Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

ಸ್ಥಳೀಯ ಸಮಸ್ಯೆ ಬಗ್ಗೆ ವರದಿ ಪ್ರಕಟಿಸಿ ಗಮನ ಸೆಳೆದಿದ್ದ ಉದಯವಾಣಿ

Team Udayavani, Jul 5, 2024, 11:43 PM IST

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

ಕುಂದಾಪುರ: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಯಳಜಿತ್‌ ಗ್ರಾಮದ ಹುಲ್ಕಡಿಕೆ ಪ್ರದೇಶಕ್ಕೆ ಬುಧವಾರ ಬೈಂದೂರು ತಾ.ಪಂ. ಕಾರ್ಯ ನಿರ್ವ ಹಣಾಧಿಕಾರಿ ಭಾರತಿ ಎನ್‌. ಭೇಟಿ ನೀಡಿ, ಸಮಸ್ಯೆಯನ್ನು ಆಲಿಸಿದರು.

ಸೇತುವೆಯಿಲ್ಲದೆ ಸ್ಥಳೀಯರು ಅನುಭವಿಸುವ ಸಂಕಷ್ಟದ ಕುರಿತು “ಉದಯವಾಣಿ’ ವರದಿ ಪ್ರಕಟಿಸಿತ್ತು.

ಈ ಸಂದರ್ಭ “ಉದಯವಾಣಿ’ ಜತೆ ಮಾತನಾಡಿದ ಅವರು, ಆ ಹೊಳೆಗೆ ಕನಿಷ್ಠವೆಂದರೂ 4 ಅಡಿ ಉದ್ದದ ಸೇತುವೆ ಬೇಕಿದೆ. ಈಗ ನರೇಗಾದಡಿ ಕಾಲು ಸಂಕ ನಿರ್ಮಿಸಲು ಅವಕಾಶವಿಲ್ಲ. ನರೇಗಾದಡಿ ಸರಕಾರ ಅವಕಾಶ ನೀಡಿದರೆ 4.90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಣ್ಣ ನೀರಾವರಿ ಇಲಾಖೆಯಿಂದ ಸೇತುವೆ ನಿರ್ಮಿಸಬಹುದು. ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಹದಗೆಟ್ಟಿರುವ ರಸ್ತೆಯ ಅಭಿವೃದ್ಧಿಗೂ ದೊಡ್ಡ ಮಟ್ಟದ ಅನುದಾನ ಅಗತ್ಯವಿದೆ ಎಂದು ತಿಳಿಸಿದರು.

ನರೇಗಾದ ಬೈಂದೂರು ತಾಲೂಕು ಸಹಾಯಕ ನಿರ್ದೇಶಕ ಸುರೇಶ್‌, ಗೋಳಿಹೊಳೆ ಗ್ರಾ.ಪಂ. ಪಿಡಿಒ ಮಾಧವ ದೇವಾಡಿಗ ಉಪಸ್ಥಿತರಿದ್ದರು.

ಉದಯವಾಣಿ ವರದಿ
ಹುಲ್ಕಡಿಕೆಯಲ್ಲಿ ಸೇತುವೆಯಿಲ್ಲದೆ ಅಲ್ಲಿನ ಸುರೇಶ್‌ ಅವರ ಮರಾಠಿ ನಾಯ್ಕ ಕುಟುಂಬವೊಂದು ವಿಶೇಷ ಚೇತನ ಮಕ್ಕಳಿಬ್ಬರನ್ನು ತುಂಬಿ ಹರಿಯುವ ಹೊಳೆಯಲ್ಲಿ ಹೆಗಲ ಮೇಲೆ ಎತ್ತಿಕೊಂಡೇ ಬರಬೇಕಿದ್ದು, ಅಲ್ಲಿಂದ 7 ಕಿ.ಮೀ. ದೂರದವರೆಗೆ ದ್ವಿಚಕ್ರ ವಾಹನದಲ್ಲಿ ಕಷ್ಟಪಟ್ಟು ಕರೆದೊಯ್ಯಬೇಕು ಅನ್ನುವ ಕುರಿತಾದ ವಿಶೇಷ ವರದಿಯನ್ನು “ಉದಯವಾಣಿ’ಯು ಜು.3ರಂದು ಮುಖಪುಟದಲ್ಲಿ ಪ್ರಕಟಿಸಿತ್ತು.

ಆ ವರದಿಗೆ ಸ್ಪಂದಿಸಿದ ಬೈಂದೂರು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿಗಳು, ಭೇಟಿ ನೀಡಿ, ಸರಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಿದ್ದಾರೆ. ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮಂಗಳವಾರವೇ ಅಲ್ಲಿಗೆ ಭೇಟಿ ನೀಡಿ, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಇಲ್ಲಿ ಈ ಕುಟುಂಬ ಮಾತ್ರವಲ್ಲ 10ಕ್ಕೂ ಮಿಕ್ಕಿ ಮನೆಯವರು ಸೇತುವೆಯಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

 

ಟಾಪ್ ನ್ಯೂಸ್

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.