Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
Team Udayavani, Jul 8, 2024, 9:00 AM IST
ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.
ರವಿವಾರ ಹಾಗೂ ಸೋಮವಾಯ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸೋಮವಾರ ಮುಂಜಾನೆ ಭಾರೀ ಮಳೆಯ ನಡುವೆಯೇ ಮಕ್ಕಳು ಶಾಲೆಗೆ ತೆರಳಿದ ದೃಶ್ಯಕಂಡು ಬಂತು.
ನಗರದ ಗುಂಡಿಬೈಲು, ದೊಡ್ಡಣಗುಡ್ಡೆ, ಮಠದಬೆಟ್ಟು, ಕರಂಬಳ್ಳಿ ಮೊದಲಾದ ಕಡೆಗಳಲ್ಲಿ ಮಕ್ಕಳು ಶಾಲೆಗೆ ವಿಪರೀತ ತೊಂದರೆ ಅನುಭವಿಸಿದರು.
ಮಳೆಯ ನೆರೆಯಲ್ಲೇ ಕಷ್ಟದಿಂದ ಮಕ್ಕಳು ಶಾಲೆಗೆ ತೆರಳಿದ್ದು, ಪೋಷಕರು ಮಕ್ಕಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋದರು. ಮಕ್ಕಳು ನೆರೆಯಲ್ಲಿ ಆತಂಕದಿಂದ ಶಾಲೆಗೆ ತೆರಳಿದ್ದು ಉಡುಪಿ ಸ್ಥಳೀಯಾಡಳಿತ ರಜೆ ಘೋಷಣೆ ಮಾಡದೆ ಇರುವುದರಿಂದ ಕೆಲ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶಾಲಾ ಬಸ್ಸೊಂದು ಮಳೆಯ ನೀರಿನಲ್ಲಿ ಸಿಲುಕಿಕೊಂಡು ಕೆಲ ನಿಮಿಷ ಟ್ರಾಫಿಕ್ ಜಾಮ್ ಉಂಟಾಯಿತು. ಮಳೆಯ ನಡುವೆಯೇ ಪೋಷಕರು ಮಕ್ಕಳನ್ನು ಕಷ್ಟದಿಂದ ಶಾಲೆಗೆ ಕಳುಹಿಸಿದ್ದು, ಕೆಲಕಡೆ ಬಸ್ ಗಳು ಸರಿಯಾದ ಸಮಯಕ್ಕೆ ಬಾರದೆ ತೊಂದರೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.