State Government ಎಸ್ಸಿ, ಎಸ್ಟಿ ಕಾಸು ಮತ್ತೆ ಗ್ಯಾರಂಟಿಗೆ!
ಎಸ್ಸಿಎಸ್ಪಿ, ಟಿಎಸ್ಪಿಗೆ ಒಟ್ಟು 39,121 ಕೋಟಿ ರೂ. ನಿಗದಿ; ಈ ಪೈಕಿ 14,730.53 ಕೋ.ರೂ. ಗ್ಯಾರಂಟಿಗೆ; ವಿಪಕ್ಷಗಳು ಗರಂ
Team Udayavani, Jul 6, 2024, 7:01 AM IST
ಬೆಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ.
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿಗೆ ನಿಗದಿ ಯಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆ ಗಳಿಗೆ ವರ್ಗಾಯಿಸಿರುವುದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಸರಕಾರದ ಈ ನಡೆ ಮತ್ತೊಮ್ಮೆ ವಿಪಕ್ಷಗಳ ಟೀಕೆಗೆ ಆಹಾರವಾಗಿದೆ.
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಕಾರ್ಯಕ್ರಮಗಳಿಗಾಗಿ ಈ ವರ್ಷ 39,121.46 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮತಿ ನೀಡಲಾಗಿದೆ. ಈ ಪೈಕಿ ಪರಿಶಿಷ್ಟ ಜಾತಿಗೆ 27,673.93 ಕೋಟಿ ರೂ., ಪರಿಶಿಷ್ಟ ಪಂಗಡಕ್ಕೆ 11,445.51 ಕೋಟಿ ರೂ. ಮೀಸಲಿಡ ಲಾಗಿದೆ. ಆದರೆ ಈ ಪೈಕಿ 14,730.53 ಕೋಟಿ ರೂ.ಗಳನ್ನು ಸರಕಾರದ 5 ಗ್ಯಾರಂಟಿ ಯೋಜನೆಗೆ ವರ್ಗಾಯಿಸಲಾಗಿದೆ.
ಇದರ ಜತೆಗೆ ಭಾಗ್ಯಲಕ್ಷ್ಮಿ ಯೋಜನೆಗೆ 70.29 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 14,800.82 ಕೋಟಿ ರೂ. ಹಣವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಉಪಯೋಜನೆಯಿಂದ ಅನ್ಯ ಕಾರ್ಯಕ್ಕೆ ಹಂಚಿಕೆ ಮಾಡಲಾಗಿದೆ.
ವಿವಾದ; ಸಿಎಂ ಸಮರ್ಥನೆ
ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ಶಾಸಕರು ಭಾಗಿಯಾಗಿದ್ದ ಸಭೆಯಲ್ಲೇ ಈ ನಿರ್ಧಾರ ತೆಗೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಈ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಹಣವನ್ನು ನಾವು ಅದೇ ವರ್ಗದ ಜನತೆಗೆ ನೀಡುತ್ತೇವೆ. ಇದಕ್ಕಾಗಿ ಕಳೆದ ಬಾರಿ ಕಾಯ್ದೆಯ 7 (ಸಿ) ಗೆ ತಿದ್ದುಪಡಿ ಮಾಡಲಾಗಿದೆ. 7 (ಡಿ)ಗೆ ತಿದ್ದುಪಡಿ ತರುವಂತೆಯೂ ಆಗ್ರಹ ವ್ಯಕ್ತವಾಗಿದೆ. ಕಳೆದ ಬಾರಿ ನಿಗದಿಯಾಗಿದ್ದ ಹಣದಲ್ಲಿ 90 ಕೋಟಿ ರೂ. ಉಳಿಕೆಯಾಗಿದ್ದು, ಏಕೆ ಖರ್ಚು ಮಾಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಲ್ಲಿ 22.45 ಲಕ್ಷ ಪರಿಶಿಷ್ಟ ಜಾತಿ ಹಾಗೂ 8.66 ಲಕ್ಷ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತಲಾ 2,000 ರೂ.ಗಳಂತೆ ವಾರ್ಷಿಕ 24,000 ರೂ. ನೀಡಲು 7,881.91 ಕೋಟಿ ರೂ.ಗಳನ್ನು ಎಸ್ಸಿಎಸ್ಪಿ, ಟಿಎಸ್ಪಿಯಿಂದ ವರ್ಗಾಯಿಸಲಾಗುತ್ತಿದೆ. ಗೃಹ ಜ್ಯೋತಿಗೆ ಸಂಬಂಧಪಟ್ಟಂತೆ 2,585.93 ಕೋಟಿ ರೂ. ಹಣ ಬಳಕೆ ಮಾಡಲಾಗುತ್ತಿದೆ. ಸರಕಾರದ ಈ ನಿರ್ಧಾರವನ್ನು ಬಿಜೆಪಿ ಬಲವಾಗಿ ಖಂಡಿಸಿದೆ.
ವಿದ್ಯಾರ್ಥಿಗಳಿಗೆ ಬಂಪರ್ ಘೋಷಣೆ
-ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್
-ಹಾಸ್ಟೆಲ್ನಲ್ಲಿ ಹೈಟೆಕ್ ಲೈಬ್ರರಿ, ಎಲ್ಲ ರೀತಿಯ ಪುಸ್ತಕಗಳ ವ್ಯವಸ್ಥೆ
-ಇಂಥ ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಹಾಯಧನ
-ಪ. ಜಾತಿ, ಪಂಗಡದ ವಿದ್ಯಾರ್ಥಿ ಗಳಿಗೆ ಲ್ಯಾಪ್ಟಾಪ್: 300 ಕೋಟಿ ರೂ. ವೆಚ್ಚ ಸಾಧ್ಯತೆ
-ಪಿಜಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ಒದಗಿಸುವ ಬಗ್ಗೆ ಪರಿಶೀಲನೆ
-ಖಾಲಿ ಇರುವ ಹೋಬಳಿ ಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲು ಸೂಚನೆ
ಬಿಜೆಪಿ ಅಧಿಕಾರ ದಲ್ಲಿರುವ ಯಾವು ದಾದರೂ ಒಂದು ರಾಜ್ಯದಲ್ಲಿ ಇಂಥ ಯೋಜನೆ ಅನುಷ್ಠಾನ ಮಾಡಿದ್ದಾರೆಯೇ? ಇಂಥ ಯೋಜನೆ ಯಾವಾಗ ಜಾರಿಗೆ ತರುತ್ತೀರಿ ಎಂದು ಮೊದಲು ಪ್ರಧಾನಿ ನರೇಂದ್ರ ಮೋದಿ ಯವರನ್ನು ಪ್ರಶ್ನೆ ಮಾಡಿ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಸುಮಾರು 15 ಸಾವಿರ ಕೋಟಿ ರೂ.ಗಳಷ್ಟು ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ವೆಚ್ಚ ಮಾಡುತ್ತಿ¨ªಾರೆ. ಗ್ಯಾರಂಟಿ ಹೆಸರಿನಲ್ಲಿ ತೆರಿಗೆ ಹೆಚ್ಚಳ ಮಾಡಿ ಸಾರ್ವಜನಿಕರ ಸುಲಿಗೆ ಮಾಡಿದವರು ಈಗ ದಲಿತರಿಗೆ ಮೀಸಲಿಟ್ಟ ಹಣವನ್ನೂ ಲೂಟಿ ಮಾಡಿದ್ದಾರೆ. ಗ್ಯಾರಂಟಿ ಸೋಗಿನಲ್ಲಿ ಇನ್ನೆಷ್ಟು ದಿನ ಈ ಬೃಹನ್ನಾಟಕ ಸ್ವಾಮಿ?
-ವಿ. ಸುನಿಲ್ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.