Manipal Hospitals; ರಂಗಮಂಚ್- ಜೀವನದ ಸುವರ್ಣ ವರ್ಷಗಳನ್ನು ಆಚರಿಸುವ ಸಾಂಸ್ಕೃತಿಕ ಸಂಜೆ


Team Udayavani, Jul 9, 2024, 9:21 PM IST

kmc

ಮಲ್ಲೇಶ್ವರಂ: ಮಲ್ಲೇಶ್ವರಂನ ಮಣಿಪಾಲ ಆಸ್ಪತ್ರೆಯು, ಮಣಿಪಾಲ ವೃದ್ದರ ಮೈತ್ರಿ ಬ್ಯಾನರ್ ಅಡಿಯಲ್ಲಿ, ದಿ ಸೀನಿಯರ್ ಸೆಂಟ್ರಲ್ ಸಹಯೋಗದೊಂದಿಗೆ “ರಂಗಮಂಚ್” ಎನ್ನುವ ಒಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಹಿರಿಯರಿಗೆ ಅವರ ವೃದ್ಧಾಪ್ಯದಲ್ಲಿ ಜೀವನದ ಸಂತೋಷವನ್ನು ಸಂಭ್ರಮಿಸಲು ಮತ್ತು ಅವರ ನೋವು ಅಥವಾ ಆರೋಗ್ಯ ಸಮಸ್ಯೆಗಳ ಬಗ್ಗೆ ಚಿಂತಿಸದೆ ಸಂಭ್ರಮಿಸಿಲು ಪ್ರೋತ್ಸಾಹಿಸಿತು.

ಮಣಿಪಾಲ ವೃದ್ದರ ಮೈತ್ರಿಯು ಅವರ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಸುಧಾರಿಸಲು ಹಿರಿಯರ ಆರೈಕೆ ಕಾರ್ಯಕ್ರಮವನ್ನು ಆರಂಭಿಸಿದೆ. ಕಾರ್ಯಕ್ರಮದಲ್ಲಿ ನೆರೆಹೊರೆಯ ಸುಮಾರು 200 ಹಿರಿಯ ನಿವಾಸಿಗಳು ಸೇರಿದರು.  ಸಂಗೀತ, ನೃತ್ಯ ಮತ್ತು ಫ್ಯಾಷನ್ ಶೋನಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಈ ಸಮಾರಂಭದಲ್ಲಿ ನಟಿ ಧನ್ಯಾ ರಾಮ್ ಕುಮಾರ್ ಭಾಗವಹಿಸಿದ್ದರು. ಡಾ. ನಿರಂಜನ್ ರೈ, ಆಸ್ಪತ್ರೆ ನಿರ್ದೇಶಕ, ಮಣಿಪಾಲ್ ಆಸ್ಪತ್ರೆ ಮಲ್ಲೇಶ್ವರ, ಡಾ. ಭಾವನಾ ಬದರಿನಾರಾಯಣ್, ರೀಜನಲ್ ಹೆಡ್ – ಮಾರ್ಕೆಟಿಂಗ್, ಮಣಿಪಾಲ್ ಆಸ್ಪತ್ರೆಗಳು ಉಪಸ್ಥಿತರಿದ್ದರು

ಉಪಕ್ರಮದ ಕುರಿತು ಮಾತನಾಡಿದ ಡಾ. ನಿರಂಜನ ರೈ, “ಮಣಿಪಾಲ ವೃದ್ದರ ಮೈತ್ರಿಯೊಂದಿಗೆ, ಮಲ್ಲೇಶ್ವರಂನ ಮಣಿಪಾಲ ಆಸ್ಪತ್ರೆಯಲ್ಲಿ ನಮ್ಮ ಗುರಿಯು ಹಿರಿಯ ನಾಗರಿಕರಿಗೆ ಸಹಾಯದ ಹಸ್ತ ಅಥವಾ ಕುಟುಂಬದ ಸದಸ್ಯರಾಗಿ ಅವರಿಗೆ ಬೆಂಬಲ ಮತ್ತು ಅನುಕೂಲಕರ ವಾತಾವರಣವನ್ನು ನೀಡುವುದು. ತಮ್ಮ ಆರೋಗ್ಯದ ಸಮಸ್ಯೆಗಳು ಮತ್ತು ಚಿಂತೆಗಳನ್ನು ಬದಿಗಿಟ್ಟು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆಯನ್ನು ಸಂತೋಷದಿಂದ ಪ್ರದರ್ಶಿಸಲು ಈ ವೇದಿಕೆ ಬೆಂಬಲ ನೀಡಿದೆ” ಎಂದರು.

ಧನ್ಯಾ ರಾಮ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸುತ್ತಾ ಮಾತನಾಡಿ, “ಈ ಕಾರ್ಯಕ್ರಮದ ಭಾಗವಾಗಲು ನಾನು ಉತ್ಸುಕನಾಗಿದ್ದೇನೆ. ಈ ವಯಸ್ಸಿನಲ್ಲಿ ನೀವು ತೋರಿಸುತ್ತಿರುವ ಪರಿಶ್ರಮ ಮತ್ತು ದೃಢ ಸಂಕಲ್ಪ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರಲ್ಲಿ ನನ್ನ ಅಜ್ಜ ಮತ್ತು ಅಜ್ಜಿಯ ಪ್ರತಿಬಿಂಬವನ್ನು ನಾನು ನೋಡುತ್ತಿದ್ದೇನೆ. ನಿಮ್ಮ ಸುಂದರವಾದ ನೃತ್ಯಗಳು ಮತ್ತು ಉತ್ಸಾಹಭರಿತ ನಡಿಗೆಗಳು ನನ್ನ ಅಜ್ಜ ಅಜ್ಜಿಯ ನೆನಪನ್ನು ಮರುಕಳಿಸುವಂತೆ ಮಾಡಿತು. ಈ ವಿಶೇಷ ಸಂಜೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು” ಎಂದರು.

ಸೀನಿಯರ್ ಕೇರ್ ಪ್ರೋಗ್ರಾಮ್ ನ ಭಾಗವಾಗಿ, ಮಲ್ಲೇಶ್ವರಂನ ಮಣಿಪಾಲ್ ಆಸ್ಪತ್ರೆಯು ಸೀನಿಯರ್ ನೇಬರ್ ಹುಡ್ ಡೆಸ್ಕ್ ಸ್ಥಾಪಿಸಿದೆ. ಇದು ಹಿರಿಯರಿಗೆ ಅವರ ಬದುಕಿನಲ್ಲಿ ಸಿಗಬೇಕಾದ ಎಲ್ಲ ರೀತಿಯ ಸಮಗ್ರ ಬೆಂಬಲವನ್ನು ನೀಡುತ್ತದೆ. ಅಪಾಯಿಂಟ್ಮೆಂಟ್ಗಳನ್ನು ಕಾಯ್ದಿರಿಸಲು ವಿಶೇಷ ಸಹಾಯವಾಣಿ ಇದೆ, ಜೊತೆಗೆ ವಿಶಿಷ್ಟವಾದ ಐಡಿ ಕಾರ್ಡ್ ನೊಂದಿಗೆ ಹೊರರೋಗಿಗಳ ಚಿಕಿತ್ಸೆಗಳು, ಡಿಸ್ಚಾರ್ಜ್ ನಂತರದ ಆರೈಕೆ, ಹೋಮ್ಕೇರ್ ಸೇವೆಗಳು ಮತ್ತು ಹಾಗೆಯೇ ವಿನಂತಿಯ ಮೇರೆಗೆ ಲಭ್ಯವಿರುವ ಪಿಕ್-ಅಪ್ ಮತ್ತು ಡ್ರಾಪ್-ಆಫ್ ಸೇವೆಯನ್ನು ನೀಡುವ ಮೂಲಕ ನಿರಂತರವಾಗಿ ಅನುಕೂಲಕರ ಬೆಂಬಲವನ್ನು ಪಡೆಯಲು ಸಹಾಯ ಮಾಡುತ್ತದೆ. ಒಂದೆಡೆ ಮಲ್ಲೇಶ್ವರಂನ ಮಣಿಪಾಲ್ ಆಸ್ಪತ್ರೆಯು ಹಿರಿಯ ಜೀವಗಳ ಆರೈಕೆಯ ಬಗ್ಗೆ ಆದ್ಯತೆ ನೀಡುತ್ತಿದ್ದರೆ, ಮತ್ತೊಂದೆಡೆ ಮಣಿಪಾಲ ವೃದ್ದರ ಮೈತ್ರಿ ಅವರ ಆರೋಗ್ಯದ ಅಗತ್ಯಗಳನ್ನು ಕಾಳಜಿ ಮತ್ತು ಸಹಾನುಭೂತಿಯಿಂದ ಪೂರೈಸುವುದನ್ನು ಖಚಿತಪಡಿಸುತ್ತದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.