![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 10, 2024, 5:28 AM IST
ನವದೆಹಲಿ: ಉತ್ತರಾಖಂಡ ಸರ್ಕಾರವು ಪರವಾನಗಿ ನಿಷೇಧಗೊಳಿಸಿರುವ ತನ್ನ 14 ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿರುವುದಾಗಿ ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆ ಮಂಗಳವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಪತಂಜಲಿಯ 14 ಉತ್ಪನ್ನಗಳ ದಕ್ಷತೆ ಬಗ್ಗೆ ಸುಳ್ಳು ಜಾಹೀರಾತು ನೀಡಿ ಮಾರಾಟ ಮಾಡುತ್ತಿದ್ದ ಕಾರಣ ಅವುಗಳ ಪರವಾನಗಿಯನ್ನು ಉತ್ತರಾಖಂಡ ಸರ್ಕಾರ ರದ್ದುಪಡಿಸಿತ್ತು. ಈ ಉತ್ಪನ್ನಗಳ ಬಗ್ಗೆ ಜಾಹೀರಾತು ಪ್ರಸಾರವಾಗುತ್ತಿಲ್ಲ, ಮಾರಾಟ ಮಾಡುತ್ತಿಲ್ಲ ಎಂಬುದನ್ನು ಖಾತರಿ ಪಡಿಸಿಕೊಂಡು 2 ವಾರದ ಒಳಗೆ ಅಫಿಡವಿಟ್ ಸಲ್ಲಿಸುವಂತೆ ಪತಂಜಲಿ ಸಂಸ್ಥೆಗೆ ಸುಪ್ರೀಂ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಪೀಠದ ಮುಂದೆ ಪತಂಜಲಿ ಸಂಸ್ಥೆ ಅಫಿಡವಿಟ್ ಸಲ್ಲಿಸಿದೆ.
ಈ ವೇಳೆ ಸಂಸ್ಥೆಯ 5,606 ಫ್ರಾಂಚೈಸಿಗಳಿಗೂ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿರ್ದೇಶಿಸಿದೆ ಹಾಗೂ ಮಾಧ್ಯಮಗಳಿಗೂ ಈ ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತು ಪ್ರದರ್ಶಿಸದಂತೆ ತಿಳಿಸಿರುವುದಾಗಿ ಹೇಳಿದೆ ಎಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.