ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
Team Udayavani, Jul 6, 2024, 8:53 PM IST
ಮಂಗಳುರು: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಏಳು ವರ್ಷ ಹೋರಾಟ ನಡೆಸಿ ತೆರವುಗೊಳಿಸುವಲ್ಲಿ ಶ್ರಮಿಸಿದ್ದ “ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್’ನ 101 ಸದಸ್ಯರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಹೋರಾಟಗಾರರ ಮೇಲೆ ಹಿಂದಿನ ಬಿಜೆಪಿ ಸರಕಾರ ಮೊಕದ್ದಮೆ ಹೂಡಿತ್ತು. ನ್ಯಾಯಾಲಯದಿಂದ ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಶನಿವಾರ ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು. ಮಾಜಿ ಕಾರ್ಪೊರೇಟರ್ ಪ್ರಜ್ವಲ್ ಕುಳಾಯಿ ತಮ್ಮ ಜಮೀನಿನ ದಾಖಲೆಯ ಮೂಲಕ ಜಾಮೀನು ಭದ್ರತೆ ಒದಗಿಸಿದರು. ಹಿರಿಯ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ ನೇತೃತ್ವದಲ್ಲಿ ಚರಣ್ ಶೆಟ್ಟಿ ಪಂಜಿಮೊಗರು, ಅಶ್ವಿನಿ ಹೆಗ್ಡೆ, ನಿತಿನ್ ಕುತ್ತಾರ್, ಅನ್ನು ಮಲಿಕ್, ಮನೋಜ್ ವಾಮಂಜೂರು, ಹಸೈನಾರ್ ಗುರುಪುರ, ಶೆರ್ವಿನ್ ಸೊಲೊಮಾನ್ ಮೊದಲಾದ ಹೋರಾಟಗಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು, ವಿವಿಧ ಸಮಾನ ಮನಸ್ಕ ಪಕ್ಷದವರು ಹೋರಾಟದಲ್ಲಿ ಭಾಗವಹಿಸಿದ್ದು, ಎಲ್ಲರ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಹಿಂಪಡೆಯುವಂತೆ ಈಗಾಗಲೇ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಉಸ್ತುವಾರಿ ಸಚಿವ ಬಳಿಯೂ ಈ ವಿಚಾರದ ಕುರಿತು ಚರ್ಚಿಸಿದ್ದೇವೆ. ಪ್ರಕರಣದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.