BMW Hit-And-Run Case: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
Team Udayavani, Jul 10, 2024, 5:20 PM IST
ಮುಂಬೈ: ಕಳೆದ ಭಾನುವಾರ ಮಹಿಳೆಯೊಬ್ಬರನ್ನು ಬಲಿತೆಗೆದುಕೊಂಡ ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಘಟನೆಯಲ್ಲಿ ಪುತ್ರನನ್ನು ಬಂಧಿಸಿದ ಒಂದು ದಿನದ ನಂತರ ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜೇಶ್ ಶಾ ಅವರನ್ನು ಪಕ್ಷದ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಮುಖ್ಯಮಂತ್ರಿ ಶಿಂಧೆ, ಈ ಪ್ರಕರಣದಲ್ಲಿ ಸರಕಾರ ಸಂತ್ರಸ್ತ ಕುಟುಂಬದ ಜೊತೆಗಿದೆ, ಅಪರಾಧಿಗಳಿಗೆ ನಮ್ಮ ಸರಕಾರ ಬೆಂಬಲ ನೀಡಲ್ಲ ಅಲ್ಲದೆ ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಯಾವುದೇ ಆರ್ಥಿಕ ಸಹಾಯವನ್ನು ನೀಡಲು ಸರಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಜುಲೈ 7ರ ಭಾನುವಾರ ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದರು ಅಲ್ಲದೆ ಅಪಘಾತ ನಡೆದ ಸ್ಥಳದಲ್ಲಿ ಮಿಹಿರ್ ಕಾರು ನಿಲ್ಲಿಸದೆ ಹತ್ತು ಕಿಲೋಮೀಟರ್ ದೂರ ಚಲಾಯಿಸಿ ಬಳಿಕ ಕಾರು ಚಾಲಕನಿಗೆ ನೀಡಿ ನಾಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ರಾಜೇಶ್ ಶಾ ಹಾಗೂ ಕಾರು ಚಾಲಕನನ್ನು ಬಂಧಿಸಿದ್ದರು.
ಇದಾದ ಬಳಿಕ ಆರೋಪಿ ಮಿಹಿರ್ ಶಾ ನ ಬಂಧನಕ್ಕೆ ಮುಂಬೈ ಪೊಲೀಸರು ಬಲೆ ಬಿಸಿದ್ದರು. ಆದರೆ ಆತನ ಪತ್ತೆಯಾಗಲಿಲ್ಲ ಇದಾದ ಬಳಿಕ ಮಂಗಳವಾರ (ಜುಲೈ 9) ರಂದು ಮುಂಬೈ ಪೊಲೀಸರು ಮಿಹಿರ್ ನನ್ನು ಬಂಧಿಸಿದ್ದರು. ಇದಾದ ಒಂದು ದಿನದ ಬಳಿಕ ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉಪನಾಯಕ ಸ್ಥಾನದಿಂದ ರಾಜೇಶ್ ಶಾ ಅವರನ್ನು ವಜಾಗೊಳಿಸಿದ್ದಾರೆ.
ಜುಲೈ 16 ರವರೆಗೆ ಮಿಹಿರ್ ಶಾಗೆ ಪೊಲೀಸ್ ಕಸ್ಟಡಿ
ಮಂಗಳವಾರ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಮಿಹಿರ್ ಶಾ ನಿಗೆ ಜುಲೈ 16 ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಮಿಹಿರ್ ನನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ: Dandeli ತಡೆಬೇಲಿ ದಾಟಿ ನದಿಗಿಳಿಯುತ್ತಿರುವ ಜನತೆ: ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.