BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!
Team Udayavani, Jul 7, 2024, 7:46 PM IST
ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಮಾತನಾಡಿ ಕ್ಷೇತ್ರದಲ್ಲಿ ದೂರ ಸಂಪರ್ಕ ಇಲಾಖೆಯಿಂದ ಬಾಕಿ ಇರುವ ಟವರ್ಗಳ ಸ್ಥಾಪನೆ, ಅರಣ್ಯ ಇಲಾಖೆಯ ಅನುಮತಿ ಹಾಗೂ ಸಂಪರ್ಕ ವ್ಯವಸ್ಥೆಯಲ್ಲಿನ ತೊಂದರೆಗಳ ಕುರಿತು ಚರ್ಚಿಸಿ ಕೆಲಸಕ್ಕೆ ವೇಗ ಕೊಡಲು ವಿನಂತಿಸಿದರು.
ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ದೂರ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು ಉಳಿದ ಟವರ್ ನಿರ್ಮಾಣದ ಕನಸು ಈಡೇರಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಅರಣ್ಯ ಭೂಮಿ ಸೇರಿದಂತೆ ಅನೇಕ ಸಮಸ್ಯೆಗಳ ಮಧ್ಯೆಯೂ ಶಿರಸಿ ತಾಲೂಕಿನಲ್ಲಿ ಭಾರತ್ ಸಂಚಾರ ನಿಗಮದ ಮೂರು ಟವರ್ ಉದ್ಘಾಟನೆಗೆ ಸಜ್ಜಾಗಿದೆ.
ತಾಲೂಕಿನ ಬರೂರು, ಕಳವೆ ಹಾಗೂ ಓಣಿಕೆರಿ ಟವರ್ ಶೀಘ್ರ ಉದ್ಘಾಟನೆ ಆಗಲಿದೆ ಎಂಬುದೂ ಉಲ್ಲೇಖನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.