Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ
ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ , ಕಾರ್ಯಪಡೆ ರಚಿಸಲು ಸರಕಾರಕ್ಕೆ ಸಂಸದ ಆಗ್ರಹ
Team Udayavani, Jul 7, 2024, 7:30 AM IST
ಬೆಂಗಳೂರು: ಡೆಂಗ್ಯೂ ನಿಯಂತ್ರಣಕ್ಕೆ ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಸರಕಾರ ತತ್ಕ್ಷಣವೇ ರಾಜ್ಯದಲ್ಲಿ “ವೈದ್ಯಕೀಯ ತುರ್ತು ಪರಿಸ್ಥಿತಿ’ (ಮೆಡಿಕಲ್ ಎಮರ್ಜೆನ್ಸಿ) ಘೋಷಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಆಗ್ರಹಿಸಿದ್ದಾರೆ.
ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯ. ಇಲ್ಲವಾದರೆ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಹರಡಬಹುದು ಎಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಎಚ್ಚರಿಸಿದರು. ಡೆಂಗ್ಯೂಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದ ಡಾ. ಮಂಜುನಾಥ್, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರಕ್ಕೆ ಹತ್ತಾರು ಸಲಹೆಗಳನ್ನು ನೀಡಿದ್ದಾರೆ.
ಪ್ರಮುಖ ಸಲಹೆಗಳೇನು?
– ಡೆಂಗ್ಯೂಗೆ ಕೋವಿಡ್ ಮಾದರಿ ಚಿಕಿತ್ಸಾ ವ್ಯವಸ್ಥೆ ಜಾರಿಗೆ ತರಬೇಕು.
– ರಾಜ್ಯ ಮಟ್ಟದಲ್ಲಿ ಕಾರ್ಯಪಡೆ ರಚಿಸಬೇಕು.
– ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡುವ ಲ್ಯಾಬ್ಗಳನ್ನು ಮುಚ್ಚಬೇಕು.
– ಸ್ಲಂ, ವಠಾರದಂತಹ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆ ಪರದೆ ಉಚಿತವಾಗಿ ಹಂಚಬೇಕು.
– ಅರ್ಧಕ್ಕೆ ನಿಂತ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು.
– ಶಾಲಾ-ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿ ಆಡಳಿತ ಮಂಡಳಿಗಳ ಜತೆ ಸಭೆ ನಡೆಸಬೇಕು.
ಐಸಿಯುನಲ್ಲಿ ಸರಕಾರ: ಅಶ್ವತ್ಥನಾರಾಯಣ್
ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಮಾತನಾಡಿ, ರಾಜ್ಯ ಸರಕಾರ ದಿವಾಳಿಯ ಅಂಚಿನಲ್ಲಿದೆ. ಸರಕಾರ, ಆರೋಗ್ಯ ಇಲಾಖೆ ಐಸಿಯುಗೆ ದಾಖಲಾದಂತಿದೆ ಎಂದು ಟೀಕಿಸಿದರು. ಎಲ್ಲ ಜಿಲ್ಲೆಗಳಲ್ಲಿ ಡೆಂಗ್ಯೂ ಮಹಾಮಾರಿ ಇದೆ. ಒಂದು ತಿಂಗಳಿನಿಂದ ಅದು ರಾಜ್ಯವನ್ನೇ ಆವರಿಸಿದೆ. ಮಲೇರಿಯಾ, ವೈರಲ್ ಜ್ವರ ಸಾಮಾನ್ಯವಾಗಿ ಋತುವಿಗೆ ಅನುಗುಣವಾಗಿ ಬರುತ್ತವೆ. ಸರಕಾರ ಇದರ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇವಲ ಪ್ರವಾಸದಲ್ಲಿ ಇರುತ್ತಾರೆ. ತಮ್ಮ ಇಲಾಖೆಯ ಜವಾಬ್ದಾರಿ ಕಡೆ ಗಮನ ಹರಿಸುತ್ತಿಲ್ಲ ಎಂದು ಆಕ್ಷೇಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.