IRS ಮಹಿಳಾ ಅಧಿಕಾರಿ ಈಗ ಪುರುಷ! ಲಿಂಗ ಬದಲಾವಣೆಗೆ ಅನುಮತಿ ಕೊಟ್ಟ ಹಣಕಾಸು ಇಲಾಖೆ!

ಇತಿಹಾಸದಲ್ಲಿ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿರುವ  ಮೊದಲ ನಿದರ್ಶನ ಇದಾಗಿದೆ.

Team Udayavani, Jul 10, 2024, 3:49 PM IST

11

ನವದೆಹಲಿ: ಭಾರತದಲ್ಲಿ ಲಿಂಗ ಬದಲಾವಣೆ ಮಾಡಿ ಹೆಸರು ಬದಲಾಯಿಸಿಕೊಂಡು ಸಮಾಜದಲ್ಲಿ ಜೀವಿಸುತ್ತಿರುವವರು ಅನೇಕರು ಇದ್ದಾರೆ. ಆದರೆ ಇದೇ ಮೊದಲ ಬಾರಿಗೆ ಸರ್ಕಾರದ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರಿಗೆ ಪುರುಷನಾಗಿ ಲಿಂಗ ಬದಲಾವಣೆ  ಹಾಗೂ ಹೆಸರು ಬದಲಾಯಿಸಲು ಅನುಮತಿ ನೀಡಲಾಗಿದೆ.

ಹೈದರಾಬಾದ್ ಮೂಲದ ಭಾರತೀಯ ಕಂದಾಯ ಸೇವೆಯಲ್ಲಿರುವ (IRS) ಮಹಿಳಾ ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಯ ಇತಿಹಾಸದಲ್ಲಿ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿರುವ  ಮೊದಲ ನಿದರ್ಶನ ಇದಾಗಿದೆ.

ಕಸ್ಟಮ್ಸ್ ಎಕ್ಸೈಸ್ ಆಂಡ್ ಸರ್ವೀಸ್ ಟ್ಯಾಕ್ ಅಪೆಲೇಟ್ ಟ್ರಿಬ್ಯುನಲ್‌ನ ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನಿಯೋಜನೆಗೊಂಡಿರುವ ಎಂ ಅನುಸೂಯಾ(35) ಅವರು ತಮ್ಮ ಹೆಸರನ್ನು ಎಂ ಅನುಕತಿರ್ ಸೂರ್ಯ ಎಂದು ಮತ್ತು ಲಿಂಗವನ್ನು ಮಹಿಳೆಯಿಂದ ಪುರುಷನಾಗಿ ಬದಲಾಯಿಸಲು ಹಣಕಾಸು ಇಲಾಖೆಗೆ ಮನವಿ ಸಲ್ಲಿಸಿದ್ದರು.

ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ಹಣಕಾಸು ಇಲಾಖೆ, ಲಿಂಗ ಹಾಗೂ ಹೆಸರು ಬದಲಾವಣೆಗೆ ಅನುಮತಿ ನೀಡಿದೆ. ಕೇಂದ್ರ ನಾಗರಿಕ ಸೇವಾ ನಿಯಮಗಳಲ್ಲಿ ಇಂತಹದ್ದೊಂದು ಬೆಳವಣಿಗೆ ನಡೆದಿರುವುದು ಇದೇ ಮೊದಲು. 

ಜು.9 ರಂದು(ಮಂಗಳವಾರ) ಅನುಸೂಯಾ ಅವರ ಹೆಸರು ಹಾಗೂ ಲಿಂಗ ಎಂ.ಅನುಕತಿರ್‌ ಎಂದು ಬದಲಾಯಿಸುವ ಬಗ್ಗೆ ಹಣಕಾಸು ಇಲಾಖೆ ಆದೇಶಿಸಿದೆ. ಅವರ ಸರ್ಕಾರಿ ದಾಖಲೆಗಳಲ್ಲೂ ವಿವರಗಳ ಬದಲಾವಣೆ ಮಾಡಲಾಗಿದೆ.

“ಮಿಸ್ ಎಂ ಅನುಸೂಯ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ಮುಂದೆ ಅವರನ್ನು’ಮಿ. ಎಂ ಅನುಕತಿರ್ ಸೂರ್ಯ’ ಎಂದು ಎಲ್ಲ ಅಧಿಕೃತ ದಾಖಲೆಗಳಲ್ಲಿ  ಗುರುತಿಸಲಾಗುವುದು ಎಂದು ಇಲಾಖೆ ಹೇಳಿದೆ.

ಯಾರು ಈ ಅನುಕತಿರ್ ಸೂರ್ಯ? : 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆ ಬಳಿಕ 2018 ರಲ್ಲಿ ಸಹಾಯಕ ಆಯುಕ್ತರಾಗಿ ಬಡ್ತಿ ಪಡೆದರು ಎಂದು ಅವರ ಲಿಂಕ್ಡ್ಇನ್ ಪ್ರೊಫೈಲ್ ನಲ್ಲಿ ತಿಳಿಸಲಾಗಿದೆ.

ಆ ಬಳಿಕ ಅವರು ಕಳೆದ ವರ್ಷ(2023)ಸಿಇಎಸ್‌ಟಿಎಟಿ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನಿಯೋಜನೆಗೊಂಡಿದ್ದರು.

ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಬ್ಯಾಚುಲರ್ ಪದವಿ ಪಡೆದಿದ್ದರು. ಆ ನಂತರ ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾವನ್ನು ಮಾಡಿದ್ದರು.

 2014ರ ಏಪ್ರಿಲ್‌ 15ರಂದು ಸುಪ್ರೀಂ ಕೋರ್ಟ್‌ ನಾಲ್ಸಾ ಪ್ರಕರಣದಲ್ಲಿ ತೃತೀಯ ಲಿಂಗಕ್ಕೆ ಮಾನ್ಯತೆ ನೀಡಿತ್ತು. ಈ ಪ್ರಕರಣದಲ್ಲಿ ಕೋರ್ಟ್‌ ಲಿಂಗ ಬದಲಾವಣೆ ವೈಯಕ್ತಿಕ ಆಯ್ಕೆಯಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.