CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಕೊಲೆಯತ್ನ ಪ್ರಕರಣವೊಂದರಲ್ಲಿ ವಿರುದ್ಧ ಸಾಕ್ಷಿ ನುಡಿದ ಸಾಕ್ಷಿದಾರರು
Team Udayavani, Jul 6, 2024, 7:30 AM IST
ಮಂಗಳೂರು: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಾಕ್ಷಿದಾರರು ರಾಜಿಯಾಗಿ ಅಭಿಯೋಜನೆಗೆ ವಿರುದ್ಧವಾಗಿ ಸಾಕ್ಷಿ ನುಡಿದರೂ ತನಿಖಾಧಿಕಾರಿ ಹಾಜರುಪಡಿಸಿದ ಸಿಸಿ ಕೆಮರಾ ದೃಶ್ಯಾವಳಿ ಮತ್ತು ಫೂರೆನ್ಸಿಕ್ ವರದಿಯನ್ನೇ ಬಲವಾದ ಸಾಕ್ಷಿಯೆಂದು ಪರಿಗಣಿಸಿ ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಸುರತ್ಕಲ್ ಇಡ್ಯಾ ಗ್ರಾಮದ ಕಾನಕಟ್ಲ ಜನತಾ ಕಾಲನಿ ನಿವಾಸಿ ರಾಜೇಶ್ ದೇವಾಡಿಗ ಯಾನೆ ರಾಜಾ (42) ಮತ್ತು ಜೋಕಟ್ಟೆ 62ನೇ ತೋಕೂರು ಶೇಡಿಗುರಿ ಗ್ರಾಮದ ಜಗದೀಶ್ ಯಾನೆ ಜಗ್ಗು (45) ಶಿಕ್ಷೆಗೆ ಒಳಗಾದವರು.
ಪ್ರಕರಣದ ವಿವರ
ಶಿಕ್ಷೆಗೊಳಗಾಗಿರುವ ರಾಜೇಶ್, ದೂರುದಾರ ಇಡ್ಯಾ ಜನತಾ ಕಾಲನಿ ನಿವಾಸಿ ಜೀವನ್ ಮಸ್ಕರೇನಸ್ (28) ಅವರು 2016 ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ರಾಜೇಶ್ ಕೋರ್ಟ್ಗೆ ಹಾಜರಾಗದೆ ಪ್ರಕರಣದ ವಿಚಾರಣೆ ದಿನಾಂಕ ಮುಂದೂಡಿಕೆಯಾಗುತ್ತಿತ್ತು. ಇದರಿಂದ ಜೀವನ್ಗೆ ತೊಂದರೆಯಾಗುತ್ತಿದ್ದರಿಂದ ಅನೇಕ ಬಾರಿ ಇವರ ನಡುವೆ ಮಾತಿನ ಚಕಮಕಿ ನಡೆದಿತ್ತು.
2019ರ ಡಿ.14ರಂದು ರಾತ್ರಿ 10.30ರ ವೇಳೆಗೆ ಇಡ್ಯಾ ಬಳಿಯ ಬಾರೊಂದರಲ್ಲಿ ಜೀವನ್ ಹಾಗೂ ಆತನ ಗೆಳೆಯ ಪ್ರಶಾಂತ್ ಮದ್ಯ ಸೇವಿಸುತ್ತಿದ್ದಾಗ, ರಾಜೇಶ್ ಮತ್ತು ಜಗದೀಶ್ ಅಲ್ಲಿಗೆ ಬಂದಿದ್ದರು. ಜೀವನ್ನನ್ನು ನೋಡಿದ ಆತ ಹೊರಗೆ ಹೋಗಿ ಕತ್ತಿ ತಂದು ಭುಜಕ್ಕೆ, ಬಲಕೈ ಮತ್ತು ಮೊಣಗಂಟಿಗೆ ಹೊಡೆದಿದ್ದ.
ಸುರತ್ಕಲ್ನ ಅಂದಿನ ಪಿಎಸ್ಐ ಸುಂದರಿ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಜತೆಗೆ ಬಾರ್ನ ಸಿಸಿ ಕೆಮರಾ ದೃಶ್ಯಾವಳಿಯನ್ನು ಸಂಗ್ರಹಿಸಿ ನೀಡಿದ್ದರು.
ಪ್ರಕರಣದಲ್ಲಿ 31 ಸಾಕ್ಷಿದಾರರು ಮತ್ತು 58 ದಾಖಲೆಗಳನ್ನು ಗುರುತಿಸಲಾಗಿತ್ತು. ಸಾಕ್ಷಿದಾರರು ಅಭಿಯೋಜನೆಗೆ ವಿರುದ್ಧವಾಗಿ ಸಾಕ್ಷಿ ನುಡಿದರೂ ಸಿಸಿ ಕೆಮರಾ ದೃಶ್ಯಾವಳಿ ಮತ್ತು ಫೋರೆನ್ಸಿಕ್ ವರದಿಯನ್ನು ಸಾಕ್ಷಿ ಎಂದು ಪರಿಗಣಿಸಿದೆ. 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ರಾಜೇಶ್ನಿಗೆ 323 ದಿನಗಳ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ, ಜಗದೀಶನಿಗೆ 39 ದಿನಗಳ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇಬ್ಬರೂ ವಿಚಾರಣಾಧೀನ ಕೈದಿಗಳಾಗಿ ಅದಕ್ಕಿಂತಲೂ ಹೆಚ್ಚು ದಿನ ಜೈಲಿನಲ್ಲಿದ್ದ ಕಾರಣ ಜೈಲು ಶಿಕ್ಷೆಯನ್ನು ಮನ್ನಾ ಮಾಡಲಾಗಿದೆ.
ಸರಕಾರಿ ಅಭಿಯೋಜಕರಾಗಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!
Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.