Raichur: ಶಾಸಕ ದದ್ದಲ್ ಅಳಿಯನ ತೀವ್ರ ವಿಚಾರಣೆ, ಕಾರುಗಳ ತಪಾಸಣೆ
Team Udayavani, Jul 10, 2024, 1:11 PM IST
ರಾಯಚೂರು: ಕಾಂಗ್ರೆಸ್ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಶಾಸಕರ ಪತ್ನಿ, ಅಳಿಯನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 7 ಗಂಟೆಗೆ ಶುರುವಾದ ದಾಳಿ ಸತತ 6 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿದೆ.
ಶಾಸಕ ಬಸನಗೌಡ ದದ್ದಲ್ ಬೆಂಗಳೂರು ನಿವಾಸದಲ್ಲಿ ಉಳಿದುಕೊಂಡಿದ್ದು, ನಗರದ ಮನೆಯಲ್ಲಿ ಅವರ ಪತ್ನಿ & ಅಳಿಯ ಸೇರಿ ಕೆಲಸಗಾರರು ಮಾತ್ರ ಇದ್ದರು.
ಅಧಿಕಾರಿಗಳು ದದ್ದಲ್ ಅಳಿಯ ಚನ್ನಬಸವರನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಅವರನ್ನು ಒಂಟಿಯಾಗಿ ಬಿಡದೆ ವಿಚಾರಣೆ ಮಾಡುತ್ತಿದ್ದಾರೆ. ಅಧಿಕಾರಿಗಳು ಮನೆಯ ಸದಸ್ಯರ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ ಬಸನಗೌಡ ದದ್ದಲ್ ರ ಕಾರುಗಳನ್ನು ಕೂಡ ಶೋಧಿಸಲಾಗಿದೆ.
ಇನೋವಾ ಕ್ರಿಸ್ಟಾ, ಮಹಿಂದ್ರಾ ಸ್ಕಾರ್ಪಿಯೊ ಕಾರುಗಳಲ್ಲಿ ತಪಾಸಣೆ ಮಾಡಲಾಯಿತು. ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಧಿಕಾರಿಗಳ ಜೊತೆ ಸಿ.ಆರ್.ಪಿ.ಎಫ್. ಭದ್ರತಾ ಸಿಬ್ಬಂದಿ ಕೂಡ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.