Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
Team Udayavani, Jul 8, 2024, 12:39 PM IST
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿರುವ ನಾಯಕ ಕಿರಣ್ ರಾಜ್ ನಟನೆಯ “ರಾನಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆಗಸ್ಟ್ 30ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇತ್ತೀಚೆಗೆ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದೆ ತಂಡ. ಪ್ರಮೋದ್ ಮರವಂತೆ ಅವರು ಬರೆದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ “ಹವಾಮಾನವೆ ಸುಂದರ ಸುಂದರ’ ಎಂಬ ಹಾಡು ಬಿಡುಗಡೆಯಾಯಿತು.
ಹಾಡು ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಕಿರಣ್ ರಾಜ್, “ಒಂದು ಹಂತದಲ್ಲಿ ನನಗೆ ಜೀವನದಲ್ಲಿ ಮುಂದೇನು ಎಂಬ ಪ್ರಶ್ನೆ ಎದುರಾಯಿತು. ಆಗ ನನಗೆ, “ರಾನಿ’ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರು ಸಿಕ್ಕರು. ನನಗೂ ಈ ಚಿತ್ರದ ಕಥೆ ಇಷ್ಟವಾಯಿತು. ಚಿತ್ರದ ಕಥೆ ಕಾಲ್ಪನಿಕವಾದರೂ, ಪ್ರತಿಯೊಬ್ಬರಿಗೂ ನನ್ನ ಪಾತ್ರ ಹತ್ತಿರವಾಗುತ್ತದೆ. ಬಿಗ್ ಬಜೆಟ್ ನ ಚಿತ್ರವಿದು. ಕೆಲವರು ನನ್ನ ಸಿನಿಮಾಗೆ ಯಾಕೆ ಇಷ್ಟೊಂದು ಖರ್ಚು ಮಾಡುತ್ತಿದ್ದೀರಾ? ಎಂದು ನಿರ್ಮಾಪಕರನ್ನು ಕೇಳಿರಬಹುದು. ಆದರೆ ನಮ್ಮ ನಿರ್ಮಾಪಕರು ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ಕೊಡುವವರು. ಹಾಗಾಗಿ, ಹಣಕಾಸಿನ ವಿಚಾರಕ್ಕಿಂತ ಒಳ್ಳೆಯ ಸಿನಿಮಾ ಮಾಡಿದ್ದಾರೆ’ ಎಂದರು.
“ಇದು ಆ್ಯಕ್ಷನ್ ಚಿತ್ರವಾದರೂ, ಪಕ್ಕಾ ಕೌಟುಂಬಿಕ ಚಿತ್ರ. ಈ ಹಿಂದೆ ನೀವು ನೋಡಿರದ ಕಿರಣ್ ರಾಜ್ ಅವರನ್ನು ರಾನಿ ಚಿತ್ರದಲ್ಲಿ ನೋಡಬಹುದು. ಆರು ಆ್ಯಕ್ಷನ್ ಸನ್ನಿವೇಶಗಳಿದೆ. ಸೆಂಟಿಮೆಂಟ್ ಸಹ ಸ್ವಲ್ಪ ಹೆಚ್ಚಾಗಿಯೇ ಇದೆ. ಆರು ಫೈಟ್ಗಳಿಗೆ ವಿನೋದ್ ಮಾಸ್ಟರ್ ಅವರೇ ಸಾಹಸ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಸದ್ದು ಮಾಡುತ್ತಿರುವ ರಾನಿ ಆ.30ಕ್ಕೆ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದರು.
ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗ್ಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.