![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 8, 2024, 12:25 PM IST
ಮುಂಬೈ: ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿದ್ದ ಇಶಾನ್ ಕಿಶನ್ ಅವರು ಕಳೆದ ಕೆಲವು ತಿಂಗಳಿನಿಂದ ಟೀಂ ಇಂಡಿಯಾದ ಹೊರಗಿದ್ದಾರೆ. ಕಳೆದ ವರ್ಷ ನವೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅವರಿದ್ದರೂ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ನಂತರ, ಕಿಶನ್ ರಣಜಿ ಟ್ರೋಫಿ ಪಂದ್ಯಗಳಲ್ಲಿಯೂ ಆಡದಿರಲು ನಿರ್ಧರಿಸಿದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.
ಆಗ ಟೀಂ ಇಂಡಿಯಾ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಇಶಾನ್ ಮತ್ತೆ ತಂಡಕ್ಕೆ ಬರಬೇಕಾದರೆ ದೇಶಿಯ ಕ್ರಿಕೆಟ್ ಆಡಬೇಕು ಎಂದು ಸೂಚಿಸಿದ್ದರು. ಆದರೆ ಇಶಾನ್ ಅದನ್ನು ನಿರ್ಲ್ಯಕ್ಷ್ಯ ಮಾಡಿದ್ದರು. ಇಶಾನ್ ಕಿಶನ್ ಇದಕ್ಕೆ ಸಾಕಷ್ಟು ಟೀಕೆ ಎದುರಿಸಿದ್ದರು.
ಇದರೆಲ್ಲದರ ಬಗ್ಗೆ ಇದೀಗ ಇಶಾನ್ ಕಿಶನ್ ಮಾತನಾಡಿದ್ದಾರೆ. “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ನೀವು ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ನೀವು ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ. ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಹೀಗಾಗಿ ನನಗೆ ದೇಶೀಯ ಕ್ರಿಕೆಟ್ ನಲ್ಲಿ ಅಡುವುದು ಸಾಧ್ಯವಿರಲಿಲ್ಲ. ನೀವು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬ್ರೇಕ್ ಪಡೆದು ದೇಶೀಯ ಕ್ರಿಕೆಟ್ ನಲ್ಲಿ ಆಡಬೇಕು ಎಂದರೆ ಇದಕ್ಕೆ ಅರ್ಥವೇನು? ಹಾಗೆಯೇ ಇದ್ದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದೆ” ಎಂದು ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಕಿಶನ್ ಹೇಳಿದರು.
ಉತ್ತಮ ಪ್ರದರ್ಶನ ನೀಡಿದರೂ ಭಾರತ ತಂಡದಲ್ಲಿ ಸಾಕಷ್ಟು ಅವಕಾಶ ಸಿಗದೆ ನಿರಾಶೆಗೊಂಡಿದ್ದೇನೆ ಎಂದು ಕಿಶನ್ ಒಪ್ಪಿಕೊಂಡರು.
“ಇದು ನಿರುತ್ಸಾಹಗೊಳಿಸಿತು. ನಾನು ಎಲ್ಲವನ್ನೂ ಚೆನ್ನಾಗಿದೆ ಎಂದು ಹೇಳಲು ಬಯಸುವುದಿಲ್ಲ. ಇದು ನನಗೆ ಸುಲಭವಾಗಿರಲಿಲ್ಲ. ನಾನು ಪ್ರದರ್ಶನ ನೀಡುತ್ತಿದ್ದರೂ ನನಗೆ ಯಾಕೆ, ಏನಾಗುತ್ತಿದೆ ಎಂಬಂತಹ ಪ್ರಶ್ನೆಗಳು ನನಗೆ ಕಾಡುತ್ತಿದ್ದವು” ಎಂದು ಕಿಶನ್ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.