NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್
Team Udayavani, Jul 9, 2024, 12:47 AM IST
ಹೊಸದಿಲ್ಲಿ: ಮೇ 5ರಂದು ನಡೆದ ನೀಟ್-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯ ವ್ಯಾಪಕತೆ ಎಷ್ಟಿದೆ ಎಂಬುದನ್ನು ಅರಿತುಕೊಂಡ ಬಳಿಕವಷ್ಟೇ ನೀಟ್-ಯುಜಿ(ವೈದ್ಯ ಕೀಯ ಕಾಲೇಜುಗಳಿಗೆ ಪ್ರವೇಶ ಪಡೆ ಯುವ ಪರೀಕ್ಷೆ) ಪರೀಕ್ಷೆಯನ್ನು ರದ್ದು ಮಾಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು. ನೀಟ್ ಪರೀಕ್ಷೆ ರದ್ದು ಕೋರ್ಟ್ನ ಕೊನೆಯ ಆಯ್ಕೆಯಾಗಿ ರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೀಟ್ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಸೋಮವಾರ ಕೈಗೆತ್ತಿಕೊಂಡಿದೆ. ಪ್ರಶ್ನೆಪತ್ರಿಕೆ ಯು ಟೆಲಿಗ್ರಾಮ್, ವಾಟ್ಸ್ಆ್ಯಪ್ನಂಥ ಸಾಮಾಜಿಕ ಜಾಲತಾಣಗಳ ಮೂಲಕ ಆಗಿದ್ದರೆ, ಅದು ವ್ಯಾಪಕವಾಗಿರುತ್ತದೆ. ಈ ಕುರಿತು ಎಚ್ಚರಿಕೆಯ ಹೆಜ್ಜೆಯನ್ನಿಡಬೇಕಾದೆ ಎಂದು ಪೀಠ ಹೇಳಿತು.
ಸೋರಿಕೆಯು ವ್ಯಾಪಕವಾಗಿದ್ದರೆ ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಹಾಗಾಗಿ ಮರು ಪರೀಕ್ಷೆ ಕೈಗೊಳ್ಳುವುದು ಅನಿವಾ ರ್ಯ. ಸೋರಿಕೆ ಲಾಭ ಪಡೆದ ಅಭ್ಯರ್ಥಿ ಗಳನ್ನು ಗುರುತಿಸಲು ಸಾಧ್ಯ ವಾದರೆ ಮತ್ತು ಅವರ ಪ್ರಮಾಣದ ತೀರಾ ಚಿಕ್ಕ ದಾಗಿದ್ದರೆ ಮರು ಪರೀಕ್ಷೆ ಅಗ ತ್ಯವಿಲ್ಲ. ಪ್ರಶ್ನೆ ಪತ್ರಿಕೆ ಯಾವಾಗ ಸೋರಿಕೆ ಯಾಯಿತು? ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳ ಪ್ರಸರಣ ಹೇಗೆ ನಡೆಯಿತು? ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ನಡೆದ ನಡುವಿನ ಸಮಯದ ವ್ಯತ್ಯಾಸವೆಷ್ಟು ಎಂಬ ಕುರಿತು ಮಾಹಿತಿ ನೀಡುವಂತೆ ಎನ್ಟಿಎಗೆ ಪೀಠ ಮಾಹಿತಿ ಕೇಳಿತು. ಬಳಿಕ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.
ಸಿಐನಿಂದ ವರದಿ ಕೇಳಿದ ಪೀಠ
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ)ದಿಂದಲೂ ಪೀಠವು ವರದಿಯನ್ನು ಕೇಳಿದೆ. ತನಿಖೆಯು ಯಾವ ಹಂತದಲ್ಲಿದೆ ಹಾಗೂ ತನಿಖೆ ವೇಳೆ ಗೊತ್ತಾಗಿರುವ ಮಾಹಿತಿಯನ್ನು ಹಂಚಿ ಕೊಳ್ಳುವಂತೆ ಕೋರ್ಟ್ ವಿಚಾರಣೆ ವೇಳೆ ಸೂಚಿ ಸಿ ತು.
ನಾಳೆ ಮಾಹಿತಿಗೆ ಸೂಚನೆ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಗುರುತಿಸಲು ಕಳಂಕಿತ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಲು ಡೇಟಾ ವಿಶ್ಲೇಷಣೆಯನ್ನು ಬಳಸಲು ಸೈಬರ್ ಫೂರೆನ್ಸಿಕ್ಸ್ ಘಟಕದಿಂದ ಕಾರ್ಯಸಾಧ್ಯವೇ ಎಂಬುದನ್ನು ಸೇರಿ ಎಲ್ಲ ಮಾಹಿತಿಯನ್ನು ಜುಲೈ 10ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಸರಕಾರ ಮತ್ತು
ಎನ್ಟಿಎಗೆ ಸುಪ್ರೀಂ ಕೋರ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.