Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ


Team Udayavani, Jul 6, 2024, 10:18 AM IST

Kaagada movie review

ನಾಯಕ ಹಿಂದೂ, ನಾಯಕಿ ಮುಸ್ಲಿಂ.. ಇವರಿಬ್ಬರ ನಡುವೆ ಪ್ರೇಮಾಂಕುರ.. ಪ್ರೀತಿಯ ಅಮಲಿನಲ್ಲಿ ತೇಲಾಡುತ್ತಿರುವ ಜೋಡಿಗೆ ಅಡ್ಡ ಬರುವ ಧರ್ಮ, ಅಲ್ಲಿಂದ “ಯುದ್ಧ ಶುರು’… ಇಂತಹ “ಸೂಕ್ಷ್ಮ’ ಅಂಶ ಗಳನ್ನು ಒಳಗೊಂಡಿರುವ ಕಥೆಯ ಜೊತೆಗೆ ಒಂದೊಳ್ಳೆಯ ಸಂದೇಶ ದೊಂದಿಗೆ ತೆರೆಗೆ ಬಂದಿರುವ ಚಿತ್ರ “ಕಾಗದ’. ಇಡೀ ಸಿನಿಮಾದ ಮುಖ್ಯ ಉದ್ದೇಶ ಪ್ರೀತಿ ಹಾಗೂ ಮಾನವೀಯತೆ. ಅಂತಿಮವಾಗಿ ಮನುಷ್ಯನಲ್ಲಿ ಇರಬೇಕಾದ ಗುಣ ಮನುಷ್ಯತೆ ಹೊರತು ದ್ವೇಷವಲ್ಲ. ಜಾತಿ-ಧರ್ಮದ ಸಂಘರ್ಷಕ್ಕಿಂತ ಪ್ರೀತಿ, ಸ್ನೇಹದ ಆಲಿಂಗನ ಮುಖ್ಯ ಎಂಬ ಅಂಶದೊಂದಿಗೆ ಮೂಡಿ ಬಂದಿರುವ ಚಿತ್ರವಿದು.

ಇದೊಂದು ಟೀನೇಜ್‌ ಲವ್‌ಸ್ಟೋರಿ. ಹಾಗಾಗಿ, ರೆಗ್ಯುಲರ್‌ ಕಮರ್ಷಿಯಲ್‌ ಸಿನಿಮಾಗಳಲ್ಲಿರುವ ಬಿಲ್ಡಪ್‌ಗ್ಳಿಂದ ಚಿತ್ರ ಮುಕ್ತ. ನಮ್ಮ ಸುತ್ತಲ ಪರಿಸರದಲ್ಲೇ ನಡೆಯುವ ಕಥೆಯಂತೆ ಸಿನಿಮಾವನ್ನು ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಕಥೆಯ ಬಗ್ಗೆ ಹೇಳುವುದಾದರೆ ಆಟ, ಪಾಠ ಎರಡರಲ್ಲೂ ಮುಂದಿರುವ ನಾಯಕ ಶಿವುಗೆ, ಆಯೇಷಾಳೊಂದಿಗೆ ಪ್ರೇಮಾಂಕುರ. ಈ ಮುಗ್ಧ ಜೋಡಿಯ ನೋಟ, ಭೇಟಿ, ಪ್ರೀತಿಯ ಸೇತುವೆಯಾಗುವ ಕಾಗದ ಒಂದು ಕಡೆಯಾದರೆ, ಊರ ಮಂದಿಯ ಪೂಜೆ, ಜಾತ್ರೆಯ ಚರ್ಚೆ.. ಈ ನಡುವೆಯೇ ಊರಲ್ಲೊಂದು ನಮಾಜ್‌ಗೆ ಮಸೀದಿ ಕಟ್ಟಿಸಬೇಕೆಂಬ ಕನಸಿನ ಮೌಳಿ.. ಹೀಗೆ ಸಾಗುವ ಕಥೆಯಲ್ಲಿ ಹಲವು ಟ್ವಿಸ್ಟ್‌ಗಳಿವೆ.

ಮುಖ್ಯವಾಗಿ ಈ ಸಿನಿಮಾ ಭೈರವಕೋಟೆ ಹಾಗೂ ಕೆಂಪ್ನಳ್ಳಿ ಎಂಬ ಎರಡು ಊರುಗಳ ಮಧ್ಯೆ ನಡೆಯುವ ಕಥೆ ಹೊಂದಿದೆ. ಹಾಗಾಗಿ, ಚಿತ್ರದಲ್ಲಿ ಒಂದಷ್ಟು ಗ್ರಾಮೀಣ ಸೊಗಡನ್ನು ನೋಡಬಹುದು.

ಒಂದು ಪ್ರಯತ್ನವಾಗಿ “ಕಾಗದ’ ಮೆಚ್ಚುಗೆ ಪಡೆಯುವ ಸಿನಿಮಾ. ಸಾಮಾನ್ಯವಾಗಿ ಹಿಂದೂ-  ಮುಸ್ಲಿಂ ಲವ್‌ಸ್ಟೋರಿ ಕಥೆ ಮಾಡುವಾಗ ಇರುವ ರೆಗ್ಯುಲರ್‌ ಅಂಶಗಳನ್ನು ಬಿಟ್ಟು ಒಂದಷ್ಟು ಹೊಸದನ್ನು ಹೇಳಲು ತಂಡ ಪ್ರಯತ್ನಿಸಿದೆ.

ನಾಯಕ ಆದಿತ್ಯ ಭರವಸೆ ಮೂಡಿಸಿದ್ದಾರೆ. ಮುಗ್ಧ ಹುಡುಗನ ಪ್ರೀತಿ, ಈ ನಡುವಿನ ಗೊಂದಲ, ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವ ರೀತಿ.. ಇಂತಹ ಸನ್ನಿವೇಶಗಳಲ್ಲಿ ಆದಿತ್ಯ ಗಮನ ಸೆಳೆಯುತ್ತಾರೆ. ನಾಯಕಿ ಅಂಕಿತಾ ಜಯರಾಂ ಭವಿಷ್ಯದಲ್ಲಿ ಕನ್ನಡ ಚಿತ್ರರಂಗಕ್ಕೆ ಭರವಸೆಯ ನಾಯಕಿ ಯಾಗುವ ಲಕ್ಷಣ ತೋರಿದ್ದಾರೆ. ಉಳಿ ದಂತೆ ಬಲರಾಜವಾಡಿ ನೀನಾಸಂ ಅಶ್ವಥ್‌, ಮಠ ಕೊಪ್ಪಳ, ಶಿವಮಂಜು, ನೇಹಾ ಪಾಟೀಲ್‌ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಆರ್.ಪಿ

ಟಾಪ್ ನ್ಯೂಸ್

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.