Iran Reformist: ಇರಾನ್ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್ ಗೆ ಜಯ, ಜಲೀಲಿಗೆ ಸೋಲು
ಗೆಲುವು ಸಾಧಿಸಿರುವ ಪೆಝೆಶ್ಕಿಯಾನ್ ತನ್ನ ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Team Udayavani, Jul 6, 2024, 12:17 PM IST
ಟೆಹ್ರಾನ್: ಇರಾನ್ ನ ಸುಧಾರಣಾವಾದಿ ಅಭ್ಯರ್ಥಿ ಮಸೌದ್ ಪೆಝೆಶ್ಕಿಯಾನ್ ಶನಿವಾರ (ಜುಲೈ 06) ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಆಲ್ಟ್ರಾ ಕನ್ಸರ್ವೇಟಿವ್ ನ ಸಯೀದ್ ಜಲೀಲಿ ಅವರನ್ನು ಸೋಲಿಸಿ ಗೆಲುವು ಸಾಧಿಸಿರುವುದಾಗಿ ಇರಾನ್ ನ ಆಂತರಿಕ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ:Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ
ಅಧ್ಯಕ್ಷೀಯ ಚುನಾವಣೆಯಲ್ಲಿ 30 ಲಕ್ಷ ಮತದಾನವಾಗಿದ್ದು, ಪೆಝೆಶ್ಕಿಯಾನ್ 16 ಲಕ್ಷಕ್ಕೂ ಅಧಿಕ ಮತ ಪಡೆದು ಜಯಗಳಿಸಿದ್ದಾರೆ. ಸಯೀದ್ ಜಲೀಲಿ 13 ಲಕ್ಷಕ್ಕೂ ಅಧಿಕ ಮತ ಪಡೆದು ಪರಾಜಯಗೊಂಡಿರುವುದಾಗಿ ಚುನಾವಣಾಧಿಕಾರಿ ಮೋಹ್ಸೆನ್ ಇಸ್ಲಾಮಿ ತಿಳಿಸಿದ್ದಾರೆ.
ಶೇ.49.8ರಷ್ಟು ಮತದಾನವಾಗಿತ್ತು. ಸುಮಾರು 6,00,000 ಲಕ್ಷಕ್ಕೂ ಅಧಿಕ ಮತಗಳು ಅಸಿಂಧುವಾಗಿರುವುದಾಗಿ ವರದಿ ವಿವರಿಸಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪೆಝೆಶ್ಕಿಯಾನ್ ತನ್ನ ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದ್ದು, ಪ್ರೀತಿಯಿಂದ ದೇಶಕ್ಕಾಗಿ ದುಡಿಯುವುದಾಗಿ ತಿಳಿಸಿದ್ದಾರೆ.
ನೆರೆಹೊರೆಯ ಎಲ್ಲಾ ದೇಶಗಳ ಜತೆಗಿನ ಸ್ನೇಹ ಮುಂದುವರಿಸುವುದಾಗಿ ತಿಳಿಸಿರುವ ಪೆಝೆಶ್ಕಿಯಾನ್, ದೇಶದ ಅಭಿವೃದ್ಧಿಗೆ ನಾವು ಎಲ್ಲರ ಸ್ನೇಹವನ್ನು ಗಳಿಸಬೇಕಾಗಿದೆ ಎಂದು ಟೆಲಿವಿಷನ್ ಭಾಷಣದಲ್ಲಿ ಹೇಳಿದ್ದಾರೆ.
ಇರಾನ್ ನ ಆಲ್ಟ್ರಾಕನ್ಸರ್ವೇಟಿವ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ದೇಶದಲ್ಲಿ ಚುನಾವಣೆ ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಐತಿಹಾಸಿಕ ಕಡಿಮೆ ಪ್ರಮಾಣದ ಮತದಾನವಾಗಿರುವುದಕ್ಕೆ ಸಾಕ್ಷಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.