Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ


Team Udayavani, Jul 8, 2024, 9:58 PM IST

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

ಸಿರುಗುಪ್ಪ: ತಾಲೂಕಿನಲ್ಲಿ ಕಳೆದ ವಾರ 2ದಿನ ಮಾತ್ರ ಹೊಸ ಪಡಿತರ ಚೀಟಿ ಮಾಡಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಹೊಸ ಪಡಿತರ ಚೀಟಿಗಾಗಿ ಪಡಿತರ ಇಲಾಖೆಗೆ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಹೊಸ ಪಡಿತರ ಚೀಟಿಯನ್ನು ಪಡೆಯಲು ನಗರದಲ್ಲಿರುವ ಆಹಾರ ಇಲಾಖೆಗೆ ಅಲೆದಾಡುತ್ತಿದ್ದಾರೆ.

ಸರ್ಕಾರ ಹೊಸ ಪಡಿತರ ಚೀಟಿ ಮಾಡಿಸಲು 2 ದಿನ ಮಾತ್ರ ಅವಕಾಶ ಮಾಡಿಕೊಟ್ಟಿದ್ದು, ಹೊಸ ಪಡಿತರ ಚೀಟಿ ಮಾಡಿಸಿಕೊಂಡ ತಾಲೂಕಿನ 27 ಗ್ರಾಮ ಪಂಚಾಯಿತಿ ವ್ಯಾಪ್ತಿಯ 84 ಗ್ರಾಮಗಳ ಜನರು ಪಡಿತರ ಇಲಾಖೆಗೆ ಬರುತ್ತಿದ್ದು, ಪಡಿತರ ಇಲಾಖೆಯ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಸದ್ಯ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಮನೆಗೆ ತೆರಳಿ ಪರಿಶೀಲನೆ ಮಾಡಿದ ನಂತರ ಹೊಸ ಪಡಿತರ ಚೀಟಿಯನ್ನು ನೀಡುವಂತೆ ಸರ್ಕಾರ ಆದೇಶ ನೀಡಿರುತ್ತದೆ.

ಆದರೆ ಸರ್ಕಾರದ ಈ ಆದೇಶದ ಬಗ್ಗೆ ಮಾಹಿತಿ ತಿಳಿಯದ ಸಾರ್ವಜನಿಕರು ಕಳೆದ 3-4 ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಆಹಾರ ಇಲಾಖೆಗೆ ಬರುವುದು ಸಾಮಾನ್ಯವಾಗಿದೆ.

ಹೊಸ ಪಡಿತರ ಚೀಟಿ ಮಾಡಿಸಿದ್ದು, ಪಡಿತರ ಚೀಟಿಯನ್ನು ನಮಗೆ ಕೊಡುತ್ತಾರೆ ಎಂದು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಆನ್‌ಲೈನ್ ಅಂಗಡಿಗಳ ಮಾಲೀಕರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿರುವುದರಿಂದ ಸಾರ್ವಜನಿಕರು ಮಾಡಬೇಕಾದ ಕೆಲಸ ಕಾರ್ಯಗಳನ್ನು ಬಿಟ್ಟು ನಗರದಲ್ಲಿರುವ ಆಹಾರ ಇಲಾಖೆಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾವು ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, ಹೊಸ ಪಡಿತರ ಚೀಟಿ ಪಡೆಯಲು ಕಛೇರಿಗೆ ಬಂದಿದ್ದೇವೆ, ಆದರೆ ಹೊಸ ಪಡಿತರ ಚೀಟಿ ಕೊಡಲು ಅಧಿಕಾರಿಗಳು ಮನೆಗೆ ಬಂದು ಪರಿಶೀಲನೆ ಮಾಡಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಬಂಡ್ರಾಳ್ ಗ್ರಾಮದ ಗೋವಿಂದ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಹೇಳಿಕೆ ಪಡೆದು ನಂತರ ಪಡಿತರ ಚೀಟಿಯನ್ನು ವಿತರಿಸುವಂತೆ ಸರ್ಕಾರದಿಂದ ಆದೇಶ ಬಂದಿದೆ. ಆದರೆ ಇದರ ಬಗ್ಗೆ ಮಾಹಿತಿ ತಿಳಿಯದ ಸಾರ್ವಜನಿಕರು ನಮ್ಮ ಕಛೇರಿಗೆ ಬರುತ್ತಿದ್ದಾರೆ ಎಂದು ಆಹಾರ ಇಲಾಖೆಯ ಶಿರಸ್ತೆದಾರ ಟಿ.ಮಹೇಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.