Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್
ರೈತರು ರಾಜಕೀಯಕ್ಕೆ ಬರುವುದು ಅನಿವಾರ್ಯ, ರೈತ ಧ್ವನಿಯಾಗಿ ಸರ್ವೋದಯ ಪಕ್ಷ
Team Udayavani, Jul 8, 2024, 6:21 PM IST
ವಿಜಯಪುರ : ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯ ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಎಂದು ಕರ್ನಾಟಕ ಸರ್ವೋದಯ ಪಕ್ಷದ ವರಿಷ್ಠ ಚಾಮರಸಮ ಮಾಲಿ ಪಾಟೀಲ ಕಿಡಿ ಕಾರಿದರು.
ಸೋಮವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ವಿಜಯಪುರ ಜಿಲ್ಲೆಯ ಕಾರ್ಯಕಾರಿ ಸಮಿತಿಯಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಹರಿಹಾಯ್ದರು.
ಬಿಜೆಪಿ, ಕಾಂಗ್ರರೆಸ್, ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳು ಜನಹಿತದ ಕಾರ್ಯಕ್ರಮಗಳನ್ನು ಮಾಡದ ಕಾರಣ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದ ರೈತರೂ ಸಂಘಟಿತರಾಗಿ ರಾಜಕೀಯ ಪ್ರವೇಶ ಮಾಡುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಕರ್ನಾಟಕ ಸರ್ವೋದಯ ಪಕ್ಷದ ಮೂಲಕ ರೈತ ಹಿತ ಕಾಯುವ ಹಾಗೂ ರೈತರ ಧ್ವನಿಯಾಗಿ ಸರ್ವೋದಯ ಪಕ್ಷದ ಮೂಲಕ ರೈತರು ರಾಜಕೀಯ ಪ್ರವೇಶ ಅನಿವಾರ್ಯವಾಗಿದೆ ಎಂದರು.
ರೈತರು ಕೃಷಿ ಸಾಮಗ್ರಿಗಳು, ಯಂತ್ರೋಪಕರಣಗಳು ಸೇರಿದಂತೆ ತಾವು ಕೊಳ್ಳುವ ಎಲ್ಲ ವಸ್ತುಗಳಿಗೆ ತೆರಿಗೆ ಕಟ್ಟಲಾಗುತ್ತಿದೆ. ಅದರೆ ಸರ್ಕಾರಗಳು ರೈತರ ಹಿತ ಕಾಯುವ ಯಾವೊಂದು ಕಾರ್ಯಕ್ರಮಗಳನ್ನೂ ವಾಸ್ತವಿಕವಾಗಿ ಜಾರಿಗೆ ತರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಸರ್ಕಾರದಲ್ಲಿ ಕಮಿಷನ್ ಮಿತಿ ಮೀರಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ತಡೆಯುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ವಿಫಲವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಪರಿಶಿಷ್ಟ ಪಂಗಡದ ನಿಗಮದಲ್ಲಿ ಸ್ವಜಾತಿ ಜನರ ಅಭಿವೃದ್ಧಿಗೆ ಮೀಸಲಿದ್ದ ನೂರಾರು ಕೋಟಿ ರೂ. ಹಗರಣವಾಗಿದೆ. ಇತರೆ ನಿಗಮಗಳಲ್ಲೂ ಇದೇ ಪರಿಸ್ಥಿತಿ ಇಲ್ಲದಿಲ್ಲ ಎಂದು ದೂರಿದರು.
ಹೀಗಾಗಿ ಭ್ರಷ್ಟಾಚಾರದಲ್ಲಿ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರದ ಆಡಳಿತವೇನೂ ಭಿನ್ನವಾಗಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರು, ರೈತರ ಕೆಲಸ ಆಗುತ್ತಿಲ್ಲ. ಅಭಿವೃದ್ಧಿ ವಿಷಯದಲ್ಲೂ ಹಿನ್ನಡೆ ಆಗುತ್ತಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿರುವ ಪ್ರಣಾಳಿಕೆಗಳು ಈಡೇರುತ್ತಿಲ್ಲ, ಕೇಂದ್ರದ ಬಿಜೆಪಿ ಸರ್ಕಾರದ ಕಥೆಯೂ ಇದೆ ಆಗಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುತ್ತಲೇ ಘೋಷಿಸಿರುವ 3 ಲಕ್ಷ ಕೋಟಿ ಮನೆಗಳು ವಾಸ್ತವವಾಗಿ ಅನುಷ್ಠಾನ ಅಸಾಧ್ಯ. ಆದರೆ ಅವರು ನೀಡುವ ಹುಸಿ ಭರವಸೆಗಳು, ಘೋಷಿಸುವ ಘೋಷಣೆಗಳಿಗೆ ನಾವೆಲ್ಲ ಮರುಳಾಗುತ್ತೇವೆ ಎಂದು ವಿಷಾದಿಸಿದರು.
ಅಂಗನವಾಡಿ ನೌಕರರು ಸಂಘಟಿ ಹೋರಾಟದ ಮೂಲಕ ಮಾಸಿಕ 500 ರೂ. ವೇತನ ಹೆಚ್ಚಿಕೊಂಡಿದ್ದಾರೆ. ವೈದ್ಯರು, ಲಾರಿ ಮಾಲಿಕ-ಚಾಲಕರು ಅಷ್ಟೇ ಏಕೆ ಎಪಿಎಂಸಿ ಹಮಾಲರು ಕೂಡ ಸಂಘಠಿತ ಹೋರಾಟದ ಮೂಲಕ ತಮ್ಮ ಬೇಡಿಕೆ ಈಡೇರಿಸಿಕೊಳ್ಳುತ್ತಾರೆ.ಆದರೆ ಸಂಘಟಿತ ವ್ಯವಸ್ಥೆ ಇಲ್ಲದ ರೈತರು ಚುನಾವಣೆ ಸಂದರ್ಭದಲ್ಲಿ ಸಂಘಟಿತರಾಗದೇ ತಮಗೆ ತಿಳಿದ ರಾಜಕೀಯ ಪಕ್ಷಗಳನ್ನು ಬೆಂಬಲಿಸುತ್ತಿರುವುದೇ ಈ ದುಸ್ಥಿತಿಗೆ ಕಾರಣ. ಈ ದುಸ್ಥಿತಿಗೆ ಕಡಿವಾಣ ಹಾಕಲು ರೈತರು ಕೂಡ ರಾಜಕೀಯ ಪ್ರವೇಶಕ್ಕೆ ಸಂಘಟಿತರಾಗಬೇಕಿದೆ. ಇದಕ್ಕಾಗಿ ರಾಜ್ಯದಲ್ಲಿ ಆಡಳಿತದ ಲೋಪ ಪ್ರಶ್ನಿಸಲು ರೈತರು ಕರ್ನಾಟಕ ಸರ್ವೋದಯ ಪಕ್ಷವನ್ನು ಬಲಪಡಿಸುವುದು ಅನಿವಾರ್ಯವಾಗಿದೆ ಎಂದರು.
ರೈತ ಸಂಘದ ರಾಜ್ಯ ವರಿಷ್ಠ ಬಡಗಲಪುರ ನಾಗೇಂದ್ರ ಮಾತನಾಡಿ, ರೈತರು ಕೂಡ ರಾಜಕೀಯ ನಿಲುವು, ನಿರ್ಧಾರಗಳಲ್ಲಿ ಪಾಲ್ಗೊಳ್ಳುವುದು ಇಂದಿನ ಅಗತ್ಯವಾಗಿದೆ. ನೀತಿ ರೂಪಿಸುವಲ್ಲಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಯಲ್ಲಿ ನಡೆಸಲು ರೈತರ ರಾಜಕೀಯ ಪ್ರವೇಶ ಅನಿವಾರ್ಯವಾಗಿದೆ ಎಂದರು.ಸಂಘಟನೆಯ ಜಿಲ್ಲಾಧ್ಯಕ್ಷ ಶಂಕರಗೌಡ ಹಿರೇಗೌಡರ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.