Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್ ಗುಂಡೂರಾವ್
Team Udayavani, Jul 8, 2024, 11:32 PM IST
ಬೆಂಗಳೂರು: ಡೆಂಗ್ಯೂ ಹೆಚ್ಚಳಕ್ಕೂ ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನಿಸಿದರು.
ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ ಡೆಂಗ್ಯೂ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೂಡ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನು ಗುರುತಿಸಿ ಅಲ್ಲಿಯ ನಿವಾಸಿಗಳನ್ನು ಎಚ್ಚರಿಸಿದ್ದೇನೆ ಎಂದರು.
2 ದಿನಗಳ ಪ್ರವಾಸದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಜಿಲ್ಲಾ ಪ್ರಗತಿ ಪರಿಶೀಲನ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದ್ದೇನೆ. ಹೀಗಿರುವಾಗ ಬಿಜೆಪಿ ನಾನು ಈಜುಕೊಳ್ಳದಲ್ಲಿ ಈಜಿದ್ದನ್ನೇ ಪ್ರಶ್ನೆ ಮಾಡಿದೆ. ಬಿಜೆಪಿಯವರಿಗೆ ಈಜು ಒಂದು ರೀತಿಯಲ್ಲಿ ಮೋಜು-ಮಸ್ತಿಯಾಗಿರಬಹುದು. ಆದರೆ ನನಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.