![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 7, 2024, 6:42 AM IST
ಪುಂಜಾಲಕಟ್ಟೆ: ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪ್ರದೇಶಗಳ ನಡುವೆ ಹರಿಯುವ ಕಿರುಹೊಳೆಗೆ ಕನಿಷ್ಠ ಲಘವಾಹನ ಸಂಚರಿಸಬಹುದಾದ ಸೇತುವೆಯಿಲ್ಲದ ಕಾರಣ ವೃದ್ಧೆ ಯೋರ್ವರ ಶವವನ್ನು ಸ್ಥಳೀಯರು ಕಿಂಡಿ ಅಣೆಕಟ್ಟಿನ ಕಾಲುದಾರಿಯಲ್ಲಿ ಪ್ರಯಾಸಪಟ್ಟು ಹೊತ್ತು ಕೊಂಡು ಬಂದ ದೃಶ್ಯ ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕಾಜಲ ಮತ್ತು ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯ ನಾಡು, ಬೆಂಚಿನಡ್ಕ ಪ್ರದೇಶಕ್ಕೆ ಸಂಪರ್ಕ ರಸ್ತೆಯ ಮಧ್ಯೆ ಕಿರುಹೊಳೆ ಹರಿಯುತ್ತಿದ್ದು, ಇದಕ್ಕೊಂದು ಕಿಂಡಿ ಅಣೆಕಟ್ಟು ಸಹಿತ ಲಘುವಾಹನಗಳ ಸಂಚಾರದ ನಿಟ್ಟಿನಲ್ಲಿ ಸೇತುವೆ ನಿರ್ಮಿಸುವಂತೆ ಸ್ಥಳೀಯರು ಜನಪ್ರತಿನಿಧಿಗಳ ಮೂಲಕ ಸರಕಾರಕ್ಕೆ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೆ ಸೇತುವೆ ನಿರ್ಮಾಣ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.