Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
Team Udayavani, Jul 6, 2024, 6:05 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ ಜಲ ಚಟುವಟಿಕೆಗಳು ಮತ್ತು ಚಾರಣದಲ್ಲಿ ತೊಡಗುವುದನ್ನು ನಿಷೇಧಿಸಿದೆ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜುಲೈ 6ರಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಆದೇಶವು ತತ್ ಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಸೂಚನೆ ಬರುವವರೆಗೂ ಜಾರಿಯಲ್ಲಿರುತ್ತದೆ.
ಆದೇಶದ ಪ್ರಕಾರ, ಜಲಪಾತಗಳು, ತೊರೆಗಳು, ನದಿಗಳು, ಸಮುದ್ರ ಮತ್ತು ಜಲಾಶಯಗಳಲ್ಲಿ ಈಜುವುದು, ಜಲಮೂಲಗಳಿಗೆ ಪ್ರವೇಶಿಸುವುದು ಮತ್ತು ಯಾವುದೇ ಸಾಹಸ ಚಟುವಟಿಕೆಗಳನ್ನು ಕೈಗೊಳ್ಳುವುದು ಸೇರಿದಂತೆ ನೀರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ, 2005 ರ ಸೆಕ್ಷನ್ 34 (ಸಿ) ಮತ್ತು ಭಾರತೀಯ ನಾಗರಿಕ ರಕ್ಷಣಾ ಸಂಹಿತೆ, 2023 ರ ಸೆಕ್ಷನ್ 152 ಮತ್ತು 163 ರ ಅಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಚಾರಣ ನಿಷೇಧ
ಪ್ರತ್ಯೇಕ ಅಧಿಸೂಚನೆಯಲ್ಲಿ, ಜಿಲ್ಲಾಡಳಿತ ಮಳೆಗಾಲದಲ್ಲಿ ಜಿಲ್ಲೆಯ ಪರ್ವತ ಶಿಖರಗಳಲ್ಲಿ ಚಾರಣ ಮತ್ತು ಸಾಹಸ ಚಟುವಟಿಕೆಗಳನ್ನು ನಿಷೇಧಿಸಿದೆ.
ನಿರೀಕ್ಷಿತ ವ್ಯಾಪಕ ಮಳೆ ಮತ್ತು ಭೂಕುಸಿತಗಳು, ಮಣ್ಣು ಕುಸಿತಗಳು, ಸಿಡಿಲು ಮತ್ತು ಮರಗಳು ಬೀಳುವಂತಹ ಸಂಭಾವ್ಯ ಅಪಾಯಗಳನ್ನು ತಪ್ಪಿಸುವ ಸಲುವಾಗಿ ನಿಷೇಧ ಮಾಡಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ತಮ್ಮ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು, ಯಾವುದೇ ಅಹಿತಕರ ಘಟನೆಗಳನ್ನು ನಡೆಯದೇ ಇರಲು ಈ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಡಳಿತ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.