Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ ಗೆಲುವು
Team Udayavani, Jul 6, 2024, 12:26 AM IST
ಚೆನ್ನೈ: ದಕ್ಷಿಣ ಆಫ್ರಿಕಾ ವನಿತೆಯರು ಭಾರತಕ್ಕೆ ಆಗಮಿಸಿದ ಬಳಿಕ ಮೊದಲ ಗೆಲುವಿನ ಸಂಭ್ರಮ ಆಚರಿಸಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 12 ರನ್ ಸೋಲುಣಿಸಿದ್ದಾರೆ.
ದಕ್ಷಿಣ ಆಫ್ರಿಕಾ 4 ವಿಕೆಟಿಗೆ 189 ರನ್ ಪೇರಿಸಿದರೆ, ಭಾರತ 4 ವಿಕೆಟಿಗೆ 177 ರನ್ ಹೊಡೆಯಿತು. ಇದಕ್ಕೂ ಮೊದಲಿನ ಏಕದಿನ ಹಾಗೂ ಟೆಸ್ಟ್ ಸರಣಿಗಳೆರಡನ್ನೂ ದಕ್ಷಿಣ ಆಫ್ರಿಕಾ ಕಳೆದುಕೊಂಡಿತ್ತು.
ಚೇಸಿಂಗ್ ವೇಳೆ ಸ್ಮತಿ ಮಂಧನಾ ಉತ್ತಮ ಫಾರ್ಮ್ ಮುಂದುವರಿಸಿ 30 ಎಸೆತಗಳಿಂದ 46 ರನ್, (7 ಫೋರ್, 2 ಸಿಕ್ಸರ್), ಜೆಮಿಮಾ ಅಜೇಯ 53 ರನ್ (30 ಎಸೆತ, 7 ಬೌಂಡರಿ, 1 ಸಿಕ್ಸರ್), ಕೌರ್ 35 ರನ್ ಮಾಡಿದರು.
ಬ್ರಿಟ್ಸ್, ಕಾಪ್ ಅರ್ಧ ಶತಕ
ದಕ್ಷಿಣ ಆಫ್ರಿಕಾದ ಸವಾಲಿನ ಮೊತ್ತಕ್ಕೆ ಕಾರಣವಾದದ್ದು ತಾಜ್ಮಿನ್ ಬ್ರಿಟ್ಸ್-ಮರಿಜಾ ಕಾಪ್ ಅವರ ಅರ್ಧ ಶತಕ. ನಾಯಕಿ ಲಾರಾ ವೋಲ್ವಾರ್ಟ್ ಮತ್ತು ಬ್ರಿಟ್ಸ್ ಮೊದಲ ವಿಕೆಟಿಗೆ 7.1 ಓವರ್ಗಳಿಂದ 50 ರನ್ ಒಟ್ಟುಗೂಡಿಸಿದರು. ಇದರಲ್ಲಿ ವೋಲ್ವಾರ್ಟ್ ಗಳಿಕೆಯೇ 33 ರನ್. ದ್ವಿತೀಯ ವಿಕೆಟಿಗೆ ಬ್ರಿಟ್ಸ್-ಕಾಪ್ 96 ರನ್ ಪೇರಿಸಿದರು. ಬ್ರಿಟ್ಸ್ 81 ರನ್ ಮಾಡಿದರೆ (56 ಎಸೆತ, 10 ಬೌಂಡರಿ, 3 ಸಿಕ್ಸರ್), ಕಾಪ್ 33 ಎಸೆತ ನಿಭಾಯಿಸಿ 57 ರನ್ ಹೊಡೆದರು (8 ಬೌಂಡರಿ, 1 ಸಿಕ್ಸರ್).
ಭಾರತದ ಪರ ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ತಲಾ 2 ವಿಕೆಟ್ ಉರುಳಿಸಿದರು.
ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ-4 ವಿಕೆಟಿಗೆ 189 (ಬ್ರಿಟ್ಸ್ 81, ಕಾಪ್ 57, ವೋಲ್ವಾರ್ಟ್ 33, ಪೂಜಾ 23ಕ್ಕೆ 2, ರಾಧಾ 40ಕ್ಕೆ 2). ಭಾರತ-4 ವಿಕೆಟಿಗೆ 177 (ಜೆಮಿಮಾ ಔಟಾಗದೆ 53, ಮಂಧನಾ 46, ಕೌರ್ 35).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.