ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

'Korean actor Ma Dong- Seok to play antagonist opposite Prabhas in 'Spirit'

Team Udayavani, Jul 8, 2024, 3:13 PM IST

14

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ (Actor Prabhas) ಸದ್ಯ ʼಕಲ್ಕಿ2898 ಎಡಿʼ ಚಿತ್ರದ ಮೂಲಕ ವರ್ಲ್ಡ್‌ ವೈಡ್‌ ಸುದ್ದಿಯಲ್ಲಿದ್ದಾರೆ. ʼಸಲಾರ್‌ʼ ಪ್ರಭಾಸ್‌ ಅವರಿಗೆ ಈ ಸಿನಿಮಾ ಮತ್ತೊಮ್ಮೆ ಪ್ಯಾನ್‌ ಇಂಡಿಯಾದಲ್ಲಿ ಶೈನ್‌ ಆಗುವಂತೆ ಮಾಡಿದೆ.

ನಾಗ್‌ ಅಶ್ವಿನ್‌ ಅವರ ʼಕಲ್ಕಿʼ ರಿಲೀಸ್‌ ಆದ ಕೆಲವೇ ದಿನಗಳಲ್ಲಿ 900ಕೋಟಿ ರೂ.ಗೂ ಅಧಿಕ ಗಳಿಕೆ ಕಾಣುವ ಮೂಲಕ ಹತ್ತಾರು ಬಾಕ್ಸ್‌ ಆಫೀಸ್‌ ದಾಖಲೆಗಳನ್ನು ಬ್ರೇಕ್‌ ಮಾಡಿದೆ. ʼಕಲ್ಕಿʼಯ ಚರ್ಚೆ ಜೋರಾಗಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಭಾಸ್‌ ಅವರ ಮುಂದಿನ ಸಿನಿಮಾಗಳ ಬಗ್ಗೆ ಟಾಲಿವುಡ್‌ ನ ಗಲ್ಲಿಗಳಲ್ಲಿ ಹವಾ ಶುರುವಾಗಿದೆ.

ಹಾರಾರ್‌ ಕಥೆವುಳ್ಳ ಮಾರುತಿ ನಿರ್ದೇಶನದ ʼದಿ ರಾಜಾಸಾಬ್‌ʼ ಹಾಗೂ ಪ್ರಶಾಂತ್‌ ನೀಲ್‌ ಅವರ ʼಸಲಾರ್-2‌ʼ ಸಿನಿಮಾದಲ್ಲಿ ಪ್ರಭಾಸ್‌ ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಚಿತ್ರಗಳೂ ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡುವ ಸಾಧ್ಯತೆಯಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿದೆ.

ಈ ಎರಡು ಚಿತ್ರಗಳನ್ನು ಹೊರತುಪಡಿಸಿದರೆ ಪ್ರಭಾಸ್‌ ಅವರ ವೃತ್ತಿ ಬದುಕಿನ ಮತ್ತೊಂದು ಬಿಗ್‌ ಸಿನಿಮಾವೆಂದೇ ಹೇಳಲಾಗುತ್ತಿರುವ ʼಸ್ಪಿರಿಟ್‌ʼ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ʼಅರ್ಜುನ್‌ ರೆಡ್ಡಿʼ, ʼಅನಿಮಲ್‌ʼ ಮೂಲಕ ದೊಡ್ಡ ಯಶಸ್ಸು ಸಾಧಿಸಿರುವ ಸಂದೀಪ್‌ ವಂಗಾ ರೆಡ್ಡಿ (Sandeep Reddy Vanga) ಪ್ರಭಾಸ್‌ ಅವರೊಂದಿಗೆ ʼಸ್ಪಿರಿಟ್‌ʼ(Spirit Movie) ಚಿತ್ರವನ್ನು ಮಾಡಲಿದ್ದಾರೆ.

ಕಳೆದ ವರ್ಷ ಸಿನಿಮಾ ಅನೌನ್ಸ್‌ ಆದ ದಿನದಿಂದಲೇ ʼಸ್ಪಿರಿಟ್‌ʼ ಸುದ್ದಿಯಲ್ಲಿದೆ. ಇದೀಗ ಈ ಸಿನಿಮಾದ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಭಾರತ ಸೇರಿದಂತೆ ಪ್ಯಾನ್‌ ಏಷ್ಯಾದಲ್ಲಿ ರಿಲೀಸ್‌ ಆಗಲಿರುವ ʼಸ್ಪಿರಿಟ್‌ʼ ನಲ್ಲಿ ಖ್ಯಾತ ಕೊರಿಯನ್ ನಟ ಮಾ ಡಾಂಗ್ ಸಿಯೋಕ್ (Korean actor Ma Dong- Seok) ಅವರು ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ʼ ಗ್ಲಿಟ್ಜ್ʼ ವರದಿ ಮಾಡಿದೆ.

ಕೊರಿಯಾ ಚಿತ್ರರಂಗದಲ್ಲಿ ಮಾ ಡಾಂಗ್‌ ಅವರದು ಬಹಳ ದೊಡ್ಡ ಹೆಸರು, ʼ ಟ್ರೈನ್ ಟು ಬುಸಾನ್ʼ , ʼದಿ ಕಾಪ್‌ʼ, ʼದಿ ಡೆವಿಲ್‌ʼ  ಸೇರಿದಂತೆ ಹತ್ತಾರು ಕೊರಿಯಾನ್‌ ಸಿನಿಮಾಗಳಲ್ಲಿ ನಟಿಸಿರುವ ಮಾ ಡಾಂಗ್‌ ʼಸ್ಪಿರಿಟ್‌ʼ ಮೂಲಕ ಭಾರತ ಚಿತ್ರರಂಗಕ್ಕೆ ಬರಲಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತೀಯ ಹಾಗೂ ಚೈನೀಸ್‌ ಭಾಷೆಯಲ್ಲೂ ಸಿನಿಮಾ ರಿಲೀಸ್‌ ಆಗಲಿದ್ದು, ಟಾಲಿವುಡ್‌ ಚಿತ್ರರಂಗದ ಬಿಗ್‌ ಪ್ರಾಜೆಕ್ಟ್‌ ಇದಾಗಿರಲಿದೆ.

ಮೊದಲ ಬಾರಿಗೆ ಪ್ರಭಾಸ್‌ – ಸಂದೀಪ್‌ ಜೊತೆಯಾಗಿ ಕೆಲಸ ಮಾಡುತ್ತಿದ್ದು, ಚಿತ್ರದಲ್ಲಿ ಪ್ರಭಾಸ್‌ ಪೊಲೀಸ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮೃಣಾಲ್ ಠಾಕೂರ್, ರಶ್ಮಿಕಾ ಮಂದಣ್ಣ, ಕೀರ್ತಿ ಸುರೇಶ್‌ ಸಿನಿಮಾದಲ್ಲಿರಲಿದ್ದಾರೆ ಎನ್ನಲಾಗಿದ್ದು ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

 

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್‌ ನಟ “ಕೀರಿಕ್ಕಡನ್‌ ಜೋಸ್”‌ ವಿಧಿವಶ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.