Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

ಕಲಬುರಗಿ ವಿಭಾಗ ಮಟ್ಟದ 2 ನೇ ದಾಸ ಸಾಹಿತ್ಯ ಸಮ್ಮೇಳನ

Team Udayavani, Jul 7, 2024, 2:46 PM IST

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

ಕಲಬುರಗಿ: ಕನ್ನಡ ಸಾಹಿತ್ಯದ ತವನಿಧಿಗಳಲ್ಲೊಂದಾದ ದಾಸ ಸಾಹಿತ್ಯವು ವ್ಯಕ್ತಿತ್ವ ನಿರ್ಮಾಣದ ಧ್ಯೇಯವನ್ನು ಹೊಂದಿದೆ ಎಂದು ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ವಾಸುದೇವ ಅಗ್ನಿಹೋತ್ರಿ ಹೇಳಿದರು.

ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕ್ಷೇತ್ರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ರವಿವಾರ ಆಯೋಜಿಸಿದ್ದ ಎರಡನೇ ಕಲಬುರಗಿ ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾಸ ಸಾಹಿತ್ಯವು ಭಕ್ತಿ ಸಾಹಿತ್ಯದ ಪ್ರಾತಿನಿಧಿಕವಾಗಿವೆ. ಜೈನರ ಕಾಲದಲ್ಲಿ ಜಿನ ಭಕ್ತಿಯಾಗಿ, ಶರಣರ ಕಾಲದಲ್ಲಿ ಶಿವಭಕ್ತಿಯಾಗಿ, ದಾಸರ ಕಾಲದಲ್ಲಿ ವಿಷ್ಣು ಭಕ್ತಿಯಾಗಿ ಹೊರಹೊಮ್ಮಿತು. ದೈವಭಕ್ತಿ ಕೇಂದ್ರಿತ ಚಿಂತನೆಗಳ ಕೀರ್ತನೆಗಳನ್ನು ದಾಸರು ರಚಿಸಿದರೂ ಮಾನವ ಘನತೆಯನ್ನು ಎತ್ತಿ ಹಿಡಿದು, ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಯಾವುದೇ ನಿರ್ದಿಷ್ಟ ಸಮಾಜದ ಪರವಾಗಿ ದಾಸರ ಕೀರ್ತನೆಗಳು ಇರದೇ ಸರ್ವ ಸಮಾಜದ ಜನರನ್ನು ಉದ್ದೇಶಿಸಿ ಬರೆದವುಗಳಾಗಿವೆ. ಸರ್ವ ಜನಾಂಗದ ಶ್ರೇಯಸ್ಸು ಬಯಸುವುದೇ ದಾಸ ಸಾಹಿತ್ಯದ ಉದ್ದೇಶವಾಗಿದೆ ಎಂದರು.

ಕಲ್ಯಾಣ ಕರ್ನಾಟಕವು ದಾಸ ಸಾಹಿತ್ಯದ ಆಡಂಬೊಲವಾಗಿದೆ. ಈ ವಿಭಾಗದಲ್ಲಿಯೇ ಅತಿಹೆಚ್ಚು ದಾಸರು ಆಗಿ ಹೋಗಿದ್ದಾರೆ. ಜಾತ್ಯಾತೀತ, ಮಠಾತೀತವಾಗಿ, ಮತಾತೀತವಾಗಿ ಎಲ್ಲರಿಗೂ ದಾಸರ ಹಾಡುಗಳು ಮುದ ನೀಡುತ್ತವೆ ಎಂದರು.

ದಾಸ ಸಾಹಿತ್ಯ ಕ್ಷೇತ್ರದಲ್ಲಿ ಇನ್ನೂ ಸಾಕಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಮುಖ್ಯವಾಗಿ ತರುಣ ಜನಾಂಗಕ್ಕೆ ಮನುಷ್ಯ ಜನ್ಮದ ಮಹತ್ವದ ಅರಿವು ಮೂಡಿಸಬೇಕಿದೆ. ಇದಕ್ಕಾಗಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಗಳನ್ನು ತೆಗೆಯಬೇಕಾಗಿದೆ ಎಂದು ಡಾ.‌ವಾಸುದೇವ ಅಗ್ನಿಹೋತ್ರಿ ಸಲಹೆ ನೀಡಿದರು.

ವಚನ ಸಾಹಿತ್ಯ- ದಾಸ ಸಾಹಿತ್ಯ ಮುಂದಿನ ಪೀಳಿಗೆಗೆ ತಲುಪಲಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ನೆಲೋಗಿ ಸಮ್ಮೇಳನ ಉದ್ಘಾಟಿಸಿ, 12 ನೇ ಶತಮಾನದ ಬಸವಾದಿ ಶರಣರ ಹಾಗೂ 15 ಶತಮಾನದ ದಾಸ ಸಾಹಿತ್ಯದ ತತ್ವಗಳು ಹಾಗೂ ಸಂದೇಶಗಳು ಇಂದಿನ ಯುವ ಜನಾಂಗ ಹಾಗೂ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ವ್ಯಾಪಕವಾಗಿ ನಡೆಯಬೇಕಿದೆ. ಕಸಾಪ ದಾಸ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಗುಲ್ಬರ್ಗ ವಿವಿಯಲ್ಲಿ ದಾಸ ಸಾಹಿತ್ಯ ಅಧ್ಯಯನ ಪೀಠ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಇದೇ ಸಂದರ್ಭದಲ್ಲಿ ರಾಮಾಚಾರ್ಯ ಘಂಟಿ, ಕೃಷ್ಣಾಜೀ ಕುಲಕರ್ಣಿ, ವಾದಿರಾಜ ವ್ಯಾಸಮುದ್ರ, ಡಾ.‌ಪ್ರಲ್ಹಾದ ಬುರಲಿ, ಬಾಬುರಾವ ಸೇರಿಕಾರ ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹರಿದಾಸ ರತ್ನ ಪ್ರಶಸ್ತಿ ನೀಡಿ ಪುರಸ್ಕೃರಿಸಲಾಯಿತು. ಆಕಾಶವಾಣಿ ನಿವೃತ್ತ ಅಧಿಕಾರಿ ಸದಾನಂದ ಪೆರ್ಲ ಅವರ ಕನ್ನಡದ ಕೃಷ್ಣ ಕೃತಿ ಬಿಡುಗಡೆಗೊಳಿಸಲಾಯಿತು.

ಹಿರಿಯ ಸಾಹಿತಿ ಡಾ.‌ಸ್ವಾಮಿರಾವ ಕುಲಕರ್ಣಿ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಉದ್ಯನಿ ಆನಂದ ದಂಡೋತಿ, ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಸೇರಿದಂತೆ ಮುಂತಾದವರಿದ್ದರು. ಕಸಾಪ ದಕ್ಷಿಣ ವಲಯ ಅಧ್ಯಕ್ಷ ಶಾಮಸುಂದರ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಧರ್ಮಣ್ಣ ಧನ್ನಿ ಸ್ವಾಗತಿಸಿದರು.  ಪ್ರೊ.‌ನರೇಂದ್ರ ಬಡಶೇಷಿ ನಿರೂಪಿಸಿದರು. ತದನಂತರ ಅಮೃತ ಸಿಂಚನ ಗೋಷ್ಠಿ ಹಾಗೂ ದಾಸರ ಹಾಡಿನ ಸ್ಪರ್ಧೆ ನಡೆದವು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.