“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Team Udayavani, Jul 6, 2024, 10:58 PM IST
ಮೈಸೂರು: ವಿಚಾರಣೆ ನೆಪದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡತಗಳನ್ನು ಹಿರಿಯ ಅಧಿಕಾರಿಗಳು ಕದ್ದೊಯ್ದಿದ್ದಾರೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಹಗರಣ ಬೆಳಕಿಗೆ ಬರುತ್ತಿದ್ದಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡ ಏಕಾಏಕಿ ಮೈಸೂರಿಗೆ ಆಗಮಿಸಿ, ದಿನವಿಡೀ ಮುಡಾ ಅಧಿಕಾರಿಗಳನ್ನು ವಿಚಾರಣೆ ನಡೆಸಿ, 140ಕ್ಕೂ ಹೆಚ್ಚು ಕಡತಗಳನ್ನು ಕದ್ದೊಯ್ದಿದ್ದಾರೆ. ಆ ಕಡತಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಜತೆಗೆ ಕೆಲವು ದಾಖಲೆಗಳನ್ನು ನಾಶ ಪಡಿಸಲಾಗುತ್ತಿದೆ. ಇದು ಸರಕಾರದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದರು.
ಮೊದಲ ದಿನ 140 ಕಡತಗಳನ್ನು ತೆಗೆದುಕೊಂಡು ಹೋಗಿದ್ದೇವೆ ಎಂದು ಅಧಿಕಾರಿಗಳೇ ಹೇಳಿದ್ದರು. ಅನಂತರ 40 ಕಡತಗಳನ್ನಷ್ಟೇ ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಬರುತ್ತಿದೆ ಎಂದರು.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪುವ ಸಾಧ್ಯತೆ ಹೆಚ್ಚಾಗಿದೆ. ಹಗರಣದ ವಿಚಾರದಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಹಗರಣದ ಕುರಿತು ರಾಜ್ಯಪಾಲರು ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ಶ್ರೀವತ್ಸ ತಿಳಿಸಿದರು.
ಯಾರನ್ನೋ ಬಚಾವ್ ಮಾಡಲು ಸಿಎಂ ಬುಡಕ್ಕೆ ತಂದುಕೊಳ್ಳುತ್ತಿದ್ದಾರೆ:
ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರನ್ನೋ ರಕ್ಷಣೆ ಮಾಡಲು ಹೋಗಿ ಬುಡಕ್ಕೆ ತಂದುಕೊಳ್ಳುತ್ತಿದ್ದಾರೆ. ಅವರನ್ನು ಮುಂದಿಟ್ಟುಕೊಂಡು ಬೇರೆಯವರು ಪಾರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಶ್ರೀವತ್ಸ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಇಷ್ಟೆಲ್ಲ ಹಗರಣ ಆಗಿರುವ ಬಗ್ಗೆ ಮಾಹಿತಿ ಇದ್ದರೂ ಮುಡಾ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಏಕೆ ಅಮಾನತು ಮಾಡಿಲ್ಲ. ಅವರ ವಿರುದ್ಧ ಏಕೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ 3.16 ಎಕರೆ ಭೂಮಿಗೆ 64 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ಆದರೆ ಎಕರೆಗೆ 20 ಕೋಟಿ ರೂ. ಬೆಲೆ ಬಾಳುವ ಭೂಮಿ ಮೈಸೂರಿನಲ್ಲಿ ಎಲ್ಲಿದೆ ಎಂದು ಪ್ರಶ್ನಿಸಿದ ಅವರು, ನಿಮ್ಮ ಪತ್ನಿ ದೇವನೂರು ಬಡಾವಣೆಯಲ್ಲಿ ಭೂಮಿ ಕಳೆದುಕೊಂಡಿದ್ದಕ್ಕೆ ವಿಜಯನಗರದಲ್ಲಿ ನಿವೇಶನ ಪಡೆದಿದ್ದಾರೆ. ಸಿಎಂ ಪತ್ನಿ ಭೂಮಿ ಕಳೆದುಕೊಂಡ ಪಕ್ಕದಲ್ಲೇ ಮತ್ತೂಬ್ಬರು 7 ಎಕರೆ ಕಳೆದುಕೊಂಡಿದ್ದಾರೆ. ಹಾಗಾದರೇ ಅವರಿಗೆ 150 ಕೋಟಿ ರೂ. ಕೊಡಲು ಮುಡಾದಿಂದ ಸಾಧ್ಯವೇ? ದೇವನೂರು ಬಡಾವಣೆ 20 ಕೋಟಿ ರೂ. ಬೆಲೆ ಬಾಳುತ್ತದೆಯೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.