Mining; ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ: ಕರಡಿ ಸಂಗಣ್ಣ
Team Udayavani, Jul 7, 2024, 10:01 PM IST
ಕುಷ್ಟಗಿ: ಸಂಡೂರ ಪ್ರದೇಶದಲ್ಲಿ ಗಣಿಗಾರಿಕೆಗೆ ನಮ್ಮ ವಿರೋಧವಿದೆ ಎಂದು ಮಾಜಿ ಸಂಸದ ಕರಡಿ ಸಂಗಣ್ಣ ಹೇಳಿದರು.
ಕುಷ್ಟಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಿನ ಮಳೆ ಪ್ರಮಾಣ ಅವಲೋಕಿಸಿದರೆ ಕೊಪ್ಪಳ ಜಿಲ್ಲೆಗೆ ಶಾಕಿಂಗ್ ಆಗಿದೆ. ಎಲ್ಲೆಡೆ ಮಳೆಯಾಗುತ್ತಿದ್ದು ಇಲ್ಲಿ ಮಾತ್ರ ಮಳೆ ಇಲ್ಲ. ಸೊಂಡೂರು ಪ್ರದೇಶದಲ್ಲಿ ಗಣಿಗಾರಿಕೆ ನಡೆದರೆ ಅರಣ್ಯ ಪ್ರದೇಶ ಬರಿದಾಗಲಿದೆ. 99ಸಾವಿರ ಗಿಡಗಳನ್ನು ತೆರವುಗೊಳಿಸುವ ಮಾಹಿತಿ ಇದ್ದು ಅಲ್ಲಿನ ವನ್ಯ ಜೀವಿಗಳಿಗೆ ಧಕ್ಕೆ ಆಗಲಿದೆ. ಮುಂದುವರಿದ ದೇಶಗಳು ಮುಂದಿನ ಭವಿಷ್ಯದ ಆಸ್ತಿಯಾಗಿ ಖನಿಜ, ಅರಣ್ಯ, ವನ್ಯಜೀವ ಸಂಪತ್ತು ಸಂರಕ್ಷಿಸುತ್ತಿವೆ. ಪಕೃತಿಯ ಎಲ್ಲಾ ಸಂಪತ್ತು ನಮ್ಮ ಕಾಲಕ್ಕೆ ಮುಗಿಯಬಾರದು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ ಎಂದರು.
ದರೋಜಿ-ಗಂಗಾವತಿ ಮಾರ್ಗಕ್ಕೆ ಮಾತ್ರ ಅನುದಾನ ಕಲ್ಪಿಸಿ ಎಂದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಗೆ ಗಂಗಾವತಿ ಮಾಜಿ ಶಾಸಕ ಪರಣ್ಣ ಮನವಳ್ಳಿ ಅವರು ಸಲ್ಲಿಸಿದ ಮನವಿ ಸರಿಯಾದ ಕ್ರಮ ಅಲ್ಲ ಎಂದು ಮಾಜಿ ಸಂಸದ ಕರಡಿ ಸಂಗಣ್ಣ ಹೇಳಿದರು.
ನಾನು ಮಾದ್ಯಮದಲ್ಲಿ ಗಮನಿಸಿದ್ದು, ಈ ಯೋಜನೆ ದರೋಜಿ-ಗಂಗಾವತಿಗೆ ಮಾತ್ರ ಸೀಮಿತವಲ್ಲ ಅದು ಬಾಗಲಕೋಟೆಯವರೆಗೂ ಇದೆ. ಇದಕ್ಕೆ ಅನುದಾನ ನೀಡಿ ಎಂದು ಮನವಿ ಕೊಟ್ಟಿದ್ದರೆ ಸಮಗ್ರ ಅಭಿವೃಧ್ಧಿ ಆಗಿರುತ್ತಿತ್ತು. ದರೋಜಿ-ಗಂಗಾವತಿ- ಬಾಗಲಕೋಟೆ ರೈಲ್ವೇ ಯೋಜನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ನಮ್ಮ ಸಂಸದ ರಾಜಶೇಖರ ಹಿಟ್ನಾಳ ಅವರಲ್ಲಿ ಈ ಯೋಜನೆ ಅವಶ್ಯದ ಬಗ್ಗೆ ಪ್ರಸ್ತಾಪಿಸಿದ್ದು, ನಮ್ಮದೇ ಪಕ್ಷದ ಸರ್ಕಾರವಿದೆ ಈ ಯೋಜನೆಯ ಡಿಪಿಆರ್ ಈಗಾಗಲೇ ಆಗಿದ್ದು, ಶೇರಿಂಗ್ ಮುಖ್ಯವಾಗಿದೆ ರಾಜ್ಯದ ತನ್ನ ಪಾಲಿನ ಶೇರು ನೀಡಿದರೆ ಆದ್ಯತೆ ಮೇರೆಗೆ ಕಾರ್ಯಗತಗೊಳ್ಳಲು ಸಾದ್ಯವಿದೆ. ಕುಷ್ಟಗಿ-ನರಗುಂದ-ಘಟಪ್ರಭ ಹೊಸ ರೈಲು ಮಾರ್ಗದ ಪ್ರಸ್ತಾಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಈ ಮಾರ್ಗವೂ ಕೂಡ ಸೂಕ್ತವಾಗಿದ್ದು ಸ್ವಾಗತಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.