ ಅಂಗಳದ ವರೆಗೆ ಸಮುದ್ರ ನೀರು ತಲುಪಿದೆ.

ಟಾಪ್ ನ್ಯೂಸ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್‌ ಬಂಧನ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

dw

Kasaragod: ಸ್ಕೂಟರ್‌ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್‌ ಲಾರಿ ಹರಿದು ಸಾವು

crimebb

Kasaragod: ಅಪರಾಧ ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

2

Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್‌ ಬಂಧನ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.