Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು
Team Udayavani, Jul 8, 2024, 6:05 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಬಿಲ್ಲವರ್ ಪ್ರದೇಶದಲ್ಲಿ ಸೋಮವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನೆಯ ಶೋಧ ಕಾರ್ಯಾಚರಣೆಯ ನಂತರ ಭಯೋತ್ಪಾದಕರು ಮತ್ತು ಸೇನಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ವರದಿಯ ಪ್ರಕಾರ, ಭಯೋತ್ಪಾದಕರು ಬೆಟ್ಟದ ಮೇಲಿನಿಂದ ಸೇನಾ ವಾಹನದತ್ತ ಗುಂಡು ಹಾರಿಸಿದ್ದಾರೆ. ಅವರು ಸೇನಾ ವಾಹನದ ಮೇಲೆ ಗ್ರೆನೇಡ್ ಗಳನ್ನು ಎಸೆದರು ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲವು ವಾರಗಳಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗಿದೆ. ಜೂನ್ 11 ಮತ್ತು 12ರಂದು ಜಮ್ಮು ಕಾಶ್ಮೀರದ ದೊಡಾ ಜಿಲ್ಲೆಯಲ್ಲಿ ದಾಳಿ ನಡೆದಿತ್ತು. ಜೂನ್ 11ರಂದು ಚಟ್ಟಾರ್ಗಲ್ಲಾ ಚೆಕ್ ಪೋಸ್ಟ್ ಗೆ ಉಗ್ರರು ದಾಳಿ ನಡೆಸಿದ್ದು ಆರು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಜೂನ್ 12ರಂದು ಗಾಂಡೋಹ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದರು.
ಜೂನ್ 26 ರಂದು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜೊತೆಗೆ ಪೊಲೀಸರು ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಡುವೆ ಭಯೋತ್ಪಾದಕರನ್ನು ಕೊಲ್ಲಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.