Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
ಅಪಘಾತದ ಹಿಂದೆ ಶಿವಸೇನೆಯ ನಾಯಕನ ಮಗ
Team Udayavani, Jul 7, 2024, 2:15 PM IST
ಮುಂಬಯಿ: ಬಿಎಂಡಬ್ಲ್ಯು ಕಾರೊಂದು ಬೈಕಿನಲ್ಲಿ ಹೋಗುತ್ತಿದ್ದ ದಂಪತಿಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಮುಂಬೈಯ ವರ್ಲಿಯಲ್ಲಿ ಭಾನುವಾರ(ಜು.7 ರಂದು) ಮುಂಜಾನೆ ನಡೆದಿದೆ.
ಕೋಳಿವಾಡ ಪ್ರದೇಶದ ನಿವಾಸಿಗಳಾದ ದಂಪತಿ ಮುಂಜಾನೆ ಮಾರುಕಟ್ಟೆಯಿಂದ ಮೀನು ಖರೀದಿಸಿ ಬೈಕ್ ನಲ್ಲಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಟ್ರಿಯಾ ಮಾಲ್ ಬಳಿ ಬಿಎಂಡಬ್ಲ್ಯು ದಂಪತಿಗೆ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ದಂಪತಿ ಕೆಳಗೆ ಬಿದ್ದಿದ್ದು, ಪತ್ನಿ ಕಾವೇರಿ ನಕವಾ ಮೃತಪಟ್ಟಿದ್ದಾರೆ. ಪತಿ ಗಾಯಗೊಂಡಿದ್ದಾರೆ. ಕಾವೇರಿ ಅವರಿಗೆ ಅಪಘಾತದ ಪರಿಣಾಮ ತೀವ್ರ ಗಾಯಗಳಾಗಿತ್ತು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯ ಬಳಿಕ ಕಾರ ಚಾಲಕ ಪರಾರಿ ಆಗಿದ್ದಾನೆ. ಪರಾರಿಯಾಗಿರುವ ಚಾಲಕನನ್ನು ಮಿಹಿರ್ ಶಾ (24) ಎಂದು ಗುರುತಿಸಲಾಗಿದ್ದು, ಬಂಧನಕ್ಕೆ ಪ್ರಯತ್ನ ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಿಹಿರ್ ಶಾ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯಕನ ಮಗನಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾನೆ.
ಮಿಹಿರ್ ಶಾ ಅವರ ತಂದೆ ಮತ್ತು ಪಾಲ್ಘರ್ ಜಿಲ್ಲೆಯ ಶಿಂಧೆ ಸೇನೆಯ ಉಪನಾಯಕ ರಾಜೇಶ್ ಶಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರ ಹೆಸರಿನಲ್ಲಿ ಬಿಎಂಡಬ್ಲ್ಯು ನೋಂದಣಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.