Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

ಬಳ್ಳಾರಿ ಲೋಕಸಭಾ ಕ್ಷೇತ್ರ ಸೋಲಿಗೆ ನಾನೇ ಕಾರಣ ಎಂದ ಮಾಜಿ ಸಚಿವ ಬಿ. ಶ್ರೀರಾಮುಲು

Team Udayavani, Jul 6, 2024, 12:30 AM IST

BJP-flag

ಬೆಂಗಳೂರು: ಕೊನೆಗೂ ಲೋಕಸಭಾ ಸೋಲಿನ ಆತ್ಮಾವಲೋಕನ ಸಭೆಯನ್ನು ಬಿಜೆಪಿ ಪ್ರಾರಂಭಿಸಿದ್ದು, ರಾಯಚೂರು, ಕಲಬುರಗಿ, ಬಳ್ಳಾರಿ ಹಾಗೂ ಕೊಪ್ಪಳ ಕ್ಷೇತ್ರದ ಸೋಲಿನ ವಿಶ್ಲೇಷಣೆ ನಡೆದಿದ್ದು, ಬಳ್ಳಾರಿ ಸೋಲಿಗೆ ನಾನೇ ಕಾರಣ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಸಂಸದರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವೇಳೆ ಆರೋಪ-ಪ್ರತ್ಯಾರೋಪಗಳ ಸುರಿಮಳೆ ನಡೆದಿದೆ. ಕಲಬುರಗಿ ಸೋಲಿಗೆ ನಾಯಕರ ಒಳ ಒಪ್ಪಂದವೇ ಕಾರಣ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಈ ಎಲ್ಲ ಹಿನ್ನಡೆಯನ್ನು ಮೆಟ್ಟಿ ನಿಲ್ಲುವಂತೆ ನಿರ್ದೇಶನ ನೀಡಿದ್ದಾರೆ.

ಮೊದಲಿಗೆ ರಾಯಚೂರು ಲೋಕಸಭಾ ಕ್ಷೇತ್ರದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗಿದ್ದು, ರಾಜಾ ಅಮರೇಶ್‌ ನಾಯಕ್‌ಗೆ ಟಿಕೆಟ್‌ ಕೊಡಬೇಡಿ ಎಂದು ಕಾರ್ಯಕರ್ತರು ವರದಿ ನೀಡಿದ್ದರೂ, ಅವಕಾಶ ಕಲ್ಪಿಸಿದ್ದೇ ಸೋಲಿಗೆ ಕಾರಣ ಎಂಬ ಆರೋಪ ವ್ಯಕ್ತವಾಗಿದೆ. ಸಭೆಯಲ್ಲಿ ಜೆಡಿಎಸ್‌ ವಿರುದ್ಧವೂ ಸ್ಥಳೀಯರಿಂದ ಬೇಸರ ವ್ಯಕ್ತವಾಗಿದ್ದು, ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲುವುದಕ್ಕೆ ಜೆಡಿಎಸ್‌ ಕಾರಣ ಎಂಬ ನೇರ ಆರೋಪ ವ್ಯಕ್ತವಾಗಿದೆ. ಚುನಾವಣ ಪೂರ್ವದಲ್ಲಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾ ನಾಯಕರ ಸಭೆ ನಡೆಸಬೇಕಿತ್ತು. ಬಿ.ವಿ. ನಾಯ್ಕ ಪರ ಒಲವಿದ್ದರೂ ಟಿಕೆಟ್‌ ನೀಡದಿರುವುದು ತಪ್ಪಾಗಿದೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ “ಕೈ’ ಹಿಡಿದ “ಗ್ಯಾರಂಟಿ’!
ಕೊಪ್ಪಳ ಲೋಕಸಭಾ ಕ್ಷೇತ್ರದ ಪರಾಮರ್ಶೆ ಸಭೆಯಲ್ಲಿ ಶಾಸಕ ಗಾಲಿ ಜನಾರ್ದನ್‌ ರೆಡ್ಡಿ, ಮಾಜಿ ಸಚಿವ ಹಾಲಪ್ಪ ಆಚಾರ್‌, ಪರಾಜಿತ ಅಭ್ಯರ್ಥಿ ಡಾ.ಬಸವರಾಜ್‌ ಕ್ಯಾವಟೂರು ಭಾಗಿಯಾಗಿದ್ದರು. ಅಭ್ಯರ್ಥಿ ಬದಲಾವಣೆ ಸೋಲಿಗೆ ಕಾರಣವಲ್ಲ, ಸಂಗಣ್ಣ ಕರಡಿ ಸ್ಪರ್ಧಿಸಿದ್ರೆ ಇನ್ನೂ ಹೆಚ್ಚು ಅಂತರದಲ್ಲಿ ಪಕ್ಷ ಸೋಲುತ್ತಿತ್ತು. ಟಿಕೆಟ್‌ ಘೋಷಣೆ ಸ್ವಲ್ಪ ವಿಳಂಬವಾಗಿದ್ದರಿಂದ ತಯಾರಿ ಕಷ್ಟವಾಯ್ತು. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಕೈ ಹಿಡಿದಿದೆ. ಸಂಗಣ್ಣ ಕರಡಿ ಪಕ್ಷ ತೊರೆದಿದ್ದು ಒಂದಿಷ್ಟು ಮತ ಪರಿವರ್ತನೆಗೆ ಕಾರಣವಾಗಿದೆ. ಹಿಟ್ನಾಳ್‌ ಕುಟುಂಬದ ಬಗ್ಗೆ ಅನುಕಂಪದ ಅಲೆ ಕೆಲಸ ಮಾಡಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.