ಸುಳ್ಯ ಪದವು: ಈ ಶಾಲೆಯಲ್ಲಿ ಗೌರವ ಶಿಕ್ಷಕರೇ ಖಾಯಂ ಶಿಕ್ಷಕರು!


Team Udayavani, Jul 9, 2024, 2:39 PM IST

ಸುಳ್ಯ ಪದವು: ಈ ಶಾಲೆಯಲ್ಲಿ ಗೌರವ ಶಿಕ್ಷಕರೇ ಖಾಯಂ ಶಿಕ್ಷಕರು!

ಸುಳ್ಯ ಪದವು: ಅನುದಾನಿತ ಶಾಲೆಗಳಲ್ಲಿ ತೆರವಾದ ಶಿಕ್ಷಕರ ಹುದ್ದೆಗಳಿಗೆ ಸರಕಾರ ಶಿಕ್ಷಕರ ನೇಮಕಾತಿ ಮಾಡದೆ ಇರುವುದರಿಂದ ಸುಳ್ಯಪದವಿನ ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿರಿಯ ಶಾಲೆಯಲ್ಲಿ ಗೌರವ ಶಿಕ್ಷಕರೇ ಪಾಠ ಪ್ರವಚನಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿ ನಡುವೆಯೂ ಈ ಕನ್ನಡ ಶಾಲೆಯಲ್ಲಿ 1ರಿಂದ 7ರ ವರೆಗೆ 180ರಷ್ಟು ವಿದ್ಯಾರ್ಥಿಗಳು
ವ್ಯಾಸಂಗ ಮಾಡುತ್ತಿದ್ದಾರೆ. 2021ರಲ್ಲಿ ಹಿ. ಪ್ರಾಥಮಿಕ ಶಾಲೆ ಪ್ರಾರಂಭಿಕ ಶಿಕ್ಷಕರು ನಿವೃತ್ತರಾಗಿ ಶೂನ್ಯ ಅಧ್ಯಾಪಕ ಶಾಲೆಯಾಗಿತ್ತು. ಅನಂತರ ತಾತ್ಕಾಲಿಕವಾಗಿ ಓರ್ವ ಶಿಕ್ಷಕರನ್ನು ಇಲಾಖೆ ನಿಯೋಜಿಸಿತ್ತು. ಇದೀಗ ಅವರು ವರ್ಗಾವಣೆಗೊಂಡಿರುವುದರಿಂದ ಈ ಶಾಲೆ ಮತ್ತೆ ಶೂನ್ಯ ಶಿಕ್ಷಕರ ಶಾಲೆಯಾಗಿದೆ.

ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ. ಪ್ರಾಥಮಿಕ ಶಾಲೆ 1955ರಲ್ಲಿ ಸ್ಥಾಪನೆ ಯಾಗಿ 69 ವರ್ಷಗಳು ಸಂದಿದೆ. ನೂರಾರು
ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಹೆಗ್ಗಳಿಕೆಯಿದೆ. ಮಕ್ಕಳ ವಿದ್ಯಾರ್ಜನೆಗೆ ಬೇಕಾದ ಶಾಲಾ ಕೊಠಡಿಗಳು, ಶೌಚಾಲಯಗಳು, ಪೀಠೊಪಕರಣಗಳು, ಆಟದ ಮೈದಾನ, ಆಟೋಟಗಳ ಸಲಕರಣೆ  ಮುಂತಾದ ಸೌಲಭ್ಯಗಳನ್ನು ಒದಗಿಸಿಕೊಂಡು ವಿದ್ಯಾಸಂಸ್ಥೆ ಬಂದಿದೆ.

ಕಳೆದ 27 ವರ್ಷಗಳಿಂದ ಹೊಸ ಶಿಕ್ಷಕರ ನೇಮಕಾತಿಗಳಿಗೆ ಇಲಾಖೆ ಅನುಮತಿ ದೊರಕದ ಕಾರಣ ಗೌರವ ಶಿಕ್ಷಕರ ವೇತನ ಪಾವತಿ ಮತ್ತು ನಿರ್ವಹಣ ವೆಚ್ಚ ಆಡಳಿತ ಮಂಡಳಿ ಭರಿಸುತ್ತಿದೆ. ಪ್ರಸ್ತುತ ಶಾಲೆಗೆ ಕೇರಳ ಕರ್ನಾಟಕ ಗಡಿ ಭಾಗವಾದ ಸುಳ್ಯಪದವು, ಕನ್ನಡ್ಕ, ಮೈಕುಳಿ, ಕಾಯರ್‌ಪದವು, ಶಬರಿ ನಗರ, ಅಜಡ್ಕ, ಕುಳದಪಾರೆ, ಪದಡ್ಕ ಮುಂತಾದ ಪ್ರದೇಶದ ವಿದ್ಯಾರ್ಥಿಗಳು
ವ್ಯಾಸಂಗಕ್ಕಾಗಿ ಬರುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲೆಗಳಿಗೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆಯೂ ಇದೆ.

ಮಕ್ಕಳ ಹಕ್ಕು ಕಾಯ್ದೆ ಪ್ರಕಾರ ಪ್ರತೀ ವಿದ್ಯಾರ್ಥಿಗೂ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯವಾಗಿದೆ. ಆದರೆ ಇಲ್ಲಿ ಸರಕಾರಿ ಶಿಕ್ಷಕರು ಇಲ್ಲದೆ ಇರುವುದು ವಿಪರ್ಯಾಸ. ಖಾಯಂ ಶಿಕ್ಷಕರನ್ನು ನೇಮಿಸಿ ಸುವಂತೆ ಪೋಷಕರು ಆಗ್ರಹಿಸಿದ್ದಾರೆ.

ಎಲ್‌  ಕೆ.ಜಿ., ಯು ಕೆ.ಜಿ. ಆರಂಭಿಸಲು ಆಗ್ರಹ
ಪ್ರಸ್ತುತ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಏಳು ಮಂದಿ ಅರ್ಹ ಗೌರವ ಶಿಕ್ಷಕರನ್ನು ಆಡಳಿತ ಮಂಡಳಿ ನೇಮಿಸಿ ಪಾಠ ಪ್ರವಚನಗಳಲ್ಲಿ ತೊಡಗಿಸಿದೆ. ಮಕ್ಕಳ ಪೋಷಕರು ಮತ್ತು ವಿದ್ಯಾಭಿಮಾನಿಳ ಒತ್ತಾಯದ ಮೇರೆಗೆ ಎಲ್‌ ಕೆ ಜಿ ಪ್ರಾರಂಭಿಸಲು
ಚಿಂತನೆ ನಡೆದಿದೆ.

ಅನುದಾನಿತ ಶಾಲೆಗಳಿಗೂ ಶಿಕ್ಷಕರ ನೇಮಕ ಮಾಡಿ
ಕೇರಳ ಕರ್ನಾಟಕದ ಗಡಿ ಭಾಗದಲ್ಲಿ ರುವ ಈ ಶಾಲೆಯಲ್ಲಿ 184 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಗೌರವ ಶಿಕ್ಷಕರನ್ನು ನೇಮಕ ಮಾಡಿ ವೇತನ ಪಾವತಿಸಲಾಗುತ್ತಿದೆ. ಸರಕಾರ ಅನುದಾನಿತ ಶಾಲೆಗಳಿಗೂ ಶಿಕ್ಷಕರ ನೇಮಕಾತಿ ಮಾಡಿ ಸಂಬಳ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು.
*ಎಚ್‌.ಡಿ. ಶಿವರಾಂ,
ಅಧ್ಯಕ್ಷರು ಸರ್ವೋದಯವಿದ್ಯಾಸಂಸ್ಥೆಗಳು, ಸುಳ್ಯ ಪದವು

*ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.