![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 6, 2024, 1:54 PM IST
ಹುಬ್ಬಳ್ಳಿ: ಮಹಾದಾಯಿ ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು. ನ್ಯಾಯಾಧಿಕರಣದ ಆದೇಶದ ನಂತರ ಯೋಜನೆಗೆ ಸಮಿತಿಯನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಮಹದಾಯಿ ಯೋಜನೆಗೂ ಸಮಿತಿಯನ್ನು ನೇಮಕ ಮಾಡಲಾಗಿದೆ ವಿನಃ ಗೋವಾ ಮುಖ್ಯಮಂತ್ರಿ ಮನವಿ ಮೇರೆಗೆ ಈ ಸಮಿತಿ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಪ್ರವಾಹ ಸಮಿತಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಲಿದೆ. ಮಹದಾಯಿ ವ್ಯಾಪ್ತಿಯಲ್ಲಿ ಏನೆಲ್ಲಾ ಚಟುವಟಿಕೆ ನಡೆದಿವೆ ಅನ್ನೋದರ ಅಧ್ಯಯನ ಮಾಡುತ್ತದೆ. ಹಾಗೆಂದು ಈ ಸಮಿತಿ ಕೇಂದ್ರಕ್ಕೆ ವರದಿ ನೀಡುವುದಿಲ್ಲ. ಗೋವಾ ಮುಖ್ಯಮಂತ್ರಿ ಮನವಿ ಮೇರೆಗೆ ಈ ಸಮಿತಿ ಬರುತ್ತಿಲ್ಲ. ಇದೊಂದು ಸಹಜ ಪ್ರಕ್ರಿಯೆ ಭಾಗವಾಗಿ ಈ ಸಮಿತಿ ಭೇಟಿ ಕೊಡುತ್ತಿದೆ ಎಂದರು.
ಈಗಾಗಲೇ ಮಹದಾಯಿ ಯೋಜನೆಯ ಡಿಪಿಎಆರ್ ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದೆ. 52 ಹೆಕ್ಟರ್ ಪ್ರದೇಶದ ದಟ್ಟ ಅರಣ್ಯದಲ್ಲಿ ಯೋಜನೆ ಕೈಗೊಳ್ಳಲು ಅನುಮತಿ ಬೇಕಿದೆ. ಟೈಗರ್ ಕಾರಿಡಾರ್ ನಲ್ಲಿ ಅನುಮತಿ ಅಗತ್ಯವಿದೆ. ವನ್ಯಜೀವಿ ಮಂಡಳಿ ಅನುಮತಿ ಸಿಕ್ಕರೆ ಯೋಜನೆ ಕಾಮಗಾರಿ ಆರಂಭವಾಗುತ್ತದೆ. ಪ್ರವಾಹ ಸಮಿತಿ ಭೇಟಿಯಿಂದ ಕರ್ನಾಟಕಕ್ಕೆ ಯಾವುದೇ ರೀತಿಯ ಧಕ್ಕೆಯಿಲ್ಲ. ಈಗಾಗಲೇ ಕೇಂದ್ರ ಕೊಟ್ಟಿರುವ ಡಿಪಿಎಆರ್ ಅನುಮತಿಗೂ ತೊಂದರೆ ಅಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.