Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 


Team Udayavani, Jul 8, 2024, 10:57 AM IST

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

ಬೆಂಗಳೂರು: “ನಂದಿನಿ ಬ್ರ್ಯಾಂಡ್‌’ ನಡಿ ಹಲವು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಕೆಎಂಎಫ್ ಶೀಘ್ರದಲ್ಲೇ ನಂದಿನಿ ದೋಸೆ ಹಿಟ್ಟು ಬಿಡುಗಡೆ ಮಾಡಲಿದೆ. ಪ್ರೋಟಿನ್‌ ಅಂಶಗಳನ್ನು ಒಳಗೊಂಡಂತಹ ನಂದಿನಿ ದೋಸೆ ಹಿಟ್ಟಿನ ಪ್ರಯೋಗ ನಡೆದಿದ್ದು, ಕೆಲವೇ ದಿನಗಳಲ್ಲಿ ಗ್ರಾಹಕರ ಕೈ ಸೇರಲಿದೆ. ಮಾರುಕಟ್ಟೆಗೆ ಪರಿಚಯಿಸುವ ಕಾರ್ಯ ಕೂಡ ವೇಗವಾಗಿ ನಡೆದಿವೆ.

ಸಾಮಾನ್ಯವಾಗಿ ದೋಸೆ ಹಿಟ್ಟು ತಯಾರಿಕೆಯಲ್ಲಿ ಅಕ್ಕಿ-ಉದ್ದಿನ ಬೆಳೆಯನ್ನು ಹಾಕಿ ಸಿದ್ಧಪಡಿಸಲಾಗುತ್ತದೆ. ಆದರೆ, ನಂದಿನಿ ಬ್ರ್ಯಾಂಡ್‌ನ‌ಲ್ಲಿ ಹಾಲಿನ ಉಪ ಉತ್ಪನ್ನ “ವೇ ಪೌಡರ್‌’ ಸೇರಿದಂತೆ ಮತ್ತಿತತರ ಪದಾರ್ಥಗಳನ್ನು ಬಳಕೆ ಮಾಡಲಾಗುತ್ತದೆ. ಈಗಾಗಲೇ ಖಾಸಗಿ ಕಂಪನಿಗಳು ಕೂಡ ಭಿನ್ನ ರೀತಿಯ ದೋಸೆ ಹಿಟ್ಟನ್ನು ಮಾರಾಟ ಮಾಡುತ್ತಿವೆ. ಆದರೆ, ಅದಕ್ಕಿಂತಲೂ ನಂದಿ ಬ್ರ್ಯಾಂಡ್‌ ದೋಸೆ ಹಿಟ್ಟು ಭಿನ್ನವಾಗಿರಲಿದೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಈಗಾಗಲೇ ನಂದಿನಿ ಬ್ರ್ಯಾಂಡ್‌ನ‌ಡಿ ನಂದಿನಿ ಹಾಲು, ತುಪ್ಪ, ಬೆಣ್ಣೆ, ಮೊಸರು, ಚೀಸ್‌, ಮಜ್ಜಿಗೆ, ಬ್ರೆಡ್‌, ಬನ್‌ ಜತೆಗೆ ಸಿಹಿ ತಿನಿಸುಗಳು, ಕುರುಕಲು ತಿಂಡಿಗಳು, ಬೇಕರಿ ಉತ್ಪನ್ನಗಳು, ಐಸ್‌ಕ್ರೀಂ ಅನ್ನೂ ಕೆಎಂಎಫ್‌ ತಯಾರಿಸಿ ಮಾರಾಟ ಮಾಡುತ್ತಿದೆ. ಇದೀಗ ದೋಸೆ ಹಿಟ್ಟಿನ ಉತ್ಪನ್ನವನ್ನು ಗ್ರಾಹಕರಿಗೆ ಪರಿಚಯಿಸುವ ನಿಟ್ಟಿ ನಲ್ಲಿ ಹೆಜ್ಜೆಯಿರಿಸಿದೆ ಎಂದು ಕೆಎಂಎಫ್ನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಯೋಗಿಕ ಪರೀಕ್ಷೆಯಲ್ಲಿ ಸಕಾರಾತ್ಮಕ ಪ್ರತಿ ಕ್ರಿಯೆ: ಕೆಎಂಎಫ್‌ನ ನಂದಿನಿ ಬ್ರ್ಯಾಂಡ್‌ನ‌ಡಿ ಕೇವಲ ಹಾಲು ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆಗಿಂತ ಒಂದು ಹೆಜ್ಜೆ ಮುಂದೆ ಹೋಗಿ ದೋಸೆ ಹಿಟ್ಟು ಉತ್ಪಾ ದಿಸಲು ನಿರ್ಧರಿಸಿದೆ. ಮುಖ್ಯವಾಗಿ ಬೆಂಗಳೂರು ಮಹಾನಗರದ ಮಾರುಕಟ್ಟೆ ಗಮನದಲ್ಲಿಟ್ಟುಕೊಂಡು ದೋಸೆ ಹಿಟ್ಟು ಮಾರಾಟಕ್ಕೆ ಸಿದ್ಧತೆ ನಡೆಸಿದೆ.

ಈಗಾಗಲೇ ಟೆಂಡರ್‌ ಕೂಡ ಪೂರ್ಣ ಗೊಂಡಿದೆ. “ರೆಡಿ ಟು ಕುಕ್‌’ ಪರಿಕಲ್ಪನೆಯಡಿ ಜನರು ಸುಲಭ ವಾಗಿ ಮನೆಯಲ್ಲೇ ರುಚಿಕರ ದೋಸೆ ಸವಿಯುವ ಅವಕಾಶ ಕಲ್ಪಿಸಲಾಗುತ್ತದೆ. ಪ್ರಾಯೋಗಿಕ ಪರೀಕ್ಷೆಯಲ್ಲಿ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಟ್ಟಿನಲ್ಲಿ ಹಾಲಿನ ಉಪ ಉತ್ಪನ್ನ ಬಳಕೆ :

ನಂದಿನಿ ಬ್ರ್ಯಾಂಡ್‌ ಹಿಟ್ಟಿನಲ್ಲಿ ಪ್ರೋಟಿನ್‌ ಅಂಶಗಳು ಅಧಿಕವಿರಲಿದೆ. ಹಾಲಿನ ಉಪ ಉತ್ಪನ್ನ “ವೇ ಪೌಡರ್‌’ ಮತ್ತು ಗೋಧಿ ಬೆರೆಸಿ ತಯಾರಿಸಲಾಗುತ್ತದೆ.”ರೆಡಿ ಟು ಕುಕ್‌’ ಮಾದರಿಯಲ್ಲಿ ಗ್ರಾಹಕರಿಗೆ ನೇರವಾಗಿ 1 ಅಥವಾ 2 ಕೇಜಿ ಪಾಕೇಟ್‌ನಲ್ಲಿ ಪೂರೈಕೆ ಮಾಡಲಾಗುತ್ತದೆ. ಇತರೆ ದೋಸೆ ಹಿಟ್ಟಿಗಿಂತ ಹೆಚ್ಚು ಗುಣಮಟ್ಟದಿಂದ ಕೂಡಿರಲಿದೆ. ಇದರ ಬೆಲೆ ಕೂಡ ಕೈಗೆಟಕುವಂತೆ ಇರಲಿದೆ. ಹಿಟ್ಟಿನ ಪ್ಯಾಕಿಂಗ್‌ ಸೇರಿದಂತೆ ಮತ್ತತಿರರ ಪ್ರಯೋಗ ಕೂಡ ಪೂರ್ಣಗೊಂಡಿದೆ. ಶೀಘ್ರದಲ್ಲೇ ಗ್ರಾಹಕರ ಕೈಗೆ ತಲುಪಿಸಲಾಗುತ್ತದೆ ಎಂದು ಕೆಎಂಎಫ್ನ ನಿರ್ದೇಶಕ ಎಂ.ಕೆ.ಜಗದೀಶ್‌ ಮಾಹಿತಿ ನೀಡಿದ್ದಾರೆ.

ಕೆಎಂಎಫ್ ಈಗಾಗಲೇ 150ಕ್ಕೂ ಅಧಿಕ ನಂದಿನಿ ಬ್ರ್ಯಾಂಡ್‌ನ‌ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಕೆ ಮಾಡು ತ್ತಿದೆ. ಇದೀಗ ದೋಸೆ ಹಿಟ್ಟು ಮಾರಾಟಕ್ಕೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅತಿ ಶೀಘ್ರದಲ್ಲೇ ಗ್ರಾಹಕರ ಕೈಗೆ ನಂದಿನಿ ಬ್ರ್ಯಾಂಡ್‌ನ‌ ದೋಸೆ ಹಿಟ್ಟು ಕೈ ಸೇರಲಿದೆ.-ಎಂ.ಕೆ.ಜಗದೀಶ್‌, ವ್ಯವಸ್ಥಾಪಕ ನಿರ್ದೇಶಕರು, ಕೆಎಂಎಫ್‌. 

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.