![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 9, 2024, 11:22 AM IST
ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ರಾಜತಾಂತ್ರಿಕ ಸಾಧನೆಯನ್ನು ಸಾಧಿಸಿದ್ದು, ರಷ್ಯಾದ ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಭಾರತೀಯರನ್ನು ಮರಳಿ ಕಳುಹಿಸುವ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಇದು ನನ್ನ ಕೆರಿಯರ್ನ ಬಿಗ್ ಬಜೆಟ್ ಚಿತ್ರ “ಕೃಷ್ಣಂ ಪ್ರಣಯ ಸಖಿ” ಬಗ್ಗೆ ಗಣೇಶ್ ಮಾತು
ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ(ಜುಲೈ 08) ರಾತ್ರಿ ನಡೆದ ಭೋಜನ ಕೂಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯರ ಬಿಡುಗಡೆ ಕುರಿತು ಚರ್ಚೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಪ್ರಧಾನಿ ಮೋದಿ ಅವರು ಸೋಮವಾರ ಸಂಜೆ ರಷ್ಯಾ ತಲುಪಿದ್ದರು. ಎರಡು ದಿನಗಳ ರಷ್ಯಾ ಭೇಟಿಗಾಗಿ ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಭಾರತೀಯ ಸಮುದಾಯ ಗಾರ್ಬಾ ನೃತ್ಯದ ಮೂಲಕ ಸ್ವಾಗತಿಸಿತ್ತು.
ರಷ್ಯಾ ಮತ್ತು ಉಕ್ರೈನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿರುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಷ್ಯಾ ಸೇನೆಯಲ್ಲಿ ನೇಮಕ ಮಾಡಿಕೊಂಡಿರುವ ಎಲ್ಲಾ ಭಾರತೀಯ ಪ್ರಜೆಗಳನ್ನು ಬಿಡುಗಡೆಗೊಳಿಸುವಂತೆ ವಿಷಯ ಪ್ರಸ್ತಾಪಿಸಲು ಭಾರತ ನಿರ್ಧರಿಸಿತ್ತು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.